AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ನಿಮ್ಮ ಬಾಯಿಯಲ್ಲಿ ಕಾಣಿಸಿಕೊಳ್ಳುವ ಈ ಚಿಹ್ನೆಗಳು ಏನನ್ನು ಸೂಚಿಸುತ್ತವೆ?

ಮಧುಮೇಹ: ನಿಮ್ಮ ಬಾಯಿಯಲ್ಲಿ ಕಾಣಿಸಿಕೊಳ್ಳುವ ಹಲವು ಚಿಹ್ನೆಗಳು ನಿಮ್ಮ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗಿದೆ ಎಂಬುದರ ಬಗ್ಗೆ ಸುಳಿವು ನೀಡುತ್ತವೆ. ಹೌದು, ಮಧುಮೇಹ(Sugar)ವೆನ್ನುವುದು ಬದುಕಿದ್ದಂತೆಯೇ ನರಕಕ್ಕೆ ತಳ್ಳುವ ಕಾಯಿಲೆಯಾಗಿದ್ದು, ಕಾಯಿಲೆ ಒಮ್ಮೆ ಆವರಿಸಿದರೆ ನಿಮಗೆ ಬೇಕಾದ ಸಿಹಿ ತಿನಿಸುಗಳನ್ನು ಮುಟ್ಟಲೂ ಸಾಧ್ಯವಿಲ್ಲ.

Diabetes: ನಿಮ್ಮ ಬಾಯಿಯಲ್ಲಿ ಕಾಣಿಸಿಕೊಳ್ಳುವ ಈ ಚಿಹ್ನೆಗಳು ಏನನ್ನು ಸೂಚಿಸುತ್ತವೆ?
Diabetes
TV9 Web
| Edited By: |

Updated on: May 20, 2022 | 11:15 AM

Share

ನಿಮ್ಮ ಬಾಯಿಯಲ್ಲಿ ಕಾಣಿಸಿಕೊಳ್ಳುವ ಹಲವು ಚಿಹ್ನೆಗಳು ನಿಮ್ಮ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗಿದೆ ಎಂಬುದರ ಬಗ್ಗೆ ಸುಳಿವು ನೀಡುತ್ತವೆ. ಹೌದು, ಮಧುಮೇಹ(Diabetes))ವೆನ್ನುವುದು ಬದುಕಿದ್ದಂತೆಯೇ ನರಕಕ್ಕೆ ತಳ್ಳುವ ಕಾಯಿಲೆಯಾಗಿದ್ದು, ಕಾಯಿಲೆ ಒಮ್ಮೆ ಆವರಿಸಿದರೆ ನಿಮಗೆ ಬೇಕಾದ ಸಿಹಿ ತಿನಿಸುಗಳನ್ನು ಇನ್ನುವಂತೆಯೇ ಇಲ್ಲ.

ಮಧುಮೇಹವು ವಿಶ್ವಾದ್ಯಂತ ಮಿಲಿಯನ್​ಗಟ್ಟಲೆ ಜನರನ್ನು ಕಾಡುತ್ತಿದೆ. ಸಾಮಾನ್ಯ ಶೀತ, ಜ್ವರವಾಗಿರಲಿ, ಹೃದಯ ಸಂಬಂಧಿ ಕಾಯಿಲೆ, ಮಧುಮೇಹವಾಗಿರಲಿ ಪ್ರತಿಯೊಂದಕ್ಕೆ ತನ್ನದೇ ಆದ ಲಕ್ಷಣಗಳಿರುತ್ತವೆ.

ಲಕ್ಷಣಗಳ ಬಗ್ಗೆ ಮಾಹಿತಿ ಇಲ್ಲಿದೆ

ಗಂಟಲು ಒಣಗುವುದು ದೇಹದಲ್ಲಿ ಸಕ್ಕರೆ ಪ್ರಮಾಣದಲ್ಲಿ ಹೆಚ್ಚಳವಾದಂತೆ ಬಾಯಿಯಲ್ಲಿ ಲಾಲಾರಸ ಉತ್ಪಾದನೆ ಪ್ರಮಾಣವೂ ಕುಗ್ಗುತ್ತದೆ, ಗಂಟಲು ಒಣಗುತ್ತದೆ, ವಿಪರೀತ ಬಾಯಾರಿಕೆ ಉಂಟಾಗುತ್ತದೆ.

ಪದೇ ಪದೇ ಮೂತ್ರ ವಿಸರ್ಜನೆ ಆಗಾಗ ಮೂತ್ರ ವಿಸರ್ಜನೆ ಮಾಡುವುದು ಅಥವಾ ರಾತ್ರಿ ಹೊತ್ತು ಮಲಗಿದಾಗ ಪದೇ ಪದೇ ನಿದ್ದೆಯಿಂದ ಏಳುವುದು, ನಿಮ್ಮ ರಕ್ತದಲ್ಲಿರುವ ಸಕ್ಕರೆ ಪ್ರಮಾಣ ಸಾಮಾನ್ಯವಲ್ಲ ಎಂಬ ಸೂಚನೆಯನ್ನು ನೀಡುತ್ತದೆ.

ಸದಾ ಆಯಾಸದಿಂದಿರುವುದು

ಒಂದು ವೇಳೆ ನಿಮ್ಮ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾದರೆ ದೈಹಿಕ ಚಟುವಟಿಕೆಗಳ ಹೊರತಾಗಿಯೂ ಆಯಾಸ ಕಾಣಿಸಿಕೊಂಡರೆ ಇದು ನಿರ್ಜಲೀಕರಣ ಮತ್ತು ಮೂತ್ರಪಿಂಡದ ಹಾನಿಯಂತಹ ಮಧುಮೇಹದ ಮೂಲ ಪರಿಣಾಮಗಳಿಗೆ ಸಂಬಂಧಿಸಿದ ಲಕ್ಷಣ ಇದಾಗಿದೆ.

ನಾಲಿಗೆ ಅಥವಾ ಬಾಯಿಯಲ್ಲಿ ಉರಿ ಅನುಭವ ನಾಲಿಗೆ ಅಥವಾ ಬಾಯಿಯಲ್ಲಿ ಉರಿಯಾದ ಅನುಭವವುಂಟಾಗುತ್ತದೆ. ಯಾವಾಗಲೂ ಬಾಯಿ ಒಣಗಿಯೇ ಇರುತ್ತದೆ. ಕೆಲವೊಬ್ಬರಿಗೆ ಯಾವುದೇ ಆಹಾರ ರುಚಿಸುವುದೇ ಇಲ್ಲ.

ತೂಕದಲ್ಲಿ ಇಳಿಕೆ: ನಿಮ್ಮ ದೇಹವು ರಕ್ತದಲ್ಲಿನ ಗ್ಲೂಕೋಸ್ ಅನ್ನು ಸರಿಯಾಗಿ ಪ್ರಕ್ರಿಯೆಗೊಳಿಸಲು ಸಾಧ್ಯವಾಗದಿದ್ದಾಗ, ಅದು ಕೊಬ್ಬಿನ ಸಂಗ್ರಹಗಳನ್ನು ಬಳಸಿಕೊಳ್ಳುತ್ತದೆ ಮತ್ತು ನಿಮ್ಮ ಪ್ರಯತ್ನವಿಲ್ಲದೆಯೇ ತೂಕ ಇಳಿಕೆಗೆ ಕಾರಣವಾಗುತ್ತದೆ.

ದೃಷ್ಟಿ ದೋಶಗಳು ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಿದ್ದರೆ ಇದು ಕಣ್ಣಿನ ದೃಷ್ಟಿಯ ಮೇಲೆ ನೇರವಾದ ಪರಿಣಾಮ ಉಂಟು ಮಾಡುತ್ತದೆ ಹಾಗೂ ಆಗಾಗ ಕನ್ನಡಕಗಳನ್ನು ಬದಲಿಸುತ್ತಾ ಇರಲು ಕಾರಣವಾಗಬಹುದು.

ಗಾಯವಾದರೆ ಮಾಗಲು ಸಮಯ ಹೆಚ್ಚು ತೆಗೆದುಕೊಳ್ಳುವುದು ಮಧುಮೇಹ ಬರುವುದಕ್ಕೂ ಮುನ್ನ ಯಾವುದೇ ಗಾಯವಾದಾಗ ಕೆಲವು ನಿಮಿಷಗಳಲ್ಲಿಯೇ ರಕ್ತ ಹೆಪ್ಪುಗಟ್ಟಿ ಶೀಘ್ರವೇ ಮಾಗುತ್ತಿದ್ದುದು ಈಗ ಈ ಕ್ರಿಯೆಗೆ ಹೆಚ್ಚು ಸಮಯ ತೆಗೆದುಕ್ಕೊಳ್ಳುತ್ತಿದ್ದರೆ ಇದು ಮಧುಮೇಹದ ಸೂಚನೆಯ ಜೊತೆಗೇ ಮಾಗದ ಗಾಯದಿಂದಾಗಿ ಸೋಂಕು ಆವರಿಸುವ ಸಾಧ್ಯತೆಯೂ ಹೆಚ್ಚುತ್ತದೆ.

ಸಾಮಾನ್ಯವಾಗಿ ಆಗುವ ಚಿಕ್ಕ ಪುಟ್ಟ ಗಾಯಗಳು ಅಥವಾ ತರಚುಗಾಯಗಳೂ ಗುಣಹೊಂದಲು ಹೆಚ್ಚು ಸಮಯವನ್ನು ಬಳಸಿಕೊಳ್ಳುತ್ತದೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ