Jaggery Tea: ಬೆಲ್ಲದ ಚಹಾ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ?

Jaggery Tea: ಸಾಮಾನ್ಯವಾಗಿ ಎಲ್ಲರೂ ಸಕ್ಕರೆ ಬದಲು ಬೆಲ್ಲವನ್ನು ಬಳಸಿ ಎಂದು ಸಲಹೆ ನೀಡುತ್ತಾರೆ. ಆದರೆ ಬೆಲ್ಲದ ಚಹಾ ಕುಡಿಯುವುದರಿಂದ ನಿಮ್ಮ ಆರೋಗ್ಯದ ಮೇಲಾಗುವ ದುಷ್ಪರಿಣಾಮದ ಬಗ್ಗೆ ಎಷ್ಟು ಮಂದಿಗೆ ಗೊತ್ತಿದೆ.

Jaggery Tea: ಬೆಲ್ಲದ ಚಹಾ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ?
ಬೆಲ್ಲದ ಚಹಾ
Follow us
| Updated By: ನಯನಾ ರಾಜೀವ್

Updated on: May 25, 2022 | 7:30 AM

ಸಾಮಾನ್ಯವಾಗಿ ಎಲ್ಲರೂ ಸಕ್ಕರೆ ಬದಲು ಬೆಲ್ಲವನ್ನು ಬಳಸಿ ಎಂದು ಸಲಹೆ ನೀಡುತ್ತಾರೆ. ಆದರೆ ಬೆಲ್ಲದ ಚಹಾ ಕುಡಿಯುವುದರಿಂದ ನಿಮ್ಮ ಆರೋಗ್ಯದ ಮೇಲಾಗುವ ದುಷ್ಪರಿಣಾಮದ ಬಗ್ಗೆ ಎಷ್ಟು ಮಂದಿಗೆ ಗೊತ್ತಿದೆ.

ಸಕ್ಕರೆ ಬದಲಿಗೆ ಬೆಲ್ಲದ ಉಪಯೋಗ ದೇಹವನ್ನು ಫಿಟ್​ ಆಗಿರಿಸಿಕೊಳ್ಳಲು ಸಕ್ಕರೆಯನ್ನು ಬೆಲ್ಲ ಮತ್ತು ಜೇನುತುಪ್ಪದಂತಹ ಆರೋಗ್ಯಕರ ಪರ್ಯಾಯಗಳೊಂದಿಗೆ ಬದಲಾಯಿಸುವ ಮನಸ್ಥಿತಿಗೆ ಬಂದಿದ್ದಾರೆ.

ಈಗಂತೂ ಮರುಕಟ್ಟೆಯಲ್ಲಿ ಸಕ್ಕರೆಯನ್ನು ಬಳಸದೆ ಬೆಲ್ಲವನ್ನು ಬಳಸಿ ಅನೇಕ ಲಾಡುಗಳು, ಜಿಲೇಬಿ ಮತ್ತು ಅನೇಕ ರೀತಿಯ ಸಿಹಿತಿಂಡಿಗಳನ್ನು ತಯಾರಿಸಲಾಗುತ್ತಿದ್ದು, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಜನರಿಗಾಗಿ ಲಭ್ಯವಿವೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ರಕ್ತದ ಸಕ್ಕರೆಯ ಮಟ್ಟ ಬೆಲ್ಲದ ಚಹಾವನ್ನು ಆಗಾಗ್ಗೆ ಕುಡಿಯುವುದರಿಂದ ದೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸಬಹುದು. ಹಾಗಾಗಿ ಒಂದು ದಿನದಲ್ಲಿ 2-3 ಕಪ್​ಗಳಿಗಿಂತ ಹೆಚ್ಚು ಚಹಾವನ್ನು ಕುಡಿಯಬೇಡಿ.

ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೆಲ್ಲ ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಗಳಿದ್ದರೂ ಸಹ ಜೀವಸತ್ವಗಳು, ರಂಜಕ, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಅನ್ನು ಹೊಂದಿದ್ದರೂ, ಹಾಲಿನೊಂದಿಗೆ ಅದರ ಸಂಯೋಜನೆಯು ಹಾನಿಕಾರಕವಾಗಬಹುದು.

ಜೀರ್ಣಕ್ರಿಯೆ ಸಮಸ್ಯೆಗಳು ಬೆಲ್ಲದ ಚಹಾವನ್ನು ಅತಿಯಾಗಿ ಸೇವಿಸುವುದರಿಂದ ಅಜೀರ್ಣ ಉಂಟಾಗುತ್ತದೆ. ನೀವು ದಿನಕ್ಕೆ 4 ಕಪ್‌ಗಿಂತ ಹೆಚ್ಚು ಬೆಲ್ಲದ ಚಹಾವನ್ನು ಸೇವಿಸಿದರೆ, ಅದು ಹೊಟ್ಟೆಯಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗಬಹುದು.

ಮೂಗಿನಿಂದ ರಕ್ತಸ್ರಾವ  ಬೆಲ್ಲದ ಚಹಾವನ್ನು ಹೆಚ್ಚು ಕುಡಿಯುವುದರಿಂದ ಮೂಗಿನಿಂದ ರಕ್ತಸ್ರಾವವಾಗಬಹುದು. ಬೆಲ್ಲದ ತುಂಬಾ ರುಚಿಕರಾವಗಿರುತ್ತದೆ. ಮತ್ತು ಅದರ ಅತಿಯಾದ ಸೇವನೆಯು ಹಾನಿಯನ್ನುಂಟುಮಾಡುತ್ತದೆ.

ಪ್ರಯೋಜನಗಳು -ಬೆಲ್ಲದ ಟೀ ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿ. ಇದನ್ನು ನಿಯಮಿತವಾಗಿ ಕುಡಿಯುವುದರಿಂದ ತೂಕವನ್ನು ಕಡಿಮೆ(Weight Loss) ಮಾಡಲು ಸಹ ಸಹಾಯ ಮಾಡುತ್ತದೆ.

-ಬೆಲ್ಲವು ಕಬ್ಬಿಣದಲ್ಲಿ ಸಮೃದ್ಧವಾಗಿದೆ ಮತ್ತು ದೇಹಕ್ಕೆ ಕಬ್ಬಿಣದ ಅಗತ್ಯವಿರುತ್ತದೆ, ಏಕೆಂದರೆ ಇದು ದೇಹದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ತಲುಪಿಸಲು ಕೆಲಸ ಮಾಡುತ್ತದೆ.

-ಬೆಲ್ಲದ ಟೀ ಸೇವನೆಯಿಂದ ನೆಗಡಿ ಮತ್ತು ಕೆಮ್ಮಿನ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

-ಬೆಲ್ಲದ ಟೀ ಕುಡಿಯುವುದರಿಂದ ರಕ್ತದೊತ್ತಡವೂ ನಿಯಂತ್ರಣದಲ್ಲಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್