AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amla Benefits: ಮಧುಮೇಹಿಗಳಿಗೆ ನೆಲ್ಲಿಕಾಯಿಯಿಂದಾಗುವ ಪ್ರಯೋಜನಗಳೇನು?

Amla Benefits:ಮಧುಮೇಹಿ(Diabetes)ಗಳು ನಿತ್ಯ ತಮ್ಮ ಆಹಾರದಲ್ಲಿ ನೆಲ್ಲಿಕಾಯಿಯನ್ನು ಬಳಸುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಲಿದ್ದಾರೆ. ಇದರಲ್ಲಿರುವ ಔಷಧೀಯ ಗುಣಗಳು ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿವೆ.

Amla Benefits: ಮಧುಮೇಹಿಗಳಿಗೆ ನೆಲ್ಲಿಕಾಯಿಯಿಂದಾಗುವ ಪ್ರಯೋಜನಗಳೇನು?
ನೆಲ್ಲಿಕಾಯಿ
Follow us
TV9 Web
| Updated By: ನಯನಾ ರಾಜೀವ್

Updated on: May 20, 2022 | 4:37 PM

ಮಧುಮೇಹಿ(Diabetes)ಗಳು ನಿತ್ಯ ತಮ್ಮ ಆಹಾರದಲ್ಲಿ ನೆಲ್ಲಿಕಾಯಿಯನ್ನು ಬಳಸುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಲಿದ್ದಾರೆ. ಇದರಲ್ಲಿರುವ ಔಷಧೀಯ ಗುಣಗಳು ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿವೆ. ಬೆಟ್ಟದ ನೆಲ್ಲಿಕಾಯಿ(Amla)ಯು ಮಾರುಕಟ್ಟೆಯಲ್ಲಿ ಸಿಗುವ ನೆಲ್ಲಿಕಾಯಿಗಿಂತಲೂ ಗಾತ್ರದಲ್ಲಿ ತುಂಬಾ ಸಣ್ಣದಾಗಿದ್ದು, ಇದು ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ.

ನೆಲ್ಲಿಕಾಯಿಯನ್ನು ಪ್ರತಿನಿತ್ಯವೂ ತಿಂದರೆ ಅದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂದು ಅಧ್ಯಯನಗಳು ಹೇಳಿವೆ. ಕೆಲವೊಮ್ಮೆ ಮಧುಮೇಹಿಗಳಲ್ಲಿ ಊಟ ಮಾಡಿದ ಕೂಡಲೇ ರಕ್ತದಲ್ಲಿನ ಸಕ್ಕರೆ ಮಟ್ಟವು ಏರಿಕೆ ಆಗುವುದು. ಆದರೆ ನೆಲ್ಲಿಕಾಯಿ ಸೇವನೆಯಿಂದ ಈ ಸಮಸ್ಯೆಯನ್ನು ತಡೆಯಬಹುದು.

ಹಸಿಯಾಗಿ ತಿನ್ನಿ ನೆಲ್ಲಿಕಾಯಿಯನ್ನು ಹಸಿಯಾಗಿ ತಿನ್ನುವುದು ತುಂಬಾ ಸರಳ ವಿಧಾನ. ಇದರಿಂದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿ ಆಗುವುದು. ನಿಮಗೆ ತುಂಬಾ ಹುಳಿಯೆಂದು ಅನಿಸುತ್ತಲಿದ್ದರೆ ಆಗ ನೀವು ಇದನ್ನು ತಿಂದು ಒಂದು ಲೋಟ ನೀರು ಕುಡಿಯಿರಿ. ಆಗ ನಿಮ್ಮ ಬಾಯಿಗೆ ತುಂಬಾ ಸಿಹಿ ರುಚಿಯು ಸಿಗುವುದು.

ಸಲಾಡ್ ಮತ್ತು ತರಕಾರಿ ಜತೆಗೆ ಸಲಾಡ್ ಮತ್ತು ಖಾದ್ಯಗಳಲ್ಲಿ ಬಳಕೆ ಮಾಡಬಹುದು. ನೆಲ್ಲಿಕಾಯಿಯ ಬೀಜ ತೆಗೆದು ಅದನ್ನು ರುಬ್ಬಿಕೊಳ್ಳಬೇಕು. ಇದನ್ನು ಒಣಗಿಸಿದ ಬಳಿಕ ಶೇಖರಣೆ ಮಾಡಬಹುದು. ನಿಮಗೆ ಬೇಕಾದಾಗ ಸಲಾಡ್ ಅಥವಾ ಬೇರೆ ಖಾದ್ಯಗಳಿಗೆ ಬಳಕೆ ಮಾಡಬಹುದು.

ನೆಲ್ಲಿಕಾಯಿಯೊಂದಿಗೆ ಜೇನುತುಪ್ಪ ಬೆರೆಸಿ ಬಳಸಿ ನೆಲ್ಲಿಕಾಯಿಯೊಂದಿಗೆ ಜೇನುತುಪ್ಪ ಬೆರೆಸಿ ಉಪಯೋಗಿಸುವುದರಿಂದ ನಿಮ್ಮ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ನೆಲ್ಲಿಕಾಯಿ ವಿಟಮಿನ್ ಸಿ ಯ ಸಮೃದ್ಧ ಮೂಲವಾಗಿದೆ, ಜತೆಗೆ ನಂಜುನಿರೋಧಕ, ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಕೂಡ ಇದು ಹೊಂದಿದೆ.

ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ : ನೆಲ್ಲಿಕಾಯಿಯಲ್ಲಿ ಉತ್ತಮ ಪ್ರಮಾಣದಲ್ಲಿ ಫೈಬರ್‌ ಇರುತ್ತದೆ. ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿಂದರೆ ಜೀರ್ಣಾಂಗ ವ್ಯವಸ್ಥೆಯು ಸುಧಾರಿಸುತ್ತದೆ. ಮಲ ವಿಸರ್ಜನೆಯಲ್ಲಿ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ.

ಕೂದಲಿಗೆ ಪ್ರಯೋಜನಕಾರಿ : ಕೂದಲಿನ ಆರೋಗ್ಯಕ್ಕಾಗಿ ಬಳಸುವ ಪ್ರಾಡಕ್ಟ್ ಗಳಲ್ಲಿ ನೆಲ್ಲಿಕಾಯಿಯ ಬಳಕೆ ಇದ್ದೇ ಇರುತ್ತದೆ. ಇದು ಕೂದಲನ್ನು ಆರೋಗ್ಯವಾಗಿರಿಸಲು ಸಹಾಯ ಮಾಡುತ್ತದೆ. ಜೇನುತುಪ್ಪವನ್ನು ನೆಲ್ಲಿಕಾಯಿಯೊಂದಿಗೆ ಬೆರೆಸಿ ಸೇವಿಸಿದರೆ ಸ್ಕಾಲ್ಪ್ ನ ಸೋಂಕಿನಿಂದ ಮುಕ್ತಿ ಪಡೆಯಬಹುದು.

ಜ್ಯೂಸ್ ತಯಾರಿಸಿ ತಾಜಾ ನೆಲ್ಲಿಕಾಯಿ ತಂದು, ಅದರ ಬೀಜ ತೆಗೆಯಿರಿ ಮತ್ತು ಅದನ್ನು ಸರಿಯಾಗಿ ರುಬ್ಬಿಕೊಳ್ಳಿ. ಇದರ ರಸವನ್ನು ತೆಗೆದು ಕುಡಿಯಬಹುದು. ನಿಮಗೆ ದಿನಕ್ಕೆ 5-10 ಮಿ.ಲೀ.ನಷ್ಟು ನೆಲ್ಲಿಕಾಯಿ ರಸ ಸಾಕು.

ನೀವು ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ಆಗ ನಿಮಗೆ ತುಂಬಾ ಅಚ್ಚರಿಯ ಫಲಿತಾಂಶವು ಸಿಗುವುದು. ಇದನ್ನು ನಿತ್ಯವೂ ಸೇವಿಸಿದರೆ ಅದರ ಲಾಭ ನಿಮಗೆ ಸಿಗಲಿದೆ.

ಇಲ್ಲಿ ನೀಡಲಾಗಿರುವ ಮಾಹಿತಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಮನೆಮದ್ದು ಹಾಗೂ ಸಾಮಾನ್ಯ ವಿಷಯಗಳ ಆಧರಿತ ಲೇಖನವಾಗಿದೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ