AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಲಾರಂ ಆಗದ ಹೊರತು ಎಚ್ಚರ ಆಗೋದಿಲ್ವಾ? ಈ ಅಪಾಯ ತಪ್ಪಿದ್ದಲ್ಲ

ಬೆಳಿಗ್ಗೆ ಎಚ್ಚರ ಆಗಬೇಕಾದರೆ ಅಲಾರಂ ಸದ್ದು ಕಿವಿಗೆ ಬೀಳಬೇಕು ಆಗ ಮಾತ್ರ ಎದ್ದೇಳುತ್ತೇವೆ ಎನ್ನುವವರು ನಮ್ಮ ಮಧ್ಯೆಯೇ ಇದ್ದಾರೆ. ಇದರಿಂದ ನಮಗೆ ನೈಸರ್ಗಿಕವಾಗಿ ಏಳುವ ಕ್ರಮವೇ ತಪ್ಪಿಹೋಗಿದೆ. ನಿಮಗೆ ಅನಿಸಬಹುದು ಹೇಗೆ ಬೆಳಗಾದರೆ ಏನು? ಏಳುವುದು ಮುಖ್ಯ ಎಂದು ಹೇಳಬಹುದು. ಆದರೆ ಅದು ತಪ್ಪು. ನಾವು ಬೆಳಗ್ಗೆ ಏಳುವುದಕ್ಕಾಗಿ ರೂಢಿಸಿಕೊಂಡಿರುವ ಕ್ರಮ ಸರಿಯಾಗಿಲ್ಲ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಯಾಕೆ ಅಲಾರಂ ಇಟ್ಟು ಏಳಬಾರದು? ಇದು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ? ಎಂಬುದರ ಬಗ್ಗೆ ತಜ್ಞರು ನೀಡಿರುವ ಸಂಪೂರ್ಣ ಮಾಹಿತಿ ಇಲ್ಲಿದೆ.

Health Tips: ಅಲಾರಂ ಆಗದ ಹೊರತು ಎಚ್ಚರ ಆಗೋದಿಲ್ವಾ? ಈ ಅಪಾಯ ತಪ್ಪಿದ್ದಲ್ಲ
Waking Up to an Alarm
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 08, 2024 | 1:06 PM

Share

ಬೆಳಿಗ್ಗೆ ಅಲಾರಂ ಆಗದ ಹೊರತು ಎಚ್ಚರಿಕೆಯೇ ಆಗುವುದಿಲ್ಲ ಎಂಬ ಮಾತನ್ನು ನೀವು ಆಗಾಗ ಕೇಳಿರಬಹುದು. ನಮಗೆ ಎಚ್ಚರ ಆಗಬೇಕಾದರೆ ಅಲಾರಂ ಸದ್ದು ನಮ್ಮ ಕಿವಿಗೆ ಬೀಳಬೇಕು ಆಗ ಮಾತ್ರ ನಾವು ಎದ್ದೇಳುತ್ತೇವೆ ಎನ್ನುವವರು ನಮ್ಮ ಮಧ್ಯೆಯೇ ಇದ್ದಾರೆ. ಇದರಿಂದ ನಮಗೆ ನೈಸರ್ಗಿಕವಾಗಿ ಏಳುವ ಕ್ರಮವೇ ತಪ್ಪಿಹೋಗಿದೆ. ನಿಮಗೆ ಅನಿಸಬಹುದು ಹೇಗೆ ಬೆಳಗಾದರೆ ಏನು? ಏಳುವುದು ಮುಖ್ಯ ಎಂದು ಹೇಳಬಹುದು. ಆದರೆ ಅದು ತಪ್ಪು. ನಾವು ಬೆಳಗ್ಗೆ ಏಳುವುದಕ್ಕಾಗಿ ರೂಢಿಸಿಕೊಂಡಿರುವ ಕ್ರಮ ಸರಿಯಾಗಿಲ್ಲ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಯಾಕೆ ಅಲಾರಂ ಇಟ್ಟು ಏಳಬಾರದು? ಇದು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ? ಎಂಬುದರ ಬಗ್ಗೆ ತಜ್ಞರು ನೀಡಿರುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹೈದರಾಬಾದ್ ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ. ಸುಧೀರ್ ಕುಮಾರ್ ಅವರು ಈ ವಿಷಯವಾಗಿ ಕೆಲವು ಮಾಹಿತಿಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ಹೇಳುವ ಪ್ರಕಾರ “ಅಲಾರಂ ಇಟ್ಟು ಎದ್ದೇಳುವವರು, ನೈಸರ್ಗಿಕವಾಗಿ ಏಳುವವರಿಗಿಂತ (ಅಲಾರಂ ಇಲ್ಲದೆ) ಹೆಚ್ಚಾಗಿ ಬಿಪಿ ಸಮಸ್ಯೆಯಿಂದ ಬಳಲುತ್ತಾರೆ. ಹಾಗಾಗಿಯೇ ಅಲಾರಂ ಇಟ್ಟು ಏಳುವವರಲ್ಲಿ ಇತರರಿಗೆ ಹೋಲಿಸಿದರೆ 74% ಹೆಚ್ಚು ರಕ್ತದೊತ್ತಡ ಸಮಸ್ಯೆಯು ಗಮನಾರ್ಹವಾಗಿ ಏರಿಕೆಯಾಗಿರುವುದು ಕಂಡು ಬಂದಿದೆ. ಅಲ್ಲದೆ 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವವರಲ್ಲಿಯೂ (ಬೇಗ ಎಚ್ಚರಗೊಳ್ಳುವವರಲ್ಲಿಯೂ) ಬಿಪಿ ಹೆಚ್ಚಳವು ಹೆಚ್ಚು” ಎಂದು ಅವರು ಹೇಳುತ್ತಾರೆ.

“ಈ ರೀತಿ ಬಿಪಿಯ ಉಲ್ಬಣವು ಹೃದಯಾಘಾತ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ. ಅದರಲ್ಲಿಯೂ ಮೊದಲೇ ಹೃದ್ರೋಗ ಅಥವಾ ಅಧಿಕ ರಕ್ತದೊತ್ತಡ ಸಮಸ್ಯೆ ಇದ್ದರೆ ಅಂತವರಲ್ಲಿ ಈ ಅಪಾಯ ಹೆಚ್ಚು. ಗಾಢ ನಿದ್ರೆಯಲ್ಲಿದ್ದಾಗ ಅಲಾರಂ ಶಬ್ದ ನಿಮ್ಮನ್ನು ಇದ್ದಕ್ಕಿದ್ದಂತೆ ಎಚ್ಚರಗೊಳಿಸಬಹುದು ಇದರಿಂದ ನಿಮ್ಮ ದೇಹ ಗಲಿಬಿಲಿಗೊಳ್ಳಬಹುದು. ಜೊತೆಗೆ ಇದು ನಿಮ್ಮ ಒತ್ತಡವನ್ನೂ ಹೆಚ್ಚಿಸಬಹುದು” ಎಂದು ಡಾ. ಸುಧೀರ್ ಹೇಳುತ್ತಾರೆ.

ಇದನ್ನೂ ಓದಿ: ಮಳೆಗಾಲದಲ್ಲಿ ಅಡುಗೆಗೆ ಈ ಎಣ್ಣೆಯನ್ನು ಬಳಸಬೇಡಿ

ಹಾಗಾದರೆ ಇದಕ್ಕೆ ಉತ್ತಮ ಪರ್ಯಾಯಗಳು ಯಾವುವು?

  •  ನಿಯಮಿತವಾಗಿ ಅಲಾರಂ ಬಳಸುವುದನ್ನು ತಪ್ಪಿಸಿ.
  • ಸಾಕಷ್ಟು ನಿದ್ರೆ ಮಾಡಿ (7- 8 ಗಂಟೆಗಳು), ಇದು ನೈಸರ್ಗಿಕವಾಗಿ ಅಂದರೆ ಯಾವುದೇ ರೀತಿಯ ಅಲರಾಂ ಇಲ್ಲದೆ ನೀವಾಗಿಯೇ ಎಚ್ಚರಗೊಳ್ಳಲು ಅನುವು ಮಾಡಿಕೊಡುತ್ತದೆ.
  • ಪ್ರತಿದಿನ ನೈಸರ್ಗಿಕವಾದ ಬೆಳಕು ನಿಮ್ಮ ಕೋಣೆಗೆ ಬರಲು ಬಿಡಿ, ಇದರಿಂದ ಮೆದುಳಿನಲ್ಲಿ ಮೆಲಟೋನಿನ್ (ನಿದ್ರೆಯ ಹಾರ್ಮೋನ್) ಉತ್ಪಾದನೆ ಕಡಿಮೆಯಾಗುತ್ತದೆ (ಬೆಳಕಿಗೆ ಒಡ್ಡಿಕೊಳ್ಳುವುದರಿಂದ), ನೀವು ನೈಸರ್ಗಿಕವಾಗಿಯೇ ಎಚ್ಚರಗೊಳ್ಳಲು ಇದು ಅನುವು ಮಾಡಿಕೊಡುತ್ತದೆ.
  • ಪ್ರತಿನಿತ್ಯ ಒಂದು ಸ್ಥಿರವಾದ ನಿದ್ರೆಯ ವೇಳಾಪಟ್ಟಿಯನ್ನು ಕಾಪಾಡಿಕೊಳ್ಳಿ (ಪ್ರತಿ ರಾತ್ರಿ ಒಂದೇ ಸಮಯಕ್ಕೆ ಮಲುಗುವುದು), ಇದು ನಿಮ್ಮ ಸಿರ್ಕಾಡಿಯನ್ ಲಯಕ್ಕೆ ಅನುಗುಣವಾಗಿರುತ್ತದೆ.
  • ನೀವು ಅಲಾರಂ ಬಳಸಲೇ ಬೇಕಾದ ಸಂದರ್ಭದಲ್ಲಿ ಸುಮಧುರ ಅಥವಾ ಹಿತವಾದ ನಿಮಗಿಷ್ಟವಾದ ಸಂಗೀತವನ್ನು ಅಲರಾಂ ಆಗಿ ಇಟ್ಟುಕೊಳ್ಳಿ, ಇದು ಕೇಳಲು ತುಂಬಾ ಆಹ್ಲಾದಕರವಾಗಿರುತ್ತದೆ.

ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ