Health Tips: ಕೊತ್ತಂಬರಿ ನೆನೆಸಿದ ನೀರು ಕುಡಿದ್ರೆ ಸಿಗುವ ಆರೋಗ್ಯಕರ ಪ್ರಯೋಜನ ಒಂದಾ ಎರಡಾ..!

Health Tips in Kannada: ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುವಲ್ಲಿ ಕೊತ್ತಂಬರಿ ನೀರು ವಿಶೇಷ ಪಾತ್ರ ವಹಿಸುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ದೂರ ಮಾಡುತ್ತದೆ.

Health Tips: ಕೊತ್ತಂಬರಿ ನೆನೆಸಿದ ನೀರು ಕುಡಿದ್ರೆ ಸಿಗುವ ಆರೋಗ್ಯಕರ ಪ್ರಯೋಜನ ಒಂದಾ ಎರಡಾ..!
ಸಾಂದರ್ಭಿಕ ಚಿತ್ರ
Follow us
| Updated By: ಝಾಹಿರ್ ಯೂಸುಫ್

Updated on: Aug 08, 2021 | 5:02 PM

Health benefits of coriander: ಕೊತ್ತಂಬರಿ ಬೀಜ ಅಥವಾ ಕೊತ್ತಂಬರಿ ಸೊಪ್ಪು ಎಲ್ಲರ ಅಡುಗೆ ಮನೆಯಲ್ಲಿ ಕಾಣ ಸಿಗುತ್ತೆ. ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ಸೊಪ್ಪಿನ ಬಳಕೆ ಕೂಡ ಅಷ್ಟಕಷ್ಟೇ ಎನ್ನಬಹುದು. ಆದರೆ ಇದರಲ್ಲಿರುವ ಪೋಷಕಾಂಶಗಳ ಬಗ್ಗೆ ತಿಳಿದುಕೊಂಡರೆ ಮುಂದೆ ಪ್ರತಿ ಆಹಾರ ಪದಾರ್ಥಗಳಲ್ಲೂ ಕೊತ್ತಂಬರಿ ಬಳಸುತ್ತೀರಿ. ಅದರಲ್ಲೂ ಕೊತ್ತಂಬರಿ ಬೀಜದ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಿದ್ರೆ ಕೊತ್ತಂಬರಿ ನೆನಸಿದ ನೀರು ಕುಡಿಯುವುದರಿಂದ ಸಿಗುವ ಆರೋಗ್ಯಕಾರಿ ಪ್ರಯೋಜನಗಳನ್ನು ತಿಳಿಯೋಣ.

ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ: ಕೊತ್ತಂಬರಿ ನೆನಸಿದ ನೀರನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಈ ನೀರಿನಲ್ಲಿರುವ ಅ್ಯಂಟಿ-ಆಕ್ಸಿಡೆಂಟ್‌ಗಳು ದೇಹದಲ್ಲಿನ ಫ್ರೀ ರಾಡಿಕಲ್‌ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಅಪಾಯ ಕೂಡ ಕಡಿಮೆಯಾಗುತ್ತದೆ.

ಜೀರ್ಣಕ್ರಿಯೆ ಸುಧಾರಣೆ: ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುವಲ್ಲಿ ಕೊತ್ತಂಬರಿ ನೀರು ವಿಶೇಷ ಪಾತ್ರ ವಹಿಸುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇದರಿಂದಾಗಿ ಜೀರ್ಣಾಂಗ ವ್ಯವಸ್ಥೆಯು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ.

ದೇಹವನ್ನು ನಿರ್ವಿಷಗೊಳಿಸುತ್ತದೆ: ಕೊತ್ತಂಬರಿ ನೀರು ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದನ್ನು ಕುಡಿಯುವುದರಿಂದ ದೇಹದಲ್ಲಿರುವ ವಿಷಾಂಶಗಳು ಹೊರಬರುತ್ತವೆ. ಈ ಕಾರಣದಿಂದಾಗಿ ಸೋಂಕಿನ ಅಪಾಯ ಕೂಡ ಕಡಿಮೆಯಾಗುತ್ತದೆ.

ಕೂದಲನ್ನು ಬಲಪಡಿಸುತ್ತದೆ: ಕೊತ್ತಂಬರಿ ನೀರನ್ನು ಕುಡಿಯುವುದು ಕೂದಲನ್ನು ಬಲಪಡಿಸಬಹುದು. ಕೊತ್ತಂಬರಿ ಬೀಜಗಳಲ್ಲಿ ವಿಟಮಿನ್-ಕೆ, ಸಿ ಮತ್ತು ಎ ಹೇರಳವಾಗಿ ಕಂಡುಬರುತ್ತವೆ. ಇದು ಕೂದಲನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಹೀಗಾಗಿ ಕೂದಲು ತಂಡಾಗುವ ಸಮಸ್ಯೆ ಹೊಂದಿರುವವರು ಕೊತ್ತಂಬರಿ ನೀರಿನ ಮೊರೆ ಹೋಗಬಹುದು.

ಮುಖದ ಕಲೆಗಳು ಮಾಯ: ಕೊತ್ತಂಬರಿ ನೀರನ್ನು ಸೇವಿಸುವುದರಿಂದ ಮುಖದ ಮೇಲಿನ ಕಲೆಗಳು ನಿಧಾನವಾಗಿ ಮಾಯವಾಗುತ್ತವೆ. ಕೊತ್ತಂಬರಿ ಸೊಪ್ಪು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಚರ್ಮವನ್ನು ಸ್ವಚ್ಛಗೊಳಿಸಲು ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.

ಕೊತ್ತಂಬರಿ ನೀರನ್ನು ತಯಾರಿಸುವುದು ಹೇಗೆ? ಕೊತ್ತಂಬರಿ ನೀರನ್ನು ತಯಾರಿಸಲು, ಒಂದು ಚಮಚ ಪೂರ್ತಿ ಕೊತ್ತಂಬರಿ ಬೀಜಗಳನ್ನು ತೆಗೆದುಕೊಳ್ಳಿ. ನಂತರ ಅವುಗಳನ್ನು ಒಂದು ಲೋಟ ನೀರಿನಲ್ಲಿ ಒಂದು ರಾತ್ರಿ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಸೋಸಿ ಸೇವಿಸಿ. ನೀವು ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೆಚ್ಚು ಪ್ರಯೋಜನಕಾರಿ. ನೀರನ್ನು ಫಿಲ್ಟರ್ ಮಾಡಿದ ನಂತರ, ಈ ಬೀಜಗಳನ್ನು ಎಸೆಯುವ ಬದಲು ಅದನ್ನು ಒಣಗಿಸಿ ಪುಡಿ ಮಾಡಿ ಬಳಸಬಹುದು.

ಇದನ್ನೂ ಓದಿ: Tokyo Olympics 2020: ಭಾರತ ಸೋಲುತ್ತಿದ್ದಂತೆ ರೆಫರಿಗೆ ಬಿತ್ತು ಏಟು..!

ಇದನ್ನೂ ಓದಿ: Neeraj Chopra: ಆಸ್ಪತ್ರೆಯ ಬೆಡ್​ನಿಂದ ಚಿನ್ನದ ಬೇಟೆ ತನಕ: ನೀರಜ್ ಚೋಪ್ರಾ ಎಂಬ ಗೋಲ್ಡನ್ ಸ್ಟಾರ್

ಇದನ್ನೂ ಓದಿ: ಬ್ಲೂಟೂತ್ ಹೆಡ್​ಫೋನ್ ಸ್ಪೋಟ, ಯುವಕ ಸಾವು..!

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ