AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಉಬ್ಬಿರುವ ರಕ್ತನಾಳಗಳಿಂದ ತೊಂದರೆ ಅನುಭವಿಸುತ್ತಿದ್ದೀರಾ ಇಲ್ಲಿದೆ ತಜ್ಞರ ಸಲಹೆಗಳು

ತಿರುಚಿದಂತಿರುವ ಈ ರಕ್ತನಾಳಗಳು ಸಾಕಷ್ಟು ನೋವನ್ನು ಉಂಟುಮಾಡುತ್ತದೆ ಮತ್ತು ದಿನನಿತ್ಯದ ಜೀವನ ಚಟುವಟಿಕೆಗಳಲ್ಲಿ ಅಡ್ಡಿಯುಂಟು ಮಾಡುತ್ತದೆ. ಮಹಿಳೆಯರಲ್ಲಿ ಈ ಸಮಸ್ಯೆಯೂ ಋತುಬಂಧ ಮತ್ತು ಗರ್ಭಾವಸ್ಥೆಯ ಸಮಯದಲ್ಲಿ ಹೆಚ್ಚಾಗಿ ಪರಿಣಾಮ ಬೀರುತ್ತದೆ.

Health Tips: ಉಬ್ಬಿರುವ ರಕ್ತನಾಳಗಳಿಂದ ತೊಂದರೆ ಅನುಭವಿಸುತ್ತಿದ್ದೀರಾ ಇಲ್ಲಿದೆ ತಜ್ಞರ ಸಲಹೆಗಳು
Varicose Veins
ಅಕ್ಷತಾ ವರ್ಕಾಡಿ
|

Updated on: Oct 25, 2022 | 11:36 AM

Share

ಉಬ್ಬಿರುವ ರಕ್ತನಾಳಗಳು, ಹೆಚ್ಚಾಗಿ ಕಾಲುಗಳು ಮತ್ತು ಪಾದಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಯಾಗಿದೆ. ಮಹಿಳೆಯರಲ್ಲಿ ಈ ಸಮಸ್ಯೆಯೂ ಋತುಬಂಧ ಮತ್ತು ಗರ್ಭಾವಸ್ಥೆಯ ಸಮಯದಲ್ಲಿ ಹೆಚ್ಚಾಗಿ ಪರಿಣಾಮ ಬೀರುತ್ತದೆ. ಇದು ಸಾಮಾನ್ಯವಾಗಿ ನೇರಳೆ ಅಥವಾ ನೀಲಿ ಬಣ್ಣದಲ್ಲಿ ಕಂಡುಬರುತ್ತದೆ. ಸಾಕಷ್ಟು ಜನರಲ್ಲಿ ತಮ್ಮ ದಿನ ನಿತ್ಯದ ಚಟುವಟಿಕೆಗಳಲ್ಲಿ ತೊಂದರೆನ್ನುಂಟು ಮಾಡುವ ಈ ಸಮಸ್ಯೆಗೆ ಪರಿಹಾರವು ಅತ್ಯಂತ ಅಗತ್ಯವಾಗಿದೆ.

ಹೆಚ್ಚು ಹೊತ್ತು ನಿಲ್ಲುವುದರಿಂದ ಉಬ್ಬಿರುವ ರಕ್ತನಾಳ ನೋವಿಗೆ ಕಾರಣವಾಗುತ್ತದೆ. ಆದ್ದರಿಂದ ಈ ಸಮಸ್ಯೆಯಿಂದ ಬಳಲುತ್ತಿರುವವರು ಆದಷ್ಟು ಕುಳಿತು ವಿಶಾಂತ್ರಿಸುವುದು ಉತ್ತಮ ಎಂದು ಆಯುರ್ವೇದ ತಜ್ಞರಾದ ಡಾ.ರೇಖಾ ರಾಧಾಮೋನಿಯವರು ಹೇಳುತ್ತಾರೆ.

ತಿರುಚಿದಂತಿರುವ ಈ ರಕ್ತನಾಳಗಳು ಕೆಲವು ಜನರಿಗೆ ಸಾಕಷ್ಟು ನೋವನ್ನು ಉಂಟುಮಾಡುತ್ತದೆ ಮತ್ತು ದಿನನಿತ್ಯದ ಜೀವನ ಚಟುವಟಿಕೆಗಳಲ್ಲಿ ಸಹ ಅಡ್ಡಿಪಡಿಸಬಹುದು. ಮಹಿಳೆಯರಲ್ಲಿ ಈ ಸಮಸ್ಯೆಯೂ ಋತುಬಂಧ ಮತ್ತು ಗರ್ಭಾವಸ್ಥೆಯ ಸಮಯದಲ್ಲಿ ಹೆಚ್ಚಾಗಿ ಪರಿಣಾಮ ಬೀರುತ್ತದೆ. ಇದು ಸಾಮಾನ್ಯವಾಗಿ ಸುಡುವ ಸಂವೇದನೆ, ತುರಿಕೆ, ಉಬ್ಬಿರುವ ರಕ್ತನಾಳಗಳ ಸುತ್ತಲಿನ ಚರ್ಮದ ಬಣ್ಣದಲ್ಲಿ ಬದಲಾವಣೆ ಮತ್ತು ದೀರ್ಘಕಾಲ ಕುಳಿತುಕೊಳ್ಳುವ ಮತ್ತು ನಿಂತಾಗ ಉಲ್ಬಣಗೊಳ್ಳುವ ನೋವು ಮುಂತಾದ ಲಕ್ಷಣಗಳನ್ನು ಹೊಂದಿದೆ ಎಂದು ಇವರು ಹೇಳುತ್ತಾರೆ.

ಉಬ್ಬಿರುವ ರಕ್ತನಾಳಗಳ ಸಮಸ್ಯೆಯಿಂದ ಬಳಲುತ್ತಿರುವವರು ಚಿಕಿತ್ಸೆ ನೀಡದೆ ಹಾಗೆಯೇ ಬಿಟ್ಟರೆ ಕಾಲಾನಂತರದಲ್ಲಿ ಈ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಋತುಬಂಧಕ್ಕೊಳಗಾದ ಮಹಿಳೆಯರು ತಮ್ಮ ಅಭಿಧಮನಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಮತ್ತು ಆರಂಭಿಕ ಹಂತದಲ್ಲಿಯೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಬೆಂಗಳೂರಿನ ಅಪೊಲೊ ಸ್ಪೆಕ್ಟ್ರಾ ಆಸ್ಪತ್ರೆಯ ಜನರಲ್ ಮತ್ತು ಲ್ಯಾಪ್ರೊಸ್ಕೋಪಿಕ್ ಸರ್ಜನ್ ಡಾ. ನಂದಾ ರಜನೀಶ್ ರವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿರುವ ಮಾಹಿತಿಯಾಗಿದೆ.

ಉಬ್ಬಿರುವ ರಕ್ತನಾಳಗಳ ಸಮಸ್ಯೆಗೆ ಪರಿಹಾರ ಕ್ರಮಗಳು 

  • ಹೆಚ್ಚು ಹೊತ್ತು ನಿಲ್ಲಬೇಡಿ ಸಾಧ್ಯವಾದಷ್ಟು ಕಾಲುಗಳನ್ನು ನೇರ ಚಾಚಿ ವಿರಾಮ ತೆಗೆದುಕೊಳ್ಳಿ.
  • ಉಬ್ಬಿರುವ ರಕ್ತನಾಳಗಳ ಸಮಸ್ಯೆ ಕಾಣಿಸಿಕೊಂಡ ಭಾಗಗಳಿಗೆ ಉರಿಯೂತ ನಿವಾರಕ ತೈಲಗಳನ್ನು ಬಳಸಿ ಮಸಾಜ್ ಮಾಡಿ.
  • ತಮ್ಮ ದಿನ ನಿತ್ಯದ ಚಟುವಟಿಕೆಗಳೊಂದಿಗೆ ಯೋಗಾಸನ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ. ವಿಶೇಷವಾಗಿ ಶಿರಶಾಸನ, ಮೇರುದಂಡಾಸನ, ಪಡುತ್ತನಾಸನ, ಸರ್ವಾಂಗಾಸನ, ನೌಕಾಸನ ಮುಂತಾದ ಭಂಗಿಗಳನ್ನು ಹೊಂದಿರುವ ಆಸನಗಳನ್ನು ಮಾಡುವುದು ಉಬ್ಬಿರುವ ರಕ್ತನಾಳಗಳಿಂದ ತೊಂದರೆ ಅನುಭವಿಸುವವರಿಗೆ ಅತ್ಯಂತ ಪ್ರಯೋಜನಕಾರಿ.

ಇದನ್ನು ಓದಿ:

ಈ ಮೇಲಿನ ಸಲಹೆಗಳು ನಿಮ್ಮ ನೋವಿಗೆ ಪರಿಹಾರ ನೀಡದಿದ್ದಲ್ಲಿ ,ನಿಮ್ಮ ಹತ್ತಿರದ ಆಯುರ್ವೇದ ತಜ್ಞರನ್ನು ಭೇಟಿಯಾಗುವುದು ಉತ್ತಮ. ಇದಾಗಿಯೂ ಈ ಸಮಸ್ಯೆ ಕಡಿಮೆಯಾಗದ್ದಿದ್ದರೆನ ಶಸ್ತ್ರಚಿಕಿತ್ಸೆ ಏಕೈಕ ಆಯ್ಕೆಯಾಗಿದೆ ಎಂದು ಡಾ ರೇಖಾ ಹೇಳಿದ್ದಾರೆ.

(ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.)

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ