AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿನ ಬಳೆ ಹಾಕಿಕೊಳ್ಳುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

ಗಾಜಿನ ಬಳೆ ಅತ್ಯಂತ ಶ್ರೇಷ್ಠ ಎನ್ನಲಾಗುತ್ತದೆ. ಹಾಗಾಗಿ ಹಿಂದಿನ ಕಾಲದಿಂದಲೂ ಮಹಿಳೆಯರು ಬಳೆಗಳನ್ನು ಧರಿಸುತ್ತಾ ಬಂದಿದ್ದಾರೆ. ಆದರೆ ಈಗಿನ ದಿನಗಳಲ್ಲಿ ಈ ಪದ್ಧತಿ ಕ್ರಮೇಣ ಕಡಿಮೆಯಾಗುತ್ತಾ ಬಂದಿದೆ. ಹಬ್ಬ ಹರಿದಿನಗಳ ಸಮಯದಲ್ಲಿ ಮಾತ್ರ ಬಳೆಗಳನ್ನು ತೊಡುವವರು ಇದ್ದಾರೆ. ಆದರೆ ನಮ್ಮ ಪೂರ್ವಜರು ಬಳೆಗಳನ್ನು ಏಕೆ ಧರಿಸಬೇಕು ಎನ್ನುತ್ತಿದ್ದರು? ಇದರ ಹಿಂದಿರುವ ಕಾರಣವೇನು ತಿಳಿದುಕೊಳ್ಳಿ.

ಗಾಜಿನ ಬಳೆ ಹಾಕಿಕೊಳ್ಳುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 14, 2024 | 6:11 PM

Share

ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳು ಕೈಗಳಿಗೆ ಬಳೆಯನ್ನು ಧರಿಸುತ್ತಾರೆ. ಅದರಲ್ಲಿಯೂ ಗಾಜಿನ ಬಳೆ ಅತ್ಯಂತ ಶ್ರೇಷ್ಠ ಎನ್ನಲಾಗುತ್ತದೆ. ಹಾಗಾಗಿ ಹಿಂದಿನ ಕಾಲದಿಂದಲೂ ಮಹಿಳೆಯರು ಬಳೆಗಳನ್ನು ಧರಿಸುತ್ತಾ ಬಂದಿದ್ದಾರೆ. ಆದರೆ ಈಗಿನ ದಿನಗಳಲ್ಲಿ ಈ ಪದ್ಧತಿ ಕ್ರಮೇಣ ಕಡಿಮೆಯಾಗುತ್ತಾ ಬಂದಿದೆ. ಹಬ್ಬ ಹರಿದಿನಗಳ ಸಮಯದಲ್ಲಿ ಮಾತ್ರ ಬಳೆಗಳನ್ನು ತೊಡುವವರು ಇದ್ದಾರೆ. ಆದರೆ ನಮ್ಮ ಪೂರ್ವಜರು ಬಳೆಗಳನ್ನು ಏಕೆ ಧರಿಸಬೇಕು ಎನ್ನುತ್ತಿದ್ದರು? ಇದರ ಹಿಂದಿರುವ ಕಾರಣವೇನು ತಿಳಿದುಕೊಳ್ಳಿ.

ವೈಜ್ಞಾನಿಕ ದೃಷ್ಟಿಯಲ್ಲಿ ನೋಡುವುದಾದರೆ ಬಳೆಗಳು ಮಹಿಳೆಯರ ಆರೋಗ್ಯವನ್ನು ಕಾಪಾಡುತ್ತದೆ. ಇದು ನಿಮಗೆ ಆಶ್ಚರ್ಯ ಎನಿಸಬಹುದು ಆದರೆ ಸತ್ಯ. ಮಹಿಳೆಯರು ಪ್ರತಿನಿತ್ಯ ಬಳೆಗಳನ್ನು ಹಾಕಿಕೊಳ್ಳುವುದು ಒಳ್ಳೆಯದು. ಆಕ್ಯೂಪಂಚರ್‌ನಲ್ಲಿ ನೀವು ನೋಡಿರಬಹುದು ದೇಹದ ಯಾವ ಭಾಗದ ಮೇಲೆ ಒತ್ತಡ ಹಾಕಿದರೆ ಏನು ಪ್ರಯೋಜನ ಸಿಗಲಿದೆ ಎಂದು ಹೇಳಲಾಗುತ್ತದೆ. ಅದೇ ರೀತಿ ಕೈ ಬಳೆಗಳನ್ನು ಹಾಕುವುದರಿಂದ ಇದು ಮಣಿಗಂಟು ಅಥವಾ ಮಣಿಕಟ್ಟಿನ ಮೇಲೆ ಒತ್ತಡ ಹಾಕುತ್ತದೆ ಇದು ಮಹಿಳೆಯರ ಗರ್ಭಕೋಶದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಬಿಪಿ ನಿಯಂತ್ರಣಕ್ಕೆ ಮಾತ್ರೆ ತೆಗೆದುಕೊಳ್ಳುವವರು ಈ ಸಲಹೆಯನ್ನು ಪಾಲನೆ ಮಾಡಿ

ಗಂಡು- ಹೆಣ್ಣಿನ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ

ಕೈ ಬಳೆಗಳ ಶಬ್ದ ಕೇಳಲು ತುಂಬಾ ಹಿತವಾಗಿರುವುದರಿಂದ ಮನಸ್ಸಿನ ಒತ್ತಡ ಕಡಿಮೆಯಾಗುತ್ತದೆ. ಚಿಂತೆ ದೂರವಾಗುತ್ತದೆ. ಅಲ್ಲದೆ ಗಾಜಿನ ಬಳೆಗಳನ್ನು ಧರಿಸುವುದರಿಂದ ರಕ್ತ ಸಂಚಾರ ತುಂಬಾ ಚೆನ್ನಾಗಿ ಆಗುತ್ತದೆ ಅಲ್ಲದೆ ಇದು ಅಧಿಕ ರಕ್ತದೊತ್ತಡ ತಡೆಗಟ್ಟಲು ಕೂಡ ಸಹಕಾರಿಯಾಗಿದೆ. ಅಲ್ಲದೆ ಬಳೆಗಳು ಗಂಡು- ಹೆಣ್ಣಿನ ನಡುವಿನ ಬಾಂಧವ್ಯ ಗಟ್ಟಿಯಾಗಿಸುತ್ತದೆ. ಪತ್ನಿಯ ಕೈ ಬಳೆ ಶಬ್ದ ಅವಳೆಡೆಗೆ ಆಸಕ್ತಿ ಹೆಚ್ಚುವಂತೆ ಮಾಡುತ್ತದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯ ಮೂಡಲು ಸಹಕಾರಿಯಾಗುತ್ತದೆ. ಪುರಾಣಗಳಲ್ಲಿಯೂ ಗಾಜಿನ ಬಳೆಗಳನ್ನು ಧರಿಸುವುದು ತುಂಬಾ ಶುಭವೆಂದು ಹೇಳಲಾಗುತ್ತದೆ. ಮುತ್ತೈದೆಯರು ಕೆಂಪು ಮತ್ತು ಹಸಿರು ಬಳೆಗಳನ್ನು ಹಾಕುವುದು ಒಳ್ಳೆಯದು ಎನ್ನುವ ನಂಬಿಕೆ ಇದೆ. ಹಾಗಾಗಿ ವರಮಹಾಲಕ್ಷ್ಮೀ ಹಬ್ಬದ ದಿನ ಬಳೆಗಳನ್ನು ಹಾಕಿಕೊಳ್ಳುವ ಮೂಲಕ ಆರೋಗ್ಯಕರ ಅಭ್ಯಾಸವನ್ನು ರೂಢಿಸಿಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?