Weight Loss: ಹೊಟ್ಟೆಯ ಬೊಜ್ಜಿನಿಂದ ಬೇಸತ್ತಿದ್ದೀರಾ?; ಕೊಬ್ಬು ಕರಗಿಸಲು ಬೆಳಗ್ಗೆ ಈ ಪಾನೀಯ ಸೇವಿಸಿ

Belly Fat: ಹೊಟ್ಟೆಯ ಕೊಬ್ಬನ್ನು ತ್ವರಿತವಾಗಿ ಕಡಿಮೆ ಮಾಡಲು ನೀವು ಖಾಲಿ ಹೊಟ್ಟೆಯಲ್ಲಿ ಸೇವಿಸಲು ಸುಲಭವಾಗಿ ತಯಾರಿಸಬಹುದಾದ 6 ಪಾನೀಯಗಳಿವು...

Weight Loss: ಹೊಟ್ಟೆಯ ಬೊಜ್ಜಿನಿಂದ ಬೇಸತ್ತಿದ್ದೀರಾ?; ಕೊಬ್ಬು ಕರಗಿಸಲು ಬೆಳಗ್ಗೆ ಈ ಪಾನೀಯ ಸೇವಿಸಿ
ಹೊಟ್ಟೆಯ ಬೊಜ್ಜು
Follow us
| Updated By: ಸುಷ್ಮಾ ಚಕ್ರೆ

Updated on: Apr 15, 2022 | 5:57 AM

ಹೊಟ್ಟೆಯ ಕೊಬ್ಬನ್ನು (Belly Fat) ಕಡಿಮೆ ಮಾಡುವುದು ಅಷ್ಟು ಸುಲಭವಲ್ಲ. ಆಹ್ವಾನಿಸದ ಅತಿಥಿಯಂತೆ ಹೊಟ್ಟೆಯ ಬೊಜ್ಜು ಇದ್ದಕ್ಕಿದ್ದಂತೆ ಕಾಣಿಸಿಕೊಂಡು ನಿಮ್ಮನ್ನು ಮುಜುಗರಕ್ಕೀಡುಮಾಡುತ್ತದೆ. ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ಹಿಡಿದು ಆರೋಗ್ಯಕರ ಆಹಾರವನ್ನು ಸೇವಿಸುವವರೆಗೆ ನಿಮ್ಮ ಹಳೆಯ ಜೋಡಿ ಜೀನ್ಸ್‌ಗೆ ಮತ್ತೆ ಹೊಂದಿಕೊಳ್ಳಲು ನೀವು ಹಲವಾರು ಜೀವನಶೈಲಿಯ ಬದಲಾವಣೆಗಳನ್ನು ಮಾಡಬೇಕಾಗಿದೆ. ನೀವು ಇತ್ತೀಚೆಗೆ ಆ ಹೊಟ್ಟೆಯ ಕೊಬ್ಬನ್ನು ಕರಗಿಸಲು ಪ್ರಯತ್ನಿಸುತ್ತಿದ್ದರೆ ಕೆಲವು ಸಲಹೆಗಳು ಇಲ್ಲಿವೆ. ಹೊಟ್ಟೆಯ ಕೊಬ್ಬನ್ನು ತ್ವರಿತವಾಗಿ ಕಡಿಮೆ ಮಾಡಲು ನೀವು ಖಾಲಿ ಹೊಟ್ಟೆಯಲ್ಲಿ ಸೇವಿಸಲು ಸುಲಭವಾಗಿ ತಯಾರಿಸಬಹುದಾದ 6 ಪಾನೀಯಗಳಿವು…

ಲಿಂಬೆ ರಸ- ಜೇನು ತುಪ್ಪ: ಬೆಳಿಗ್ಗೆ ಎದ್ದಕೂಡಲೆ ಜೇನುತುಪ್ಪ ಮತ್ತು ನಿಂಬೆ ನೀರನ್ನು ಕುಡಿಯುವುದು ತೂಕ ಇಳಿಸಿಕೊಳ್ಳಲು ಹಳೆಯ ಟ್ರಿಕ್ ಆಗಿದೆ ಮತ್ತು ಇದು ಭಾರತೀಯ ಮನೆಗಳಲ್ಲಿ ಸಾಮಾನ್ಯ ಅಭ್ಯಾಸವಾಗಿದೆ. ಒಂದು ಲೋಟ ಉಗುರುಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ಕುಡಿಯಿರಿ. ಇದು ನಿಮ್ಮ ದಿನಕ್ಕೆ ಉಲ್ಲಾಸಕರ ಆರಂಭವನ್ನು ನೀಡುತ್ತದೆ ಮತ್ತು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಆ್ಯಪಲ್ ಸೈಡರ್ ವಿನೆಗರ್: ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ, ಒಂದು ಟೀಚಮಚ ಆಪಲ್ ಸೈಡರ್ ವಿನೆಗರ್ ಸೇರಿಸಿ. ಬೆಳಿಗ್ಗೆ ಇದನ್ನು ಮೊದಲು ಕುಡಿಯಿರಿ ಮತ್ತು ಮುಂದಿನ 30 ನಿಮಿಷಗಳ ಕಾಲ ನೀವು ಏನನ್ನೂ ತಿನ್ನಬೇಡಿ. ಹೀಗೆ ಮಾಡುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆ. ಇದಲ್ಲದೆ, ಆಪಲ್ ಸೈಡರ್ ವಿನೆಗರ್ ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಜೀರಿಗೆ ನೀರು: ಜೀರಿಗೆ ಭಾರತೀಯ ಅಡುಗೆಮನೆಗಳಲ್ಲಿ ಒಂದು ಪ್ರಮುಖ ಅಂಶವಾಗಿದೆ. ಇದು ನಿಮ್ಮ ಮೆಚ್ಚಿನ ಅಡುಗೆಗೆ ಹೆಚ್ಚುವರಿ ಪರಿಮಳವನ್ನು ಸೇರಿಸುವುದು ಮಾತ್ರವಲ್ಲದೆ ನಿಮ್ಮ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಇದು ಸಕ್ಕರೆಯ ಮಟ್ಟ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ನೀವು ಒಂದು ಚಮಚ ಜೀರಿಗೆಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಬೇಕು. ಆ ನೀರನ್ನು ಸೋಸಿಕೊಂಡು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

ಸೋಂಪಿನ ನೀರು: ಬೆಳಿಗ್ಗೆ ಸೋಂಪಿನ ಕಾಳನ್ನು (ಫೆನ್ನೆಲ್ ಬೀಜಗಳು) ನೆನಸಿದ ನೀರನ್ನು ಕುಡಿಯುವುದು ತೂಕ ನಷ್ಟವನ್ನು ಉತ್ತೇಜಿಸುತ್ತದೆ. ಜೀರ್ಣಕ್ರಿಯೆಯ ಸಮಸ್ಯೆಗಳನ್ನು ನಿಭಾಯಿಸಲು ಇದು ಸಹಾಯ ಮಾಡುತ್ತದೆ. ಕೇವಲ ಒಂದು ಟೀ ಚಮಚ ಸೋಂಪಿನ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಇದನ್ನು ಸೋಸಿಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸಿ.

ಗ್ರೀನ್ ಟೀ: ನೀವು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದರೆ ಪುದೀನ ಎಲೆಗಳೊಂದಿಗೆ ಬಿಸಿಯಾದ ಗ್ರೀನ್ ಟೀ ಕುಡಿಯಿರಿ. ನೀವು ಒಂದೂವರೆ ಕಪ್ ನೀರನ್ನು ತೆಗೆದುಕೊಂಡು, ಅದರಲ್ಲಿ ಕೆಲವು ಪುದೀನ ಹಸಿರು ಎಲೆಗಳನ್ನು ಹಾಕಿ ಕುದಿಸಬೇಕು. ಆ ನೀರು ಕುದಿಯಲು ಶುರುವಾದ ನಂತರ ಗ್ರೀನ್ ಟೀಯನ್ನು ಸೇರಿಸಿ. ಅದನ್ನು ಇನ್ನೊಂದು 2-3 ನಿಮಿಷಗಳ ಕಾಲ ಕುದಿಸಿ. ಇದನ್ನು ಒಂದು ಕಪ್‌ಗೆ ಸೋಸಿ ಬೆಳಿಗ್ಗೆ ಸೇವಿಸಿ. ತೂಕ ನಷ್ಟಕ್ಕೆ ಇದು ಪರಿಣಾಮಕಾರಿ ಪಾನೀಯ ಎಂದು ಹೇಳಲಾಗುತ್ತದೆ.

ದಾಳಿಂಬೆ ರಸ : ದಾಳಿಂಬೆ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಸತು, ಪೊಟ್ಯಾಸಿಯಮ್, ಫೈಬರ್, ಕಬ್ಬಿಣ, ಒಮೆಗಾ -6 ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ಆಹಾರದ ನೈಟ್ರೇಟ್‌ಗಳನ್ನು ಒಳಗೊಂಡಿರುತ್ತದೆ, ಇದು ನೀವು ಮಾಡುವ ವ್ಯಾಯಾಮದ ಪರಿಣಾಮವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂಬುದು ಅನೇಕ ಅಧ್ಯಯನಗಳಲ್ಲಿ ಹೇಳಲಾಗಿದೆ.

ನಿಮ್ಮ ನೆಚ್ಚಿನ ಹಸಿರು ತರಕಾರಿಗಳಾದ ಆಮ್ಲಾ, ಪಾಲಕ್, ಎಲೆಕೋಸು, ಕೋಸುಗಡ್ಡೆ, ಹಾಗಲಕಾಯಿ ಮುಂತಾದವುಗಳ ಜ್ಯೂಸ್ ಅನ್ನು ನೀವು ಮನೆಯಲ್ಲಿಯೇ ತಯಾರಿಸಬಹುದು. ಹಸಿರು ತರಕಾರಿಗಳಲ್ಲಿ ಬಹಳಷ್ಟು ಜೀವಸತ್ವಗಳು ಮತ್ತು ಖನಿಜಗಳು ಕಂಡುಬರುತ್ತವೆ. ಬೀಟ್‌ರೂಟ್‌ನಲ್ಲಿರುವ ಕಬ್ಬಿಣದ ಅಂಶವು ನಿಮ್ಮ ದೇಹದಲ್ಲಿನ ರಕ್ತದ ಅನಿಯಮಿತತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ಚರ್ಮವನ್ನು ಆರೋಗ್ಯಕರವಾಗಿಸುತ್ತದೆ. ಆದರೆ, ಇದರಲ್ಲಿ ಇರುವ ಪ್ರೋಟೀನ್ ಮತ್ತು ಫೈಬರ್ ಪ್ರಮಾಣವು ನಿಮ್ಮ ತೂಕ ಇಳಿಸುವ ದಿನಚರಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: Fennel Benefits: ದಿನವೂ ಸೋಂಪು ನೆನೆಸಿದ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನ ಅಷ್ಟಿಷ್ಟಲ್ಲ!

Muskmelon Benefits: ಬೇಸಿಗೆಯಲ್ಲಿ ಹೆಚ್ಚು ಕರ್ಬೂಜ ಹಣ್ಣುಗಳನ್ನು ಸೇವಿಸಲು ಏನೆಲ್ಲ ಉಪಯೋಗವಿದೆ ಗೊತ್ತಾ?

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು