AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಟಮಿನ್ ಡಿ ಕೊರತೆ ಉಂಟಾದರೆ ನಾಲಿಗೆಯಲ್ಲಿ ಈ ಲಕ್ಷಣಗಳು ಕಂಡುಬರಬಹುದು

ನಿಮ್ಮ ದೇಹದಲ್ಲಿ ವಿಟಮಿನ್​​ ಡಿ ಕಡಿಮೆಯಾಗುತ್ತಾ ಹೋದ ಹಾಗೆ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಯನ್ನು ಉಂಟಾಗುತ್ತದೆ. ಆದರಂತೆಯೇ ನಿಮ್ಮ ನಾಲಿಗೆಯ ಮೇಲೆಯೂ ಕೆಟ್ಟ ಪರಿಣಾಮವನ್ನುಂಟು ಮಾಡಬಹುದು.

ವಿಟಮಿನ್ ಡಿ ಕೊರತೆ ಉಂಟಾದರೆ ನಾಲಿಗೆಯಲ್ಲಿ ಈ ಲಕ್ಷಣಗಳು ಕಂಡುಬರಬಹುದು
ವಿಟಮಿನ್ ಡಿ ಕೊರತೆ
ಅಕ್ಷತಾ ವರ್ಕಾಡಿ
|

Updated on:Apr 13, 2023 | 11:44 AM

Share

ವಿಟಮಿನ್ ಡಿ ನಿಮ್ಮ ದೇಹದ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಿಮ್ಮ ದೇಹದಲ್ಲಿ ವಿಟಮಿನ್​​ ಡಿ ಕಡಿಮೆಯಾಗುತ್ತಾ ಹೋದ ಹಾಗೆ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಯನ್ನು ಉಂಟಾಗುತ್ತದೆ. ಆದರಂತೆಯೇ ನಿಮ್ಮ ನಾಲಿಗೆಯ ಮೇಲೆಯೂ ಕೆಟ್ಟ ಪರಿಣಾಮವನ್ನುಂಟು ಮಾಡಬಹುದು. ನಿಮ್ಮ ನಾಲಿಗೆಯಲ್ಲಿ ಇಂತಹ ಕೆಲವೊಂದು ಲಕ್ಷಣಗಳು ಕಂಡುಬಂದರೆ ವಿಟಮಿನ್ ಡಿ ಕೊರತೆ ಉಂಟಾಗಿದೆ ಎಂಬುದನ್ನು ಸೂಚಿಸುತ್ತದೆ.

ಸನ್ಶೈನ್ ವಿಟಮಿನ್ ಅಥವಾ ಸೂರ್ಯನ ಕಿರಣ ಎಂದು ಕೂಡ ವಿಟಮಿನ್ ಡಿ ಯನ್ನು ಕರೆಯಲಾಗುತ್ತದೆ. ಬೆಳಗಿನ ಸೂರ್ಯನ ಕಿರಣಕ್ಕೆ ಒಡ್ಡಿಕೊಳ್ಳುವ ಹೊರತಾಗಿಯೂ ಕೆಲವು ಹಾಲಿನ ಉತ್ಪನ್ನ, ಧಾನ್ಯ, ಮೀನು ಹಾಗೂ ಮೊಟ್ಟೆಯ ಹಳದಿಗಳಂತಹ ಕೆಲವು ಆಹಾರಗಳಲ್ಲಿ ನೈಸರ್ಗಿಕವಾಗಿ ಇರುತ್ತದೆ.

ವಿಟಮಿನ್ ಡಿ ಕೊರತೆ ಉಂಟಾದರೆ ನಾಲಿಗೆಯಲ್ಲಿ ಈ ಲಕ್ಷಣಗಳು ಕಂಡುಬರಬಹುದು

ಬಾಯಿ ಉರಿ:

ಬಾಯಲ್ಲಿ ಉರಿ ಬಂದಂತೆ ಅಥವಾ ಬರ್ನಿಂಗ್ ಮೌತ್ ಸಿಂಡ್ರೋಮ್, ಬಾಯಲ್ಲಿ ಜುಮ್ಮೆನಿಸುವಿಕೆ ಮುಂತಾದ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದರೆ ನಿಮ್ಮ ದೇಹದಲ್ಲಿ ವಿಟಮಿನ್​​ ಡಿ ಕೊರತೆ ಉಂಟಾಗಿದೆ ಎಂಬುದನ್ನು ತಿಳಿಸುತ್ತದೆ.

ಮರಗಟ್ಟುವಿಕೆ:

ನಿಮ್ಮ ದೇಹದಲ್ಲಿ ವಿಟಮಿನ್ ಡಿ ತುಂಬಾ ಕಡಿಮೆಯಾದರೆ ದೇಹವು ರಕ್ತದಲ್ಲಿ ಕಡಿಮೆ ಕ್ಯಾಲ್ಸಿಯಂ ಮಟ್ಟವನ್ನು ಹೊಂದಿರುತ್ತದೆ. ಇದು ನಿಮ್ಮ ನಾಲಿಗೆಯಲ್ಲಿ ಮರಗಟ್ಟುವಿಕೆ ಅಥವಾ ಸಂವೇದನೆಯ ಕೊರತೆಯ ಭಾವನೆಗಳನ್ನು ಉಂಟುಮಾಡುತ್ತದೆ.

ಇದನ್ನೂ ಓದಿ: ವಿಪರೀತ ಸೆಖೆ ಎಂದು ಐಸ್​ ವಾಟರ್ ಕುಡಿಯುವ ಅಭ್ಯಾಸವಿದೆಯೇ? ಎಚ್ಚರ

ಒಣ ಬಾಯಿ:

ಒಣ ಬಾಯಿ ಅಥವಾ ಕ್ಸೆರೊಸ್ಟೊಮಿಯಾವು ನಿರ್ಜಲೀಕರಣ, ಆಲ್ಕೋಹಾಲ್ ಬಳಕೆ, ಧೂಮಪಾನ, ಆತಂಕ, ಕೆಲವು ಔಷಧಿಗಳು ಅಥವಾ ಯಾವುದೇ ಆಧಾರವಾಗಿರುವ ಪರಿಸ್ಥಿತಿಗಳು ಸೇರಿದಂತೆ ವಿಟಮಿನ್ ಕೊರತೆಗಳ ಜೊತೆಗೆ ಹಲವು ಕಾರಣಗಳನ್ನು ಹೊಂದಿದೆ.

ಇತರ ಲಕ್ಷಣಗಳು:

  • ಬಾಯಿಯಲ್ಲಿ ರುಚಿಯ ಬದಲಾವಣೆ
  • ರುಚಿಯ ನಷ್ಟ
  • ನಾಲಿಗೆಯಲ್ಲಿ ಸಣ್ಣ ಗುಳ್ಳೆಗಳು
  • ಶುಷ್ಕತೆ

ಪ್ರತಿದಿನ ಸೂರ್ಯನ ಬೆಳಕಿನಲ್ಲಿ ಸ್ವಲ್ಪ ಸಮಯವನ್ನು ಕಳೆಯುವ ಮೂಲಕ ನಿಮ್ಮ ದೇಹವು ವಿಟಮಿನ್ ಡಿ ಹೆಚ್ಚಿಸಬಹುದು . ವಿಟಮಿನ್ ಡಿ ಕೊರತೆಯಿಂದ ಹೊರಬರಲು ಕನಿಷ್ಠ 10-20 ನಿಮಿಷಗಳ ಕಾಲ ಬೆಳಗಿನ ಬಿಸಿಲಿನ ಶಾಖವನ್ನು ಪಡೆದುಕೊಳ್ಳುವುದು ಉತ್ತಮ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದಲ್ಲದೇ ವಿಟಮಿನ್ ಡಿ ಹೆಚ್ಚಿಸಲು ನೈಸರ್ಗಿಕ ವಿಟಮಿನ್ ಡಿ ಭರಿತ ಆಹಾರಗಳನ್ನು ಸೇವಿಸಿ. ಸೊಪ್ಪು, ಬೆಂಡೆಕಾಯಿ, ಸೋಯಾಬೀನ್ಸ್, ಸಾಲ್ಮನ್ ಮೀನನ್ನು ನಿಮ್ಮ ಆಹಾರ ಕ್ರಮದಲ್ಲಿ ಜೋಡಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:44 am, Thu, 13 April 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ