AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight loss: ತೂಕ ನಷ್ಟಕ್ಕೆ ಮೊಟ್ಟೆ ಎಷ್ಟು ಪ್ರಯೋಜನಕಾರಿಯಾಗಿದೆ ಗೊತ್ತಾ?

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಹಣ್ಣುಗಳು ಮತ್ತು ತರಕಾರಿಗಳೊಂದಿಗೆ ಆರೋಗ್ಯಕರ ಉಪಹಾರದ ಭಾಗವಾಗಿ ಮೊಟ್ಟೆಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಯಾಕೆಂದರೆ ಮೊಟ್ಟೆ ಹೆಚ್ಚಿನ ಪ್ರೊಟೀನ್ ಅಂಶದಿಂದಾಗಿ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ.

Weight loss: ತೂಕ ನಷ್ಟಕ್ಕೆ ಮೊಟ್ಟೆ ಎಷ್ಟು ಪ್ರಯೋಜನಕಾರಿಯಾಗಿದೆ ಗೊತ್ತಾ?
ತೂಕ ನಷ್ಟಕ್ಕೆ ಮೊಟ್ಟೆ Image Credit source: Unsplash/Tamanna Rumee
ಅಕ್ಷತಾ ವರ್ಕಾಡಿ
|

Updated on: Jun 23, 2023 | 12:21 PM

Share

ಮೊಟ್ಟೆ(Eggs) ಪ್ರೋಟೀನ್‌ ಮತ್ತು ಆರೋಗ್ಯಕರ ಕೊಬ್ಬುಗಳ ಅತ್ಯುತ್ತಮ ಮೂಲವಾಗಿದ್ದು, ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆಗಳನ್ನು ತಿನ್ನುವುದರಿಂದ ದಿನವಿಡೀ 400 ಕ್ಯಾಲೊರಿಗಳನ್ನು ಮಿತಿಗೊಳಿಸಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ. ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಹಣ್ಣುಗಳು ಮತ್ತು ತರಕಾರಿಗಳೊಂದಿಗೆ ಆರೋಗ್ಯಕರ ಉಪಹಾರದ ಭಾಗವಾಗಿ ಮೊಟ್ಟೆಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಯಾಕೆಂದರೆ ಮೊಟ್ಟೆ ಹೆಚ್ಚಿನ ಪ್ರೊಟೀನ್ ಅಂಶದಿಂದಾಗಿ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಜೊತೆಗೆ ಹೆಚ್ಚಿನ ಕ್ಯಾಲೊರಿಗಳನ್ನು ಸುಡಲು ಕೂಡ ಸಹಾಯ ಮಾಡುತ್ತದೆ.

ಆರೋಗ್ಯಕರವಾಗಿ ತೂಕ ಹೇಗೆ ಕಳೆದುಕೊಳ್ಳುವುದು?

ಸ್ಥೂಲಕಾಯತೆಯು ನಿಮ್ಮ ಆರೋಗ್ಯವನ್ನು ಹದಗೆಡಿಸುವುದು ಮಾತ್ರವಲ್ಲದೇ, ನಿಮ್ಮನ್ನು ಮಾನಸಿಕವಾಗಿಯೂ ಕುಗ್ಗಿಸುತ್ತದೆ. ಇದು ಮಧುಮೇಹ, ಹೃದ್ರೋಗಗಳು ಮತ್ತು ಕೆಲವು ರೀತಿಯ ಕ್ಯಾನ್ಸರ್‌ನಂತಹ ದೀರ್ಘಕಾಲದ ಮತ್ತು ತೀವ್ರವಾದ ಆರೋಗ್ಯ ಸಮಸ್ಯೆಗಳನ್ನು ಕೂಡ ಒಳಗೊಂಡಿದೆ. ಆದ್ದರಿಂದ ಆರೋಗ್ಯಕರವಾಗಿ ನಿಧಾನವಾಗಿ ತೂಕ ಇಳಿಸುಕೊಳ್ಳುವ ಪ್ರಯತ್ನದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ.

ಇದನ್ನೂ ಓದಿ: ಪೇರಳೆ ತಿನ್ನಲು ಸರಿಯಾದ ಸಮಯ ಯಾವಾಗ? ಪ್ರಯೋಜನಗಳು ಮತ್ತು ಅಡ್ಡಪರಿಣಾಮಗಳು

ಆರೋಗ್ಯಕರವಾಗಿ ತೂಕ ಕಳೆದುಕೊಳ್ಳಲು ಸಲಹೆಗಳು ಇಲ್ಲಿವೆ:

  • ಅಧಿಕ ತೂಕದ ಬಗ್ಗೆ ಅತಿಯಾಗಿ ಚಿಂತಿಸದಿರಿ.
  • ಸಾಕಷ್ಟು ನೀರು ಕುಡಿಯಿರಿ.
  • ಬೆಳಗಿನ ಉಪಾಹಾರವನ್ನು ಬಿಡಬೇಡಿ.
  • ನಿಯಮಿತವಾಗಿ ತಿನ್ನಿರಿ
  • ಬೆಳಗಿನ ಉಪಾಹಾರಕ್ಕಾಗಿ ಪ್ರೋಟೀನ್ಗಳನ್ನು ಸೇವಿಸಿ.
  • ತಿನ್ನಲು ಸಣ್ಣ ಪ್ಲೇಟ್ ಬಳಸಿ.
  • ಹೆಚ್ಚು ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ.
  • ಮದ್ಯಪಾನ ಮತ್ತು ಧೂಮಪಾನವನ್ನು ತಪ್ಪಿಸಿ.
  • ಕರಿದ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ