AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Water Intoxication: ಅತಿಯಾಗಿ ನೀರು ಕುಡಿದು ಆಸ್ಪತ್ರೆ ಸೇರಿದ ಮಹಿಳೆ, ಏನಿದು ನೀರಿನ ಮಾದಕತೆ? ಈ ಬಗ್ಗೆ ತಜ್ಞರು ಹೇಳುವುದೇನು?

ದೇಹದ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯಬೇಕೆಂದರೆ ದೇಹಕ್ಕೆ ನೀರು ಅಗತ್ಯವಾಗಿ ಬೇಕು. ಹೀಗಾಗಿ ದಿನಕ್ಕೆ ಇಂತಿಷ್ಟು ಲೀಟರ್ ನೀರು ಕುಡಿಯಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ. ಆದರೆ ಅತಿಯಾದ ನೀರಿನ ಸೇವನೆಯಿಂದ ಆರೋಗ್ಯಕ್ಕೆ ತೊಂದರೆಯೇ ಅಧಿಕ. ದೇಹದಲ್ಲಿ ನೀರಿನಾಂಶ ಅತಿಯಾದರೆ ನೀರಿನ ಮಾದಕತೆ ಅಥವಾ ಹೈಪೋನಾಟ್ರೀಮಿಯಾ ಎಂಬ ಸ್ಥಿತಿಗೆ ಕಾರಣವಾಗಬಹುದು. ಇದರಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಹಾಗಾದ್ರೆ ಅತಿಯಾದ ನೀರಿನ ಸೇವನೆ ಆರೋಗ್ಯಕ್ಕೆ ಹಾನಿಕಾರಕವೇ?ಏನಿದು ನೀರಿನ ಮಾದಕತೆ ಇದರ ಲಕ್ಷಣಗಳೇನು? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Water Intoxication: ಅತಿಯಾಗಿ ನೀರು ಕುಡಿದು ಆಸ್ಪತ್ರೆ ಸೇರಿದ ಮಹಿಳೆ, ಏನಿದು ನೀರಿನ ಮಾದಕತೆ? ಈ ಬಗ್ಗೆ ತಜ್ಞರು ಹೇಳುವುದೇನು?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Dec 24, 2024 | 3:05 PM

Share

ಅತಿಯಾದರೆ ಅಮೃತವೂ ವಿಷ ಕೂಡ ಎನ್ನುವ ಮಾತಿದೆ. ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಮಿತಿಮೀರಿ ನೀರು ಕುಡಿದ್ರೆ ತುಂಬಾನೇ ಅಪಾಯಕಾರಿ. ದಿನಕ್ಕೆ ಕನಿಷ್ಠ 2-3 ಲೀಟರ್ ನೀರನ್ನು ಕುಡಿಯಬೇಕು ಎಂದು ತಜ್ಞರು ಹೇಳುತ್ತಾರೆ. ಹಾಗಂತ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯುವುದು ಕೂಡ ನಾನಾ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡಬಲ್ಲದು. ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎನ್ನುವ ದೃಷ್ಟಿಯಿಂದ 40 ವರ್ಷದ ಮಹಿಳೆಯೊಬ್ಬರು ಇದನ್ನು ಕಾರ್ಯರೂಪಕ್ಕೆ ತರಲು ಹೋಗಿ ಆಸ್ಪತ್ರೆ ಸೇರಿದ ಘಟನೆಯೊಂದು ಹೈದರಾಬಾದ್‌ನಲ್ಲಿ ನಡೆದಿದೆ.

ಈ ಮಹಿಳೆಯೂ ಬೆಳಗ್ಗೆ ಎದ್ದ ತಕ್ಷಣ ಸುಮಾರು 4 ಲೀಟರ್ ನೀರು ಕುಡಿದಿದ್ದಾರೆ. ನೀರು ಕುಡಿದ ಕೆಲವು ನಿಮಿಷಗಳ ನಂತರ ಆಕೆ ಏನಾಗುತ್ತಿದೆ ಎಂದು ತಿಳಿಯದ ಸ್ಥಿತಿಗೆ ತಲುಪಿದ್ದು ಮೂರ್ಛೆ ತಪ್ಪಿ ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದ ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ.ಸುಧೀರ್ ಕುಮಾರ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಡಾ.ಸುಧೀರ್ ಕುಮಾರ್, ಹೆಚ್ಚಿನ ಪ್ರಮಾಣದ ನೀರು ಕುಡಿದ ನಂತರ ಮಹಿಳೆ ತೀವ್ರ ತಲೆನೋವು, ವಾಕರಿಕೆ ಅಥವಾ ವಾಂತಿಯಿಂದ ಬಳಲುತ್ತಿದ್ದರು. ಬೆಳಗ್ಗೆ ಎದ್ದ ತಕ್ಷಣ ಸಾಕಷ್ಟು ಪ್ರಮಾಣದ ನೀರು ಕುಡಿಯುವುದರಿಂದ ದೇಹದಲ್ಲಿರುವ ತ್ಯಾಜ್ಯವೆಲ್ಲ ಹೊರಹೋಗುತ್ತದೆ. ಆದರೆ ಆಕೆಯು ನೀರಿನ ಮಾದಕತೆಯಿಂದ ಬಳಲಿದ್ದು, ಅಧಿಕ ನೀರಿನ ಸೇವನೆಯೂ ವಿಷವುಂಟು ಮಾಡಿದೆ ಆ ಮಹಿಳೆಯೂ 110 ಎಂಎಂಒಎಲ್ / ಅಧಿಕ ಸೋಡಿಯಂ ಮಟ್ಟವನ್ನು ಹೊಂದಿರುವ ಬಗ್ಗೆ ತಿಳಿಸಿದ್ದಾರೆ.

ನೀರಿನ ಮಾದಕತೆ ಎಂದರೇನು?

ನೀರಿನ ವಿಷವನ್ನು ಮಾದಕತೆ ಅಥವಾ ಹೈಪರ್ಹೈಡ್ರೇಶನ್ ಎಂದು ಕರೆಯಲಾಗುತ್ತದೆ, ಈ ಸ್ಥಿತಿಯಲ್ಲಿ ದೇಹದಲ್ಲಿನ ನೀರಿನ ಮಟ್ಟವು ಎಲೆಕ್ಟ್ರೋಲೈಟ್ ಗಿಂತ ಹೆಚ್ಚಾಗಿರುತ್ತದೆ. ಎಲೆಕ್ಟ್ರೋಲೈಟ್ ಗಳು ದೇಹದ ದ್ರವ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ನೀರು ಕುಡಿದಾಗ ರಕ್ತವು ನೀರನ್ನು ಹೀರಿಕೊಳ್ಳುತ್ತದೆ. ಮೂತ್ರಪಿಂಡಗಳು ಉಳಿದ ನೀರನ್ನು ಫಿಲ್ಟರ್ ಮಾಡಿ ಮೂತ್ರದ ಮೂಲಕ ಹೊರಹಾಕುತ್ತದೆ. ಆದರೆ ಹೆಚ್ಚುವರಿ ನೀರು ಕುಡಿದಾಗ ಈ ಸಂಪೂರ್ಣ ಪ್ರಕ್ರಿಯೆಯಲ್ಲಿ ಏರುಪೇರಾಗುತ್ತದೆ. ಈ ವೇಳೆಯಲ್ಲಿ ರಕ್ತದಲ್ಲಿನ ಎಲೆಕ್ಟ್ರೋಲೈಟ್ ಮಟ್ಟವು ಕಡಿಮೆಯಾಗುತ್ತದೆ. ಇದನ್ನು ನೀರಿನ ವಿಷ ಅಥವಾ ನೀರಿನ ಮಾದಕತೆ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಮೊಟ್ಟೆ ತಿನ್ನುವಾಗ ಈ ತಪ್ಪು ಮಾಡಬೇಡಿ: ಗಂಭೀರ ಕಾಯಿಲೆಗೆ ತುತ್ತಾಗುತ್ತೀರ

ನೀರಿನ ಮಾದಕತೆಯ ಲಕ್ಷಣಗಳು

* ವಾಕರಿಕೆ

* ತಲೆನೋವು

* ಗೊಂದಲ ಮತ್ತು ಏಕಾಗ್ರತೆಯ ಕೊರತೆ

* ಆಯಾಸ

* ಸ್ನಾಯು ದೌರ್ಬಲ್ಯ,

* ಕಾಲುಗಳು ಮತ್ತು ತೋಳುಗಳಲ್ಲಿ ನೋವು

* ಮೆದುಳಿನಲ್ಲಿ ಊತವು ಉಂಟಾಗಬಹುದು.

ನೀರಿನ ಮಾದಕತೆಗೆ ಚಿಕಿತ್ಸೆ ವಿಧಾನ ಹೇಗಿರುತ್ತದೆ?

ಹೆಚ್ಚು ನೀರು ಕುಡಿಯುವುದನ್ನು ನಿಲ್ಲಿಸುವುದು ಅಥವಾ ನಿಯಮಿತವಾಗಿ ನೀರು ಕುಡಿಯುವುದು ನೀರಿನ ಮಾದಕತೆಯನ್ನು ತಡೆಯುವ ಮಾರ್ಗಗಳಾಗಿವೆ. ಅದಲ್ಲದೇ ವೈದ್ಯರು ನೀರಿನ ಮಾದಕತೆಯ ಕಾರಣವನ್ನು ಅವಲಂಬಿಸಿ ಚಿಕಿತ್ಸೆಯನ್ನು ನೀಡುತ್ತಾರೆ. ದೇಹದಿಂದ ನೀರನ್ನು ಹೊರಹಾಕಲು ವೈದ್ಯರು ಮೂತ್ರವರ್ಧಕಗಳು ಅಥವಾ ಐವಿ ದ್ರವಗಳನ್ನು ಶಿಫಾರಸು ಮಾಡುತ್ತಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ