ಮಕ್ಕಳ ಆರೋಗ್ಯ ಪದೇ ಪದೇ ಹದಗೆಡುತ್ತಾ? ಹಾಗಿದ್ರೆ ಈ ರೀತಿ ಆರೈಕೆ ಮಾಡಿ!

ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆಗಳು ಕಂಡುಬರುತ್ತಿವೆ. ಇದು ಮಕ್ಕಳ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಅವರ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯವಾಗುತ್ತದೆ. ಹಿರಿಯರಿಗಿಂತ ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಇಂತಹ ಬದಲಾವಣೆಗಳಿಗೆ ಅವರು ಬೇಗ ತುತ್ತಾಗುತ್ತಾರೆ. ಹಾಗಾದರೆ ಮಕ್ಕಳಲ್ಲಿ ಕಂಡುಬರುವ ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು, ಈ ಸಮಯದಲ್ಲಿ ಅವರ ಆರೈಕೆ ಹೇಗೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಕ್ಕಳ ಆರೋಗ್ಯ ಪದೇ ಪದೇ ಹದಗೆಡುತ್ತಾ? ಹಾಗಿದ್ರೆ ಈ ರೀತಿ ಆರೈಕೆ ಮಾಡಿ!
Kids Health
Image Credit source: Getty images

Updated on: May 06, 2026 | 6:51 PM

ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ಆಗುತ್ತಿರುವ ನಿರಂತರ ಬದಲಾವಣೆಗಳು ಮಕ್ಕಳ ಆರೋಗ್ಯದ (Kids’ Health) ಮೇಲೆ ನೇರ ಪರಿಣಾಮ ಬೀರುತ್ತಿವೆ. ಹೆಚ್ಚು ಬಿಸಿಲು, ಸಂಜೆಯ ಸಮಯ ಬೀಸುವ ತಣ್ಣನೆಯ ಗಾಳಿ ಹಾಗೂ ತಾಪಮಾನದಲ್ಲಿ ಆಗುವ ಏರುಪೇರು ಮಕ್ಕಳಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಿರಿಯರಿಗಿಂತ ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಇಂತಹ ಬದಲಾವಣೆಗಳಿಗೆ ಅವರು ಬೇಗ ತುತ್ತಾಗುತ್ತಾರೆ. ಹಾಗಾದರೆ ಮಕ್ಕಳಲ್ಲಿ ಕಂಡುಬರುವ ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು, ಈ ಸಮಯದಲ್ಲಿ ಅವರ ಆರೈಕೆ ಹೇಗೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ಹವಾಮಾನ ಬದಲಾವಣೆಯ ಸಮಯದಲ್ಲಿ ಮಕ್ಕಳಲ್ಲಿ ಪದೇಪದೇ ಜ್ವರ, ಕೆಮ್ಮು ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ಜೊತೆಗೆ ದೌರ್ಬಲ್ಯ, ಊಟ, ತಿಂಡಿ ಸರಿಯಾಗಿ ಮಾಡದಿರುವುದು, ಹೆಚ್ಚು ನಿದ್ರೆ ಅಥವಾ ಚಿಡಿಚಿಡಿ ಇತ್ಯಾದಿ ಲಕ್ಷಣಗಳು ಕಾಣಿಸಬಹುದು. ಕೆಲವು ಮಕ್ಕಳಲ್ಲಿ ಅಲರ್ಜಿ, ಉಸಿರಾಟದ ತೊಂದರೆ ಮತ್ತು ಚರ್ಮದ ಮೇಲೆ ರಾಶ್‌ಗಳು ಕಾಣಿಸಬಹುದು. ಈ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಅಗತ್ಯ.

ಇದನ್ನೂ ಓದಿ: ಮಕ್ಕಳು ಪದೇಪದೇ ಬೀಳುವುದರಿಂದ ಮೆದುಳಿಗೆ ಅಪಾಯವಾಗುತ್ತದೆಯೇ? ವೈದ್ಯರನ್ನು ಯಾವಾಗ ಸಂಪರ್ಕ ಮಾಡಬೇಕು?

ಮಕ್ಕಳ ಆರೈಕೆ ಹೇಗೆ ಮಾಡಬೇಕು?

ಮಕ್ಕಳಿಗೆ ಸಮತೋಲನ ಮತ್ತು ಪೌಷ್ಟಿಕ ಆಹಾರ ನೀಡುವುದು ಬಹಳ ಮುಖ್ಯ. ಹಣ್ಣು, ತರಕಾರಿ ಮತ್ತು ವಿಟಮಿನ್‌ಗಳುಳ್ಳ ಆಹಾರವನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಮಕ್ಕಳಿಗೆ ಸಾಕಷ್ಟು ನೀರು ಕುಡಿಸುವುದು ಮತ್ತು ಹವಾಮಾನಕ್ಕೆ ಅನುಗುಣವಾದ ಉಡುಪುಗಳನ್ನು ಧರಿಸುವುದು ಅಗತ್ಯ. ಸ್ವಚ್ಛತೆಯ ಬಗ್ಗೆ ವಿಶೇಷ ಗಮನ ಹರಿಸಿ, ಕೈ ತೊಳೆಯುವ ಅಭ್ಯಾಸವನ್ನು ಬೆಳೆಸಬೇಕು. ಅದರ ಜೊತೆಗೆ ಮಕ್ಕಳಿಗೆ ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಸಿಗುವಂತೆ ನೋಡಿಕೊಳ್ಳಬೇಕು. ತುಂಬಾ ಬಿಸಿ ಅಥವಾ ತಣ್ಣನೆಯ ಆಹಾರಗಳನ್ನು ತಪ್ಪಿಸುವುದು ಉತ್ತಮ. ಹೊರಗಡೆ ಆಟವಾಡುವಾಗ ಧೂಳು, ತೀವ್ರ ಬಿಸಿಲು ಅಥವಾ ತಣ್ಣನೆಯ ಗಾಳಿಯಿಂದ ರಕ್ಷಿಸಬೇಕು. ಮನೆಗೆ ಬಂದ ನಂತರ ಕೈ- ಕಾಲುಗಳನ್ನು ಸ್ವಚ್ಛಗೊಳಿಸುವ ಅಭ್ಯಾಸ ಮಾಡಿಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us