AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಶೀತವಾಗುತ್ತಾ, ಕೆಮ್ಮು ಒಮ್ಮೆ ಶುರುವಾದರೆ ಕಡಿಮೆನೇ ಆಗ್ತಾ ಇಲ್ವಾ? ಇದಕ್ಕೆ ಕಾರಣ ಏನು ಗೊತ್ತಾ?

ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಆದರೆ ಪದೇ ಪದೇ ಈ ರೀತಿಯಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಅನೇಕರು ಈ ರೀತಿಯ ಲಕ್ಷಣಗಳು ಹವಾಮಾನದಿಂದ ಕಂಡುಬರುವ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎನ್ನುತ್ತಾರೆ. ಹಾಗಾದರೆ ರೋಗನಿರೋಧಕ ಶಕ್ತಿ ಕುಂಠಿತಗೊಳ್ಳುವುದಕ್ಕೆ ಕಾರಣವೇನು, ಈ ರೀತಿ ಸಮಸ್ಯೆಯನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇ ಪದೇ ಶೀತವಾಗುತ್ತಾ, ಕೆಮ್ಮು ಒಮ್ಮೆ ಶುರುವಾದರೆ ಕಡಿಮೆನೇ ಆಗ್ತಾ ಇಲ್ವಾ? ಇದಕ್ಕೆ ಕಾರಣ ಏನು ಗೊತ್ತಾ?
Signs Of Weak Immune SystemImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jan 11, 2026 | 8:25 PM

Share

ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಶೀತ ಗಾಳಿ, ಸೂರ್ಯನ ಬೆಳಕು ಸರಿಯಾಗಿ ಸಿಗದಿರುವುದು ಮತ್ತು ಬದಲಾಗುತ್ತಿರುವ ಹವಾಮಾನವು ದೇಹದ ಮೇಲೆ ಬೇಗ ಪರಿಣಾಮ ಬೀರುತ್ತದೆ. ಆದರೆ ಪದೇ ಪದೇ ಶೀತವಾಗುವುದು (Cold) ಕೆಮ್ಮು ಒಮ್ಮೆ ಆರಂಭವಾದರೆ ಅದು ಗುಣವಾಗದಿರುವುದು, ಅಥವಾ ಕಡಿಮೆ ಸಮಯದ ಅಂತರದಲ್ಲಿ ಪದೇ ಪದೇ ಸೋಂಕುಗಳು ಕಂಡುಬರುವುದು ಸಾಮಾನ್ಯವಲ್ಲ. ಇಂತಹ ಲಕ್ಷಣಗಳು ನಿಮ್ಮ ದೇಹ ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂಬುದನ್ನು ಸೂಚಿಸಬಹುದು. ಅನೇಕರು ಈ ರೀತಿಯ ಲಕ್ಷಣಗಳನ್ನು ಹವಾಮಾನದಿಂದ ಕಂಡುಬರುವ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎನ್ನುತ್ತಾರೆ. ಹಾಗಾದರೆ ರೋಗನಿರೋಧಕ ಶಕ್ತಿ (Immune System) ಕುಂಠಿತಗೊಳ್ಳುವುದಕ್ಕೆ ಕಾರಣವೇನು, ಈ ರೀತಿ ಸಮಸ್ಯೆಯನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದಕ್ಕೆ ಕಾರಣವೇನು?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ಹೇಳುವ ಪ್ರಕಾರ, ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದಕ್ಕೆ ಹಲವಾರು ಕಾರಣಗಳಿರಬಹುದು ಎನ್ನುತ್ತಾರೆ. ಆಹಾರ ಪದ್ದತಿ ಸರಿಯಾಗಿ ಇಲ್ಲದಿರುವುದು, ಪೋಷಕಾಂಶಗಳ ಕೊರತೆ ಮತ್ತು ನಿದ್ರೆ ಸರಿಯಾಗಿ ಆಗದಿರುವುದು ಕೂಡ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸಬಹುದು. ಅದರ ಜೊತೆಗೆ ನಿರಂತರ ಒತ್ತಡ ಮತ್ತು ಮಾನಸಿಕ ಒತ್ತಡವು ದೇಹದ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ ಚಳಿಗಾಲದಲ್ಲಿ, ದೈಹಿಕ ಚಟುವಟಿಕೆ ಕಡಿಮೆಯಾಗುವುದು ಮತ್ತು ಸೂರ್ಯನ ಬೆಳಕು ಸರಿಯಾಗಿ ಸಿಗದಿರುವುದು ಪದೇ ಪದೇ ಆರೋಗ್ಯ ಹದಗೆಡುವುದಕ್ಕೆ ಕಾರಣವಾಗಬಹುದು. ಜೊತೆಗೆ ಆಗಾಗ ಫಾಸ್ಟ್ ಫುಡ್ ತಿನ್ನುವುದು, ನೀರು ಕಡಿಮೆ ಕುಡಿಯುವುದು ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸಬಹುದು.

ಇದನ್ನೂ ಓದಿ: ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ?

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ?

ಪ್ರತಿನಿತ್ಯ ಸಮತೋಲಿತ ಮತ್ತು ಪೌಷ್ಟಿಕ ಆಹಾರ ಸೇವನೆ ಮಾಡಿ. ಆಹಾರದಲ್ಲಿ ಹಣ್ಣು, ತರಕಾರಿ ಮತ್ತು ಪ್ರೋಟೀನ್‌ಗಳನ್ನು ಸೇರಿಸಿ. ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ. ಲಘು ವ್ಯಾಯಾಮ ಅಥವಾ ಯೋಗ ಮಾಡಿ. ಸರಿಯಾಗಿ ನಿದ್ರೆ ಮಾಡಿ, ಜಂಕ್ ಫುಡ್‌ನಿಂದ ದೂರವಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ