AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಾಬಿ ಸೇಬು: ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ವಾರಕ್ಕೊಮ್ಮೆಯಾದರೂ ನೀರು ಸೇಬು ತಿನ್ನಲೇಬೇಕು

Water Apple or Rose Apple: ನೀರು ಸೇಬಿನಲ್ಲಿ ಫೈಬರ್ ಅಂಶ ಹೇರಳವಾಗಿದ್ದು ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಿತ್ಯವೂ ಈ ಹಣ್ಣನ್ನು ತಿನ್ನುವವರಿಗೆ ಗ್ಯಾಸ್, ಮಲಬದ್ಧತೆ, ಅಜೀರ್ಣ, ಆಸಿಡ್ ರಿಫ್ಲಕ್ಸ್, ಅಸಿಡಿಟಿಯಂತಹ ಸಮಸ್ಯೆಗಳು ಬರುವುದಿಲ್ಲ.

ಗುಲಾಬಿ ಸೇಬು: ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ವಾರಕ್ಕೊಮ್ಮೆಯಾದರೂ ನೀರು ಸೇಬು ತಿನ್ನಲೇಬೇಕು
ವಾರಕ್ಕೊಮ್ಮೆಯಾದರೂ ನೀರು ಸೇಬು ತಿನ್ನಲೇಬೇಕು!
ಸಾಧು ಶ್ರೀನಾಥ್​
|

Updated on: Oct 18, 2023 | 6:06 AM

Share

ನೀರು ಸೇಬು ತಿನ್ನುವುದರಿಂದ ಆರೋಗ್ಯ ಪ್ರಯೋಜನಗಳು: ವೈದ್ಯರು ಪ್ರತಿದಿನ ಸೇಬು ತಿನ್ನಲು ಹೇಳುತ್ತಾರೆ. ನಿತ್ಯವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯವಿಲ್ಲ ಎನ್ನುತ್ತಾರೆ ತಜ್ಞರು. ಆದರೆ ನೀರು ಸೇಬು ಹೆಸರು ಕೇಳಿದ್ದೀರಾ? ಇದನ್ನು ಗುಲಾಬಿ ಸೇಬು ಎಂದೂ ಕರೆಯುತ್ತಾರೆ. ಇದು ಆಗ್ನೇಯ ಏಷ್ಯಾದ ಉಷ್ಣವಲಯದ ಹಣ್ಣು. ಈ ಹಣ್ಣನ್ನು ಸಿಜಿಜಿಯಂ ಅಕ್ವಿಯಂ ಎಂದು ಕರೆಯುತ್ತಾರೆ. ಇದು ತೆಳುವಾದ ಪೊರೆಯೊಂದಿಗೆ ಸಣ್ಣ ಹಣ್ಣು. ಅದರ ಬಣ್ಣ ಕೆಂಪು ಅಥವಾ ಹಸಿರು. ಇದರ ತಿರುಳು ಸಾಮಾನ್ಯವಾಗಿ ಬಿಳಿ ಅಥವಾ ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ರಸಭರಿತ, ಸ್ವಾದಿಷ್ಟ ಮತ್ತು ಸಿಹಿಯದ್ದಾಗಿದೆ ಈ ಹಣ್ಣು.

1. ವಿಟಮಿನ್‌ಗಳಲ್ಲಿ ಸಮೃದ್ಧವಾಗಿದೆ: ವಿಟಮಿನ್ ಸಿ ಮತ್ತು ವಿಟಮಿನ್ ಎ – ಈ ಹಣ್ಣಿನಲ್ಲಿ ಹೇರಣವಾಗಿರುತ್ತದೆ. ದೇಹದ ಒಟ್ಟಾರೆ ಆರೋಗ್ಯಕ್ಕೆ ಇದು ಬಹಳ ಮುಖ್ಯ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ. ಆದ್ದರಿಂದ ನಾವು ನಿಯಮಿತವಾಗಿ ನೀರು ಸೇಬು ಅಥವಾ ಗುಲಾಬಿ ಸೇಬು ತಿನ್ನಬೇಕು.

ಇದನ್ನೂ ಓದಿ: Success Story: ನಷ್ಟದಲ್ಲಿದ್ದ ರೈತ ‘ಕೈ ಕೆಸರಾದರೆ ಬಾಯಿ ಮೊಸರು’ ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ! ಏನು ಆತನ ಸಾಧನೆ? ನುಗ್ಗೆ ಬೀಜಕ್ಕೆ ಬಂತು ಭಾರೀ ಡಿಮ್ಯಾಂಡ್

2. ಜಲ ಸಂಚಯನ: ನೀರು ಸೇಬಿನಲ್ಲಿ ನೀರಿನ ಶೇಕಡಾವಾರು ಪ್ರಮಾಣ ಹೆಚ್ಚು. ಇದು ವಿಶೇಷವಾಗಿ ಬಿಸಿ ಅಥವಾ ಆರ್ದ್ರ ವಾತಾವರಣದಲ್ಲಿ ದೇಹವನ್ನು ಜಲೀಕರಣಗೊಳಿಸುವಲ್ಲಿ ಸಹಾಯ ಮಾಡುತ್ತದೆ. ನೀವು ಸಾಕಷ್ಟು ದೈಹಿಕ ಚಟುವಟಿಕೆಗಳನ್ನು ಮಾಡುತ್ತಿದ್ದರೆ ಈ ಹಣ್ಣು ನಿಮಗೆ ಉಪಯುಕ್ತವಾಗಿದೆ.

3. ಜೀರ್ಣಕ್ರಿಯೆಯಲ್ಲಿ ಸಹಾಯ: ನೀರು ಸೇಬಿನಲ್ಲಿ ಫೈಬರ್ ಅಂಶ ಹೇರಳವಾಗಿದ್ದು ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಿತ್ಯವೂ ಈ ಹಣ್ಣನ್ನು ತಿನ್ನುವವರಿಗೆ ಗ್ಯಾಸ್, ಮಲಬದ್ಧತೆ, ಅಜೀರ್ಣ, ಆಸಿಡ್ ರಿಫ್ಲಕ್ಸ್, ಅಸಿಡಿಟಿಯಂತಹ ಸಮಸ್ಯೆಗಳು ಬರುವುದಿಲ್ಲ.

4. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ: ವಾಟರ್ ಆಪಲ್ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಂ ಅನ್ನು ಹೊಂದಿರುತ್ತದೆ. ಇದು ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸಲು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ, ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಹೃದಯರಕ್ತನಾಳದ ವ್ಯವಸ್ಥೆಯಲ್ಲಿ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ.

Also Read: ರಾತ್ರಿ ಮಲಗುವ ಮುನ್ನ ಈ ಹಸಿರು ಎಲೆಗಳನ್ನು ಬಳಸಿ, ಉತ್ತಮ ಆರೋಗ್ಯದ ಜೊತೆಗೆ ಕೂದಲಿನ ಸಮಸ್ಯೆಗೂ ಪರಿಹಾರವಿದೆ

5. ತೂಕ ನಷ್ಟ: ಆದಷ್ಟು ಬೇಗ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ವಾಟರ್ ಆಪಲ್ ಅತ್ಯುತ್ತಮ ಹಣ್ಣು. ಇದರಲ್ಲಿ ನೀರು ಮತ್ತು ನಾರಿನಂಶ ಹೇರಳವಾಗಿರುವುದರಿಂದ ಹೊಟ್ಟೆಯು ಹೆಚ್ಚು ಕಾಲ ತುಂಬಿರುತ್ತದೆ. ಹಾಗಾಗಿ ಈ ಹಣ್ಣು ಅತಿಯಾದ ಆಹಾರ ಸೇವನೆಯನ್ನು ತಡೆಯುತ್ತದೆ. ಈ ಕಾರಣದಿಂದಾಗಿ, ತೂಕವು ಕ್ರಮೇಣ ಕಡಿಮೆಯಾಗಲು ಪ್ರಾರಂಭಿಸುತ್ತದೆ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

(ಗಮನಿಸಿ: ಇದು ತಜ್ಞರಿಂದ ಸಂಗ್ರಹಿಸಿದ ಮಾಹಿತಿಯಾಗಿದೆ. ಆದಾಗ್ಯೂ ಈ ಸಲಹೆಗಳನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಉತ್ತಮ)

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್