Amla Benefits: ಮಧುಮೇಹಿಗಳಿಗೆ ನೆಲ್ಲಿಕಾಯಿಯಿಂದಾಗುವ ಪ್ರಯೋಜನಗಳೇನು?

Amla Benefits:ಮಧುಮೇಹಿ(Diabetes)ಗಳು ನಿತ್ಯ ತಮ್ಮ ಆಹಾರದಲ್ಲಿ ನೆಲ್ಲಿಕಾಯಿಯನ್ನು ಬಳಸುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಲಿದ್ದಾರೆ. ಇದರಲ್ಲಿರುವ ಔಷಧೀಯ ಗುಣಗಳು ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿವೆ.

Amla Benefits: ಮಧುಮೇಹಿಗಳಿಗೆ ನೆಲ್ಲಿಕಾಯಿಯಿಂದಾಗುವ ಪ್ರಯೋಜನಗಳೇನು?
ನೆಲ್ಲಿಕಾಯಿ
Follow us
| Updated By: ನಯನಾ ರಾಜೀವ್

Updated on: May 20, 2022 | 4:37 PM

ಮಧುಮೇಹಿ(Diabetes)ಗಳು ನಿತ್ಯ ತಮ್ಮ ಆಹಾರದಲ್ಲಿ ನೆಲ್ಲಿಕಾಯಿಯನ್ನು ಬಳಸುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಲಿದ್ದಾರೆ. ಇದರಲ್ಲಿರುವ ಔಷಧೀಯ ಗುಣಗಳು ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿವೆ. ಬೆಟ್ಟದ ನೆಲ್ಲಿಕಾಯಿ(Amla)ಯು ಮಾರುಕಟ್ಟೆಯಲ್ಲಿ ಸಿಗುವ ನೆಲ್ಲಿಕಾಯಿಗಿಂತಲೂ ಗಾತ್ರದಲ್ಲಿ ತುಂಬಾ ಸಣ್ಣದಾಗಿದ್ದು, ಇದು ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ.

ನೆಲ್ಲಿಕಾಯಿಯನ್ನು ಪ್ರತಿನಿತ್ಯವೂ ತಿಂದರೆ ಅದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂದು ಅಧ್ಯಯನಗಳು ಹೇಳಿವೆ. ಕೆಲವೊಮ್ಮೆ ಮಧುಮೇಹಿಗಳಲ್ಲಿ ಊಟ ಮಾಡಿದ ಕೂಡಲೇ ರಕ್ತದಲ್ಲಿನ ಸಕ್ಕರೆ ಮಟ್ಟವು ಏರಿಕೆ ಆಗುವುದು. ಆದರೆ ನೆಲ್ಲಿಕಾಯಿ ಸೇವನೆಯಿಂದ ಈ ಸಮಸ್ಯೆಯನ್ನು ತಡೆಯಬಹುದು.

ಹಸಿಯಾಗಿ ತಿನ್ನಿ ನೆಲ್ಲಿಕಾಯಿಯನ್ನು ಹಸಿಯಾಗಿ ತಿನ್ನುವುದು ತುಂಬಾ ಸರಳ ವಿಧಾನ. ಇದರಿಂದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿ ಆಗುವುದು. ನಿಮಗೆ ತುಂಬಾ ಹುಳಿಯೆಂದು ಅನಿಸುತ್ತಲಿದ್ದರೆ ಆಗ ನೀವು ಇದನ್ನು ತಿಂದು ಒಂದು ಲೋಟ ನೀರು ಕುಡಿಯಿರಿ. ಆಗ ನಿಮ್ಮ ಬಾಯಿಗೆ ತುಂಬಾ ಸಿಹಿ ರುಚಿಯು ಸಿಗುವುದು.

ಸಲಾಡ್ ಮತ್ತು ತರಕಾರಿ ಜತೆಗೆ ಸಲಾಡ್ ಮತ್ತು ಖಾದ್ಯಗಳಲ್ಲಿ ಬಳಕೆ ಮಾಡಬಹುದು. ನೆಲ್ಲಿಕಾಯಿಯ ಬೀಜ ತೆಗೆದು ಅದನ್ನು ರುಬ್ಬಿಕೊಳ್ಳಬೇಕು. ಇದನ್ನು ಒಣಗಿಸಿದ ಬಳಿಕ ಶೇಖರಣೆ ಮಾಡಬಹುದು. ನಿಮಗೆ ಬೇಕಾದಾಗ ಸಲಾಡ್ ಅಥವಾ ಬೇರೆ ಖಾದ್ಯಗಳಿಗೆ ಬಳಕೆ ಮಾಡಬಹುದು.

ನೆಲ್ಲಿಕಾಯಿಯೊಂದಿಗೆ ಜೇನುತುಪ್ಪ ಬೆರೆಸಿ ಬಳಸಿ ನೆಲ್ಲಿಕಾಯಿಯೊಂದಿಗೆ ಜೇನುತುಪ್ಪ ಬೆರೆಸಿ ಉಪಯೋಗಿಸುವುದರಿಂದ ನಿಮ್ಮ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ನೆಲ್ಲಿಕಾಯಿ ವಿಟಮಿನ್ ಸಿ ಯ ಸಮೃದ್ಧ ಮೂಲವಾಗಿದೆ, ಜತೆಗೆ ನಂಜುನಿರೋಧಕ, ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಕೂಡ ಇದು ಹೊಂದಿದೆ.

ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ : ನೆಲ್ಲಿಕಾಯಿಯಲ್ಲಿ ಉತ್ತಮ ಪ್ರಮಾಣದಲ್ಲಿ ಫೈಬರ್‌ ಇರುತ್ತದೆ. ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿಂದರೆ ಜೀರ್ಣಾಂಗ ವ್ಯವಸ್ಥೆಯು ಸುಧಾರಿಸುತ್ತದೆ. ಮಲ ವಿಸರ್ಜನೆಯಲ್ಲಿ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ.

ಕೂದಲಿಗೆ ಪ್ರಯೋಜನಕಾರಿ : ಕೂದಲಿನ ಆರೋಗ್ಯಕ್ಕಾಗಿ ಬಳಸುವ ಪ್ರಾಡಕ್ಟ್ ಗಳಲ್ಲಿ ನೆಲ್ಲಿಕಾಯಿಯ ಬಳಕೆ ಇದ್ದೇ ಇರುತ್ತದೆ. ಇದು ಕೂದಲನ್ನು ಆರೋಗ್ಯವಾಗಿರಿಸಲು ಸಹಾಯ ಮಾಡುತ್ತದೆ. ಜೇನುತುಪ್ಪವನ್ನು ನೆಲ್ಲಿಕಾಯಿಯೊಂದಿಗೆ ಬೆರೆಸಿ ಸೇವಿಸಿದರೆ ಸ್ಕಾಲ್ಪ್ ನ ಸೋಂಕಿನಿಂದ ಮುಕ್ತಿ ಪಡೆಯಬಹುದು.

ಜ್ಯೂಸ್ ತಯಾರಿಸಿ ತಾಜಾ ನೆಲ್ಲಿಕಾಯಿ ತಂದು, ಅದರ ಬೀಜ ತೆಗೆಯಿರಿ ಮತ್ತು ಅದನ್ನು ಸರಿಯಾಗಿ ರುಬ್ಬಿಕೊಳ್ಳಿ. ಇದರ ರಸವನ್ನು ತೆಗೆದು ಕುಡಿಯಬಹುದು. ನಿಮಗೆ ದಿನಕ್ಕೆ 5-10 ಮಿ.ಲೀ.ನಷ್ಟು ನೆಲ್ಲಿಕಾಯಿ ರಸ ಸಾಕು.

ನೀವು ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ಆಗ ನಿಮಗೆ ತುಂಬಾ ಅಚ್ಚರಿಯ ಫಲಿತಾಂಶವು ಸಿಗುವುದು. ಇದನ್ನು ನಿತ್ಯವೂ ಸೇವಿಸಿದರೆ ಅದರ ಲಾಭ ನಿಮಗೆ ಸಿಗಲಿದೆ.

ಇಲ್ಲಿ ನೀಡಲಾಗಿರುವ ಮಾಹಿತಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಮನೆಮದ್ದು ಹಾಗೂ ಸಾಮಾನ್ಯ ವಿಷಯಗಳ ಆಧರಿತ ಲೇಖನವಾಗಿದೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ