AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ಮಧುಮೇಹಿಗಳು ಯಾವ ಹಿಟ್ಟಿನಿಂದ ತಯಾರಿಸಿದ ರೊಟ್ಟಿಯನ್ನು ಸೇವಿಸಬೇಕು?

ಒಮ್ಮೆ ಮಧುಮೇಹ ನಿಮ್ಮನ್ನು ಆವರಿಸಿಕೊಂಡರೆ ಆಹಾರದ ಮೂಲಕವೇ ನಿಯಂತ್ರಣದಲ್ಲಿಡಬೇಕೇ ಹೊರತು ಸಂಪೂರ್ಣವಾಗಿ ಕಡಿಮೆ ಮಾಡಲು ಸಾಧ್ಯವಿಲ್ಲ.

Diabetes: ಮಧುಮೇಹಿಗಳು ಯಾವ ಹಿಟ್ಟಿನಿಂದ ತಯಾರಿಸಿದ ರೊಟ್ಟಿಯನ್ನು ಸೇವಿಸಬೇಕು?
Oats
Follow us
TV9 Web
| Updated By: ನಯನಾ ರಾಜೀವ್

Updated on: Aug 29, 2022 | 3:24 PM

ಒಮ್ಮೆ ಮಧುಮೇಹ ನಿಮ್ಮನ್ನು ಆವರಿಸಿಕೊಂಡರೆ ಆಹಾರದ ಮೂಲಕವೇ ನಿಯಂತ್ರಣದಲ್ಲಿಡಬೇಕೇ ಹೊರತು ಸಂಪೂರ್ಣವಾಗಿ ಕಡಿಮೆ ಮಾಡಲು ಸಾಧ್ಯವಿಲ್ಲ. ರೊಟ್ಟಿಯನ್ನು ಬಹುತೇಕ ಮಂದಿ ನಿತ್ಯವೂ ಸೇವಿಸುತ್ತಾರೆ, ಗೋಧಿ ಹಿಟ್ಟಿನ ರೊಟ್ಟಿಯನ್ನು ಸಾಮಾನ್ಯವಾಗಿ ನಮ್ಮ ಮನೆಗಳಲ್ಲಿ ಮಾಡಲಾಗುತ್ತದೆ.

ಗೋಧಿ ರೊಟ್ಟಿಯು ಮಧುಮೇಹಿಗಳಲ್ಲಿ ಹಾನಿಯನ್ನುಂಟುಮಾಡುತ್ತದೆ. ನಾವು ಮಧುಮೇಹದಲ್ಲಿ ಸರಿಯಾದ ಆಹಾರ ಮತ್ತು ಪಾನೀಯದ ಬಗ್ಗೆ ಮಾತನಾಡುವಾಗ, ನಮ್ಮ ಗಮನವು ರೊಟ್ಟಿಯ ಕಡೆಗೆ ಹೋಗುವುದಿಲ್ಲ. ನಾವು ಹಣ್ಣುಗಳು ಮತ್ತು ತರಕಾರಿಗಳ ಬಗ್ಗೆ ಮಾತ್ರ ಮಾತನಾಡುತ್ತೇವೆ.

ಆದರೆ ನೀವು ಮಧುಮೇಹಿಗಳಾಗಿದ್ದರೆ, ಸರಿಯಾದ ಹಿಟ್ಟಿನ ರೊಟ್ಟಿಯನ್ನು ತಿನ್ನುವುದು ಸಹ ಬಹಳ ಮುಖ್ಯ. ಮಧುಮೇಹಿಗಳು ಯಾವ ಹಿಟ್ಟಿನಿಂದ ಮಾಡಿದ ರೊಟ್ಟಿಯನ್ನು ತಿನ್ನಬೇಕು.

ಓಟ್ಸ್ ರೊಟ್ಟಿ ಪ್ರಯೋಜನಕಾರಿಯಾಗಿದೆ ಗೋಧಿ ರೊಟ್ಟಿಯಲ್ಲಿ ಕಾರ್ಬೋಹೈಡ್ರೇಟ್​ಗಳ ಪ್ರಮಾಣವು ಹೆಚ್ಚು. ಹೆಚ್ಚು ಕಾರ್ಬೋಹೈಡ್ರೇಟ್‌ಗಳನ್ನು ಸೇವಿಸುವುದರಿಂದ ಮಧುಮೇಹ ರೋಗಿಗಳಿಗೆ ಯಾವುದೇ ಪ್ರಯೋಜನವಿಲ್ಲ. ನೀವು ಮಧುಮೇಹಿಗಳಾಗಿದ್ದರೆ, ನೀವು ಗೋಧಿ ಹಿಟ್ಟಿನ ಬದಲಿಗೆ ಓಟ್ಸ್ ರೊಟ್ಟಿಗಳನ್ನು ತಿನ್ನಬೇಕು.

ಓಟ್ಸ್ ಏಕೆ ಅತ್ಯುತ್ತಮವಾಗಿದೆ

ಓಟ್ಸ್‌ನಲ್ಲಿನ ಕ್ಯಾಲೋರಿಗಳ ಪ್ರಮಾಣವು ತುಂಬಾ ಕಡಿಮೆಯಾಗಿದೆ. ಓಟ್ಸ್‌ನಲ್ಲಿ ಪೋಷಕಾಂಶಗಳು ಮತ್ತು ಫೈಬರ್ ಸಮೃದ್ಧವಾಗಿದೆ, ಇದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಓಟ್ಸ್ ಜೀರ್ಣಕ್ರಿಯೆಯ ನಂತರ ಗ್ಲೂಕೋಸ್ ಅನ್ನು ಆರಾಮವಾಗಿ ಬಿಡುಗಡೆ ಮಾಡುತ್ತದೆ, ಇದರಿಂದಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ಇದ್ದಕ್ಕಿದ್ದಂತೆ ಹೆಚ್ಚಾಗುವುದಿಲ್ಲ.

ಓಟ್ಸ್ ಗೋಧಿಗಿಂತ ಕಡಿಮೆ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುತ್ತದೆ, ಇದು ಮಧುಮೇಹ ಸೇರಿದಂತೆ ಅನೇಕ ಕಾಯಿಲೆಗಳಲ್ಲಿ ಪ್ರಯೋಜನಕಾರಿಯಾಗಿದೆ.

ಓಟ್ಸ್ ಬಳಕೆ ಹೇಗೆ? ಕೆಲವರಿಗೆ ಆರಂಭದಲ್ಲಿ ಓಟ್ಸ್ ತಿನ್ನಲು ತೊಂದರೆಯಾಗುತ್ತದೆ. ಆದರೆ ಓಟ್ಸ್ ಅನ್ನು ಒಂದಲ್ಲ ಹಲವು ರೀತಿಯಲ್ಲಿ ತಿನ್ನಬಹುದು. ಓಟ್ಸ್‌ ರೊಟ್ಟಿಯ ಹೊರತಾಗಿ, ಮಸಾಲೆಯುಕ್ತ ಕಿಚಡಿಯನ್ನು ಸಹ ಮಾಡಬಹುದು. ಓಟ್ಸ್ ಅನ್ನು ಹಾಲಿಗೆ ಸೇರಿಸಿ ಕೂಡ ತಿನ್ನಬಹುದು. ಓಟ್ಸ್ ರೊಟ್ಟಿಯನ್ನು ರುಚಿಕರವಾಗಿಸಲು, ರುಬ್ಬಿದ ಓಟ್ಸ್‌ಗೆ ಉಪ್ಪು, ಜೀರಿಗೆ ಮತ್ತು ಈರುಳ್ಳಿ ಸೇರಿಸಿ ರೊಟ್ಟಿ ಮಾಡಬಹುದು.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್