Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin D Deficiency: ಚಳಿಗಾಲದಲ್ಲಿ ಕೀಲು ನೋವು ಕಾಡದಿರಲು, ಈಗಿನಿಂದಲೇ ಈ ಆಹಾರಗಳನ್ನು ಪ್ರತಿದಿನ ಸೇವಿಸಿ

ಚಳಿಗಾಲದಲ್ಲಿ ಸಾಕಷ್ಟು ಜನರಲ್ಲಿ ಮೊಣಕಾಲು ನೋವು, ಕೀಲು ನೋವು ಮುಂತಾದ ಸಮಸ್ಯೆಗಳು ಕಂಡುಬರುತ್ತದೆ. ಆದರಿಂದ ಈ ಸಮಸ್ಯೆ ಕಾಡಲು ಕಾರಣವೇನು? ಹಾಗೂ ಯಾವ ರೀತಿ ನಿವಾರಿಸಬಹುದು? ಎಂಬ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿ ತಿಳಿದುಕೊಳ್ಳಿ.

Vitamin D Deficiency: ಚಳಿಗಾಲದಲ್ಲಿ ಕೀಲು ನೋವು ಕಾಡದಿರಲು, ಈಗಿನಿಂದಲೇ ಈ ಆಹಾರಗಳನ್ನು ಪ್ರತಿದಿನ ಸೇವಿಸಿ
Vitamin D DeficiencyImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Nov 10, 2023 | 5:08 PM

ಚಳಿಗಾಲದಲ್ಲಿ ಬಿಸಿಲು ಕಡಿಮೆ ಇರುವುದರಿಂದ ಸಾಕಷ್ಟು ಜನರಲ್ಲಿ ವಿಟಮಿನ್​​ ಡಿ ಕೊರತೆ ಕಂಡುಬರುತ್ತದೆ. ಈ ವಿಟಮಿನ್ ದೇಹದಲ್ಲಿ ಕ್ಯಾಲ್ಸಿಯಂ ಮತ್ತು ರಂಜಕವನ್ನು ಹೀರಿಕೊಳ್ಳಲು ಬಳಸಲಾಗುತ್ತದೆ. ತಜ್ಞರ ಪ್ರಕಾರ, ದೇಹದಲ್ಲಿ ವಿಟಮಿನ್ ಡಿ ಮಟ್ಟ ಕಡಿಮೆಯಾದರೆ, ಕೀಲುಗಳಲ್ಲಿ ನೋವು ಮಾತ್ರವಲ್ಲದೆ ರೋಗನಿರೋಧಕ ಶಕ್ತಿಯೂ ಕಡಿಮೆಯಾಗುತ್ತದೆ. ಆದ್ದರಿಂದ, ಈ ಅಗತ್ಯ ವಿಟಮಿನ್ ಸೇವನೆಯನ್ನು ಹೆಚ್ಚಿಸುವುದು ಮುಖ್ಯವಾಗಿದೆ. ಈಗಿನಿಂದಲೇ ಈ ಕೆಲವು ಆಹಾರಗಳನ್ನು ತಿನ್ನುವ ಮೂಲಕ ನೀವು ವಿಟಮಿನ್ ಡಿ ಕೊರತೆಯು ಕಾಡದಂತೆ ನೋಡಿಕೊಳ್ಳಬಹುದಾಗಿದೆ. ಜೊತೆಗೆ ಚಳಿಗಾಲದಲ್ಲಿ ನೀವು ಆರೋಗ್ಯವಾಗಿ ಮತ್ತು ಫಿಟ್ ಆಗಿರಬಹುದು. ಚಳಿಗಾಲದಲ್ಲಿ ಸೂರ್ಯನ ಬೆಳಕು ಇಲ್ಲದಿದ್ದರೂ ಸಹ, ಈ ಹಣ್ಣುಗಳು ಮತ್ತು ತರಕಾರಿ ಸೇವನೆಯೊಂದಿಗೆ ದೇಹದಲ್ಲಿ ವಿಟಮಿನ್​​ ಡಿ ಹೆಚ್ಚಿಸಿಕೊಳ್ಳಬಹುದು.

ಸೂರ್ಯನ ಕಿರಣದ ಹೊರತಾಗಿ ವಿಟಮಿನ್ ಡಿ ಹೇರಳವಾಗಿರುವ ಆಹಾರಗಳು:

ಹಾಲು ಮತ್ತು ಮೊಸರು:

ವಿಟಮಿನ್ ಡಿ ಯ ಅತ್ಯುತ್ತಮ ಮೂಲವೆಂದರೆ ಸೂರ್ಯನ ಬೆಳಕು . ಇದಲ್ಲದೇ ಡೈರಿ ಉತ್ಪನ್ನಗಳ ಸೇವನೆಯಿಂದ ನೀವು ವಿಟಮಿನ್ ಡಿ ಕೊರತೆಯನ್ನು ನೀಗಿಸಬಹುದು. ಆದ್ದರಿಂದ ಚಳಿಗಾಲದಲ್ಲಿ ಹಾಲು ಮತ್ತು ಮೊಸರು ಸೇವಿಸಲು ಮರೆಯದಿರಿ ಎಂದು ದೆಹಲಿಯ ಡಾ.ದೀಪಕ್ ಸುಮನ್ ಸಲಹೆ ನೀಡುತ್ತಾರೆ.

ಕಿತ್ತಳೆ ಹಣ್ಣು ಸೇವಿಸಿ:

ಕಿತ್ತಳೆಯಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಡಿ ಸಮೃದ್ಧವಾಗಿದೆ. ಚಳಿಗಾಲದಲ್ಲಿ ಪ್ರತಿದಿನ ಒಂದು ಅಥವಾ ಎರಡು ಕಿತ್ತಳೆ ತಿನ್ನಿರಿ. ವಿಶೇಷವಾಗಿ ಚಳಿಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಗೆ ಕಿತ್ತಳೆ ಹಣ್ಣು ಉತ್ತಮ ಔಷಧಿಯಾಗಿದೆ. ಯಾಕೆಂದರೆ ಕಿತ್ತಳೆ ಹಣ್ಣು ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಧುಮೇಹ ಶಾಶ್ವತವಾಗಿ ಹತೋಟಿಯಲ್ಲಿಟ್ಟುಕೊಳ್ಳಲು ನೀವು ಮಾಡಬೇಕಾಗಿರುವುದು ಇಷ್ಟೇ!

ಸೇಬು ಹಣ್ಣು:

ಪ್ರತಿದಿನ ಸೇಬು ತಿನ್ನುವುದು ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ ವಿಟಮಿನ್ ಡಿ ಮಾತ್ರವಲ್ಲದೆ ಸಿ ಮತ್ತು ಎ ನಂತಹ ಪೋಷಕಾಂಶಗಳೂ ಇವೆ. ಸೇಬನ್ನು ಸೇವಿಸುವುದರಿಂದ ದೇಹದಲ್ಲಿರುವ ರಕ್ತಹೀನತೆಯೂ ದೂರವಾಗುತ್ತದೆ.

ಅನಾನಸ್ ಸೇವಿಸಿ:

ದೇಹದಲ್ಲಿ ವಿಟಮಿನ್ ಸಿ ಮತ್ತು ಡಿ ಕೊರತೆಗಾಗಿ ನೀವು ಅನಾನಸ್ ಸೇವಿಸಬಹುದು. ಜೀವಸತ್ವಗಳ ಹೊರತಾಗಿ, ಕ್ಯಾಲ್ಸಿಯಂ ಮತ್ತು ರಂಜಕವು ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಚಳಿಗಾಲದಲ್ಲಿ ಮೂಳೆಗಳ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಅಣಬೆ:

ಅಣಬೆ ವಿಟಮಿನ್ ಡಿ ಯ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ವರದಿಗಳ ಪ್ರಕಾರ, ಅಣಬೆ ಬೆಳೆಯುವ ಸಮಯದಲ್ಲಿ, ಇದು ಸೂರ್ಯನಿಂದ ವಿಟಮಿನ್ ಡಿ ಅನ್ನು ಹೀರಿಕೊಳ್ಳುತ್ತದೆ. ಮಕ್ಕಳಿಗೆ ಆಹಾರಕ್ಕಾಗಿ ನೀವು ಮನೆಯಲ್ಲಿ ತ್ವರಿತ ಆಹಾರಗಳಲ್ಲಿ ಅಣಬೆಗಳನ್ನು ಸೇರಿಸಿಕೊಳ್ಳಬಹುದು.

ಪಾಲಕ್​​​ ಸೊಪ್ಪು:

ಪಾಲಕ್​​ ಸೊಪ್ಪಿನಲ್ಲಿ ಅನೇಕ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿದೆ. ವಿಟಮಿನ್ ಡಿ, ಸಿ ಮತ್ತು ಎ ಹೊರತುಪಡಿಸಿ, ಬಹಳಷ್ಟು ಕಬ್ಬಿಣವು ಇದರಲ್ಲಿ ಕಂಡುಬರುತ್ತದೆ. ಆದ್ದರಿಂದ ಚಳಿಗಾಲದಲ್ಲಿ ನಿಮ್ಮ ಆಹಾರಕ್ರಮದಲ್ಲಿ ಪಾಲಕ್​ ಸೊಪ್ಪು ಸೇರಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು