AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸಾಕ್ಸ್ ಧರಿಸದೆ ಶೂಗಳನ್ನು ಧರಿಸುತ್ತಿದ್ದೀರಾ? ಈ ವಿಷಯಗಳು ತಿಳಿದಿರಲಿ

ಸಾಕ್ಸ್ ಇಲ್ಲದೆ ಶೂಗಳನ್ನು ಧರಿಸುವುದರಿಂದ ಪಾದಗಳಲ್ಲಿ ದುರ್ವಾಸನೆ ಬರುವುದಲ್ಲದೆ ಆರೋಗ್ಯಕ್ಕೂ ಹಾನಿಯಾಗುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಪಾದಗಳು ದೇಹದ ಬೆವರುವ ಭಾಗಗಳಲ್ಲಿ ಒಂದಾಗಿದೆ. ಅದರಲ್ಲಿಯೂ ಬೂಟುಗಳನ್ನು ದಿನಪೂರ್ತಿ ಧರಿಸುವುದರಿಂದ ಮತ್ತಷ್ಟು ಬೆವರಬಹುದು. ಹಾಗಾಗಿ ಇದರಿಂದ ಮುಕ್ತಿ ಪಡೆಯಲು ಮತ್ತು ವಾಸನೆ ಬರದಂತೆ ತಡೆಯಲು, ಜೊತೆಗೆ ಕಾಲುಗಳು ಒಣಗಿರಲು ಸಾಕ್ಸ್ ಉತ್ತಮ. ಇದೆಲ್ಲದರ ಜೊತೆಗೆ ಸಾಕ್ಸ್ ಪಾದಗಳಲ್ಲಿ ಪದೇ ಪದೇ ಬೆವರುವುದನ್ನು ತಡೆಯುತ್ತವೆ. ಹಾಗಾದರೆ ಸಾಕ್ಸ್ ಇಲ್ಲದೆ ಶೂಗಳನ್ನು ಧರಿಸುವುದರಿಂದ ಆಗುವ ಅನಾನುಕೂಲಗಳು ಯಾವುವು? ಸಾಕ್ಸ್ ನಮ್ಮ ಪಾದಗಳ ಆರೋಗ್ಯವನ್ನು ಯಾವ ರೀತಿಯಲ್ಲಿ ಕಾಪಾಡುತ್ತವೆ? ಎಂಬುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Health Tips: ಸಾಕ್ಸ್ ಧರಿಸದೆ ಶೂಗಳನ್ನು ಧರಿಸುತ್ತಿದ್ದೀರಾ? ಈ ವಿಷಯಗಳು ತಿಳಿದಿರಲಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 26, 2024 | 5:01 PM

Share

ಸಾಮಾನ್ಯವಾಗಿ ಬಹಳಷ್ಟು ಜನರು ಸಾಕ್ಸ್ ಇಲ್ಲದೆ ಶೂಗಳನ್ನು ಧರಿಸುತ್ತಿದ್ದಾರೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಈ ಅಭ್ಯಾಸವು ಯುವಕರಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಸಾಕ್ಸ್ ಇಲ್ಲದೆ ಶೂಗಳನ್ನು ಧರಿಸುವುದರಿಂದ ಪಾದಗಳಲ್ಲಿ ದುರ್ವಾಸನೆ ಬರುವುದಲ್ಲದೆ ಆರೋಗ್ಯಕ್ಕೂ ಹಾನಿಯಾಗುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಪಾದಗಳು ದೇಹದ ಬೆವರುವ ಭಾಗಗಳಲ್ಲಿ ಒಂದಾಗಿದೆ. ಅದರಲ್ಲಿಯೂ ಬೂಟುಗಳನ್ನು ದಿನಪೂರ್ತಿ ಧರಿಸುವುದರಿಂದ ಮತ್ತಷ್ಟು ಬೆವರಬಹುದು. ಹಾಗಾಗಿ ಇದರಿಂದ ಮುಕ್ತಿ ಪಡೆಯಲು ಮತ್ತು ವಾಸನೆ ಬರದಂತೆ ತಡೆಯಲು, ಜೊತೆಗೆ ಕಾಲುಗಳು ಒಣಗಿರಲು ಸಾಕ್ಸ್ ಉತ್ತಮ. ಇದೆಲ್ಲದರ ಜೊತೆಗೆ ಇದು ಪಾದಗಳಲ್ಲಿ ಪದೇ ಪದೇ ಬೆವರುವುದನ್ನು ತಡೆಯುತ್ತವೆ. ಹಾಗಾದರೆ ಸಾಕ್ಸ್ ಇಲ್ಲದೆ ಶೂಗಳನ್ನು ಧರಿಸುವುದರಿಂದ ಆಗುವ ಅನಾನುಕೂಲಗಳು ಯಾವುವು? ಸಾಕ್ಸ್ ನಮ್ಮ ಪಾದಗಳ ಆರೋಗ್ಯವನ್ನು ಯಾವ ರೀತಿಯಲ್ಲಿ ಕಾಪಾಡುತ್ತವೆ? ಎಂಬುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೇಸಿಗೆಗೆ ಮಾತ್ರವಲ್ಲ ಚಳಿಗಾಲಕ್ಕೂ ಒಳ್ಳೆಯದು;

ಸಾಕ್ಸ್ ಧರಿಸುವುದರಿಂದ ಅನೇಕ ಪ್ರಯೋಜನಗಳಿವೆ. ಇದು ನಿಮ್ಮನ್ನು ಅನೇಕ ರೀತಿಯ ಬ್ಯಾಕ್ಟೀರಿಯಾಗಳಿಂದ ರಕ್ಷಿಸುತ್ತದೆ. ಅಲ್ಲದೆ, ಇವುಗಳನ್ನು ಧರಿಸುವುದರಿಂದ ಯಾವುದೇ ರೀತಿಯ ಶಿಲೀಂಧ್ರ ಅಥವಾ ಬ್ಯಾಕ್ಟೀರಿಯಾದ ಸೋಂಕುಗಳು ಉಂಟಾಗುವುದಿಲ್ಲ. ಸಾಕ್ಸ್ ಬೇಸಿಗೆಯಲ್ಲಿ ಬೆವರದಿರುವಂತೆ ತಡೆಯುವುದು ಮಾತ್ರವಲ್ಲದೆ ಚಳಿಗಾಲಕ್ಕೂ ಒಳ್ಳೆಯದು. ಏಕೆಂದರೆ ಆ ಸಮಯದಲ್ಲಿ ಸಾಕ್ಸ್ ಧರಿಸುವುದರಿಂದ ಶೀತದಿಂದ ಪರಿಹಾರ ಸಿಗುತ್ತದೆ. ಅಲ್ಲದೆ ಇವು ನಿಮ್ಮ ಪಾದಗಳನ್ನು ಬೆಚ್ಚಗಿಡುತ್ತವೆ.

ಅಲರ್ಜಿ ಸಮಸ್ಯೆ ಉಂಟಾಗಬಹುದು

ಸಾಕ್ಸ್ ಧರಿಸದೆ ಶೂಗಳನ್ನು ಧರಿಸುವವರಿಗೆ ಅಲರ್ಜಿ ಸಮಸ್ಯೆ ಉಂಟಾಗಬಹುದು. ಕೆಲವರು ತುಂಬಾ ಸೂಕ್ಷ್ಮ ಚರ್ಮವನ್ನು ಹೊಂದಿರುತ್ತಾರೆ. ಹಾಗಾಗಿ ಅಂತವರು, ಸಾಕ್ಸ್ ಧರಿಸದೆ ಶೂಗಳನ್ನು ಧರಿಸಬೇಡಿ. ಇಲ್ಲವಾದಲ್ಲಿ ಹಲವರಿಗೆ ಕಾಲು ಬೆವರು ಬಂದು ಪಾದಗಳಲ್ಲಿ ಅನೇಕ ರೀತಿಯ ತೊಂದರೆಯನ್ನು ಅನುಭವಿಸುತ್ತಾರೆ. ಬೆವರು, ಬೂಟುಗಳೊಳಗಿನ ತೇವಾಂಶವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಇದು ವಿವಿಧ ರೀತಿಯ ಬ್ಯಾಕ್ಟೀರಿಯಾ ಅಥವಾ ಶಿಲೀಂಧ್ರಗಳ ಸೋಂಕಿಗೆ ಕಾರಣವಾಗಬಹುದು. ಕೆಲವರಿಗೆ ಸಾಕ್ಸ್ ಇಲ್ಲದೆ ಬೂಟುಗಳನ್ನು ಧರಿಸುವುದರಿಂದ ಪಾದಗಳ ಮೇಲೆ ಗುಳ್ಳೆಗಳು ಉಂಟಾಗಬಹುದು. ಈ ರೀತಿಯ ಸಮಸ್ಯೆ ಕಾಡದಿರಲು ಶೂಗಳನ್ನು ಧರಿಸುವವರು ಸಾಕ್ಸ್ ಧರಿಸಬೇಕು ಎಂದು ತಜ್ಞರು ಹೇಳುತ್ತಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!