AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಕ್ಕಳಿಂದ ವಯಸ್ಕರವರೆಗೂ ಇಷ್ಟಪಡುವ ಖರ್ಜೂರದ ಪ್ರಯೋಜನಗಳೇನು?

ಮುಖ್ಯವಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಖರ್ಜೂರ ಸೇವನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಸಿಹಿಯಾದ ಹಾಗೂ ಮಕ್ಕಳಿಗೆ ಹೆಚ್ಚು ಇಷ್ವಾಗುವ ಖರ್ಜೂರದಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.

Health Tips: ಮಕ್ಕಳಿಂದ ವಯಸ್ಕರವರೆಗೂ ಇಷ್ಟಪಡುವ ಖರ್ಜೂರದ ಪ್ರಯೋಜನಗಳೇನು?
ಖರ್ಜೂರ
shruti hegde
| Edited By: |

Updated on: May 25, 2021 | 7:43 AM

Share

ಕೊರೊನಾ ಸಮಯದಲ್ಲಂತೂ ನಮ್ಮ ದೇಹಕ್ಕೆ ಹೆಚ್ಚಿನ ರೋಗನಿರೋಧಕ ಶಕ್ತಿ ಬೇಕು. ಹೀಗಿರುವಾಗ ಡ್ರೈ ಫ್ರುಟ್ಸ್​ಅನ್ನು ತಿನ್ನುವ ಅಭ್ಯಾಸ ಮಾಡಿಕೊಳ್ಳಿ. ಅದರಲ್ಲಿಯೂ ಮುಖ್ಯವಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಖರ್ಜೂರ ಸೇವನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಸಿಹಿಯಾದ ಹಾಗೂ ಮಕ್ಕಳಿಗೆ ಹೆಚ್ಚು ಇಷ್ಟವಾಗುವ ಖರ್ಜೂರದಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.

ಖರ್ಜೂರದಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿ ಕಂಡುಬರುತ್ತದೆ. ಇದರಿಂದ ರಕ್ತಹೀನತೆಯನ್ನು ಹೋಗಲಾಡಿಸಲು ಇದು ಸಹಾಯಕ. ದೇಹಕ್ಕೆ ಸುಸ್ತು, ಅಸ್ವಸ್ಥತೆಯಿಂದ ಬಳಲುತ್ತಿರುವವರು ಖರ್ಜೂರ ಸೇವಿಸುವುದು ಉತ್ತಮ. ದಿನಕ್ಕೆ ಎರಡಾದರೂ ಖರ್ಜೂರವನ್ನು ಸೇವಿಸುವುದು ಆರೋಗ್ಯಕ್ಕೆ ಹಿತಕರ.

ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಖರ್ಜೂರ ಸೇವನೆ ಉತ್ತಮ. ಹದಿಹರೆದವರಂತೂ ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಸದಾಕಾಲ ಒಂದಲ್ಲಾ ಒಂದು ಔಷಧವನ್ನು ಹುಡುಕುತ್ತಲೇ ಇರುತ್ತಾರೆ. ಹೀಗಿರುವಾಗ ಪ್ರತಿನಿತ್ಯ ಖರ್ಜೂರ ಸೇವನೆಯನ್ನು ರೂಢಿಯಲ್ಲಿಟ್ಟುಕೊಂಡರೆ ಆರೋಗ್ಯವೂ ಸುಧಾರಿಸುತ್ತದೆ. ಜತೆಗೆ ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ದೇಹದ ತೂಕವನ್ನು ಹೆಚ್ಚಿಸಿಕೊಳ್ಳಲು ಖರ್ಜೂರ ಸೇವನೆ ಒಳ್ಳೆಯ ಮಾರ್ಗ. ಒಂದು ಲೋಟ ಹಾಲಿಗೆ ಖರ್ಜೂರದ ಪೇಸ್ಟ್​ ಅಥವಾ ಖರ್ಜೂರದ ಚೂರನ್ನು ಹಾಕಿಕೊಂಡು ಸೇವನೆ ಮಾಡುವುದರಿಂದ ತೂಕ ಹೆಚ್ಚಿಸಿಕೊಳ್ಳಬಹುದು. ದೇಹದಲ್ಲಿ ಶಕ್ತಿ ತುಂಬಲು ಸಹಾಯಕಾರಿಯಾಗಿದೆ. ಮಕ್ಕಳು ಸದೃಢವಾಗಿ ಬೆಳೆಯಲು ಖರ್ಜೂರ ಸೇವನೆ ಉತ್ತಮ. ಹಾಲಿನೊಂದಿಗೆ ಖರ್ಜೂರದ ಪೇಸ್ಟ್​ಅನ್ನು ಮಿಶ್ರಣ ಮಾಡಿ ಮಕ್ಕಳಿಗೆ ಕುಡಿಸಿದರೆ ದಷ್ಟಪುಷ್ಟವಾಗಿ ಬೆಳೆಯಲು ಸಹಾಯವಾಗುತ್ತದೆ. ಹಾಗೆಯೇ ಸಿಹಿಯಾಗಿರುವುದರಿಂದ ಮಕ್ಕಳಿಗೂ ಇಷ್ಟವಾಗುತ್ತದೆ.

ಇದನ್ನೂ ಓದಿ: Health Tips: ಪ್ರತಿನಿತ್ಯ ವಾಯುವಿಹಾರ ಅಭ್ಯಾಸ ರೂಢಿಯಲ್ಲಿರಲಿ; ನೆಮ್ಮದಿ ಹಾಳು ಮಾಡುವ ಕಾಯಿಲೆಗಳಿಂದ ದೂರವಿರಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ