AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಆಯುರ್ವೇದ ತಜ್ಞರು ನೀಡಿದ ಸಲಹೆ

ದೇಶದ ಹಲವು ಭಾಗಗಳಲ್ಲಿ ಈಗ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದೆ. ಹಗಲಿನ ತಾಪಮಾನ ಗಮನಾರ್ಹವಾಗಿ ಏರುತ್ತಿದೆ. ಈ ರೀತಿ ಹವಾಮಾನದಲ್ಲಿನ ಬದಲಾವಣೆಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದರೆ ಹವಾಮಾನ ಬದಲಾವಣೆ ಈ ರೀತಿ ಬದಲಾಗುತ್ತಿರುವಾಗ ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸರಳ ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗಬೇಕಾಗಬಹುದು. ಹಾಗಾದರೆ ಆಹಾರದಲ್ಲಿ ಯಾವ ರೀತಿಯ ಬದಲಾವಣೆ ಮಾಡಿಕೊಳ್ಳಬೇಕು, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಆಯುರ್ವೇದ ತಜ್ಞರು ನೀಡಿದ ಸಲಹೆ
Weather Change Health TipsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 16, 2026 | 9:34 PM

Share

ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಅಕಸ್ಮಿಕ ಬದಲಾವಣೆಗಳು ಕಾಣಿಸುತ್ತಿವೆ. ಹಗಲು ಸಮಯದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದ್ದು, ಸಂಜೆ ವೇಳೆಗೆ ಸ್ವಲ್ಪ ತಂಪು ಅನುಭವವಾಗುತ್ತಿದೆ. ಕೆಲವೊಮ್ಮೆ ಏಕಾಏಕಿ ಮಳೆ, ಮತ್ತೆ ತೀವ್ರ ಬಿಸಿಲು ಈ ರೀತಿಯ ಬದಲಾವಣೆಗಳು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಆದರೆ ಹವಾಮಾನ ಬದಲಾವಣೆ ಈ ರೀತಿ ಬದಲಾಗುತ್ತಿರುವಾಗ ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸರಳ ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗಬೇಕಾಗಬಹುದು. ಹಾಗಾದರೆ ಆಹಾರದಲ್ಲಿ ಯಾವ ರೀತಿಯ ಬದಲಾವಣೆ ಮಾಡಿಕೊಳ್ಳಬೇಕು, ರೋಗನಿರೋಧಕ ಶಕ್ತಿ (Immune System) ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹವಾಮಾನ ಬದಲಾವಣೆಯಿಂದ ಉಂಟಾಗುವ ಸಮಸ್ಯೆಗಳು:

ಆಯುರ್ವೇದದ ಪ್ರಕಾರ, ಹವಾಮಾನ ಬದಲಾವಣೆ ದೇಹದ ವಾತ, ಪಿತ್ತ ಮತ್ತು ಕಫ ದೋಷಗಳ ಸಮತೋಲನವನ್ನು ಹಾಳು ಮಾಡುತ್ತದೆ. ಇದರಿಂದ ಜ್ವರ, ಶೀತ, ಕೆಮ್ಮು, ಅಲರ್ಜಿ ಹಾಗೂ ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ವೈರಲ್ ಸೋಂಕುಗಳ ಅಪಾಯವೂ ಹೆಚ್ಚಾಗುತ್ತದೆ. ವೈದ್ಯರಾದ ಡಾ. ಚಂಚಲ ಅವರ ಪ್ರಕಾರ, ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ಆಹಾರ ಮತ್ತು ಜೀವನಶೈಲಿ ಬಹಳ ಮುಖ್ಯ ಎನ್ನುತ್ತಾರೆ.

ಇದನ್ನೂ ಓದಿ: ಬೆಂಗಳೂರಿಗರೇ ಆರೋಗ್ಯದ ಬಗ್ಗೆ ಬೇಡ ನಿರ್ಲಕ್ಷ್ಯ; ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ಈ ಹವಾಮಾನದಲ್ಲಿ ಹಗುರವಾಗಿ ಜೀರ್ಣವಾಗುವ ಆಹಾರ ಸೇವಿಸುವುದು ಉತ್ತಮ. ಪಪ್ಪಾಯಿ, ದಾಳಿಂಬೆ, ಕಿತ್ತಳೆ ಹಣ್ಣುಗಳನ್ನು ಆಹಾರದಲ್ಲಿ ಸೇರಿಸಬಹುದು. ಜೊತೆಗೆ ಶುಂಠಿ ಮತ್ತು ತುಳಸಿ ಚಹಾ ಸೇವಿಸುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಫಾಸ್ಟ್ ಫುಡ್ ಮತ್ತು ಎಣ್ಣೆ ಪದಾರ್ಥಗಳನ್ನು ತಪ್ಪಿಸುವುದು ಉತ್ತಮ, ಏಕೆಂದರೆ ಇವು ಪಿತ್ತ ಮತ್ತು ಕಫವನ್ನು ಹೆಚ್ಚಿಸಬಹುದು. ತಣ್ಣೀರು ಬದಲಾಗಿ ಕೊಂಚ ಬೆಚ್ಚಗಿನ ಅಥವಾ ಸಾಮಾನ್ಯ ನೀರನ್ನು ಕುಡಿಯುವುದು ಆರೋಗ್ಯಕರ. ಇದರ ಜೊತೆಗೆ ತುಳಸಿ, ಗಿಲೋಯ್ ಮತ್ತು ಅಶ್ವಗಂಧಾ ಮುಂತಾದ ಔಷಧೀಯ ಸಸ್ಯಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕ. ಇವು ದೇಹವನ್ನು ಹವಾಮಾನ ಬದಲಾವಣೆಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುತ್ತವೆ.

ಪಾಲಿಸಬೇಕಾದ ಮುನ್ನೆಚ್ಚರಿಕೆಗಳು

ಮಧ್ಯಾಹ್ನ 12ರಿಂದ 4 ಗಂಟೆಯ ನಡುವೆ ತೀವ್ರ ಬಿಸಿಲಿಗೆ ಹೋಗುವುದನ್ನು ತಪ್ಪಿಸಬೇಕು. ಹೊರಗೆ ಹೋಗುವಾಗ ತಲೆ ಮುಚ್ಚಿಕೊಳ್ಳುವುದು ಉತ್ತಮ. ಸಾಕಷ್ಟು ನೀರು ಕುಡಿಯುವುದು ಮತ್ತು ದೇಹವನ್ನು ಹೈಡ್ರೇಟ್ ಇಟ್ಟುಕೊಳ್ಳುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ