AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿನ ಬಳೆ ಹಾಕಿಕೊಳ್ಳುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

ಗಾಜಿನ ಬಳೆ ಅತ್ಯಂತ ಶ್ರೇಷ್ಠ ಎನ್ನಲಾಗುತ್ತದೆ. ಹಾಗಾಗಿ ಹಿಂದಿನ ಕಾಲದಿಂದಲೂ ಮಹಿಳೆಯರು ಬಳೆಗಳನ್ನು ಧರಿಸುತ್ತಾ ಬಂದಿದ್ದಾರೆ. ಆದರೆ ಈಗಿನ ದಿನಗಳಲ್ಲಿ ಈ ಪದ್ಧತಿ ಕ್ರಮೇಣ ಕಡಿಮೆಯಾಗುತ್ತಾ ಬಂದಿದೆ. ಹಬ್ಬ ಹರಿದಿನಗಳ ಸಮಯದಲ್ಲಿ ಮಾತ್ರ ಬಳೆಗಳನ್ನು ತೊಡುವವರು ಇದ್ದಾರೆ. ಆದರೆ ನಮ್ಮ ಪೂರ್ವಜರು ಬಳೆಗಳನ್ನು ಏಕೆ ಧರಿಸಬೇಕು ಎನ್ನುತ್ತಿದ್ದರು? ಇದರ ಹಿಂದಿರುವ ಕಾರಣವೇನು ತಿಳಿದುಕೊಳ್ಳಿ.

ಗಾಜಿನ ಬಳೆ ಹಾಕಿಕೊಳ್ಳುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 14, 2024 | 6:11 PM

Share

ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳು ಕೈಗಳಿಗೆ ಬಳೆಯನ್ನು ಧರಿಸುತ್ತಾರೆ. ಅದರಲ್ಲಿಯೂ ಗಾಜಿನ ಬಳೆ ಅತ್ಯಂತ ಶ್ರೇಷ್ಠ ಎನ್ನಲಾಗುತ್ತದೆ. ಹಾಗಾಗಿ ಹಿಂದಿನ ಕಾಲದಿಂದಲೂ ಮಹಿಳೆಯರು ಬಳೆಗಳನ್ನು ಧರಿಸುತ್ತಾ ಬಂದಿದ್ದಾರೆ. ಆದರೆ ಈಗಿನ ದಿನಗಳಲ್ಲಿ ಈ ಪದ್ಧತಿ ಕ್ರಮೇಣ ಕಡಿಮೆಯಾಗುತ್ತಾ ಬಂದಿದೆ. ಹಬ್ಬ ಹರಿದಿನಗಳ ಸಮಯದಲ್ಲಿ ಮಾತ್ರ ಬಳೆಗಳನ್ನು ತೊಡುವವರು ಇದ್ದಾರೆ. ಆದರೆ ನಮ್ಮ ಪೂರ್ವಜರು ಬಳೆಗಳನ್ನು ಏಕೆ ಧರಿಸಬೇಕು ಎನ್ನುತ್ತಿದ್ದರು? ಇದರ ಹಿಂದಿರುವ ಕಾರಣವೇನು ತಿಳಿದುಕೊಳ್ಳಿ.

ವೈಜ್ಞಾನಿಕ ದೃಷ್ಟಿಯಲ್ಲಿ ನೋಡುವುದಾದರೆ ಬಳೆಗಳು ಮಹಿಳೆಯರ ಆರೋಗ್ಯವನ್ನು ಕಾಪಾಡುತ್ತದೆ. ಇದು ನಿಮಗೆ ಆಶ್ಚರ್ಯ ಎನಿಸಬಹುದು ಆದರೆ ಸತ್ಯ. ಮಹಿಳೆಯರು ಪ್ರತಿನಿತ್ಯ ಬಳೆಗಳನ್ನು ಹಾಕಿಕೊಳ್ಳುವುದು ಒಳ್ಳೆಯದು. ಆಕ್ಯೂಪಂಚರ್‌ನಲ್ಲಿ ನೀವು ನೋಡಿರಬಹುದು ದೇಹದ ಯಾವ ಭಾಗದ ಮೇಲೆ ಒತ್ತಡ ಹಾಕಿದರೆ ಏನು ಪ್ರಯೋಜನ ಸಿಗಲಿದೆ ಎಂದು ಹೇಳಲಾಗುತ್ತದೆ. ಅದೇ ರೀತಿ ಕೈ ಬಳೆಗಳನ್ನು ಹಾಕುವುದರಿಂದ ಇದು ಮಣಿಗಂಟು ಅಥವಾ ಮಣಿಕಟ್ಟಿನ ಮೇಲೆ ಒತ್ತಡ ಹಾಕುತ್ತದೆ ಇದು ಮಹಿಳೆಯರ ಗರ್ಭಕೋಶದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಬಿಪಿ ನಿಯಂತ್ರಣಕ್ಕೆ ಮಾತ್ರೆ ತೆಗೆದುಕೊಳ್ಳುವವರು ಈ ಸಲಹೆಯನ್ನು ಪಾಲನೆ ಮಾಡಿ

ಗಂಡು- ಹೆಣ್ಣಿನ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ

ಕೈ ಬಳೆಗಳ ಶಬ್ದ ಕೇಳಲು ತುಂಬಾ ಹಿತವಾಗಿರುವುದರಿಂದ ಮನಸ್ಸಿನ ಒತ್ತಡ ಕಡಿಮೆಯಾಗುತ್ತದೆ. ಚಿಂತೆ ದೂರವಾಗುತ್ತದೆ. ಅಲ್ಲದೆ ಗಾಜಿನ ಬಳೆಗಳನ್ನು ಧರಿಸುವುದರಿಂದ ರಕ್ತ ಸಂಚಾರ ತುಂಬಾ ಚೆನ್ನಾಗಿ ಆಗುತ್ತದೆ ಅಲ್ಲದೆ ಇದು ಅಧಿಕ ರಕ್ತದೊತ್ತಡ ತಡೆಗಟ್ಟಲು ಕೂಡ ಸಹಕಾರಿಯಾಗಿದೆ. ಅಲ್ಲದೆ ಬಳೆಗಳು ಗಂಡು- ಹೆಣ್ಣಿನ ನಡುವಿನ ಬಾಂಧವ್ಯ ಗಟ್ಟಿಯಾಗಿಸುತ್ತದೆ. ಪತ್ನಿಯ ಕೈ ಬಳೆ ಶಬ್ದ ಅವಳೆಡೆಗೆ ಆಸಕ್ತಿ ಹೆಚ್ಚುವಂತೆ ಮಾಡುತ್ತದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯ ಮೂಡಲು ಸಹಕಾರಿಯಾಗುತ್ತದೆ. ಪುರಾಣಗಳಲ್ಲಿಯೂ ಗಾಜಿನ ಬಳೆಗಳನ್ನು ಧರಿಸುವುದು ತುಂಬಾ ಶುಭವೆಂದು ಹೇಳಲಾಗುತ್ತದೆ. ಮುತ್ತೈದೆಯರು ಕೆಂಪು ಮತ್ತು ಹಸಿರು ಬಳೆಗಳನ್ನು ಹಾಕುವುದು ಒಳ್ಳೆಯದು ಎನ್ನುವ ನಂಬಿಕೆ ಇದೆ. ಹಾಗಾಗಿ ವರಮಹಾಲಕ್ಷ್ಮೀ ಹಬ್ಬದ ದಿನ ಬಳೆಗಳನ್ನು ಹಾಕಿಕೊಳ್ಳುವ ಮೂಲಕ ಆರೋಗ್ಯಕರ ಅಭ್ಯಾಸವನ್ನು ರೂಢಿಸಿಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು