ನೀವು ಗಟ್ಟಿಯಾಗಿ ಹಲ್ಲುಜ್ಜುತ್ತೀರಾ? ಯಾವ ರೀತಿಯ ಬ್ರಶ್ ಬಳಸಬೇಕು?

ನಿಮ್ಮ ಹಲ್ಲುಗಳನ್ನು ತುಂಬಾ ಗಟ್ಟಿಯಾಗಿ ಉಜ್ಜುವುದು ನಿಮ್ಮ ಬಾಯಿಯ ಆರೋಗ್ಯಕ್ಕೆ ಸಮಸ್ಯೆ ಉಂಟುಮಾಡಬಹುದು. ಹಲ್ಲಿನ ಮೇಲೆ ಹೆಚ್ಚಿನ ಒತ್ತಡವನ್ನು ಹಾಕುವುದರಿಂದ ನಿಮ್ಮ ದಂತಕವಚವು ನಿಧಾನವಾಗಿ ಸವೆದುಹೋಗಬಹುದು.

ನೀವು ಗಟ್ಟಿಯಾಗಿ ಹಲ್ಲುಜ್ಜುತ್ತೀರಾ? ಯಾವ ರೀತಿಯ ಬ್ರಶ್ ಬಳಸಬೇಕು?
ಬ್ರಶ್Image Credit source: iStock
Follow us
|

Updated on: Nov 11, 2023 | 6:13 PM

ನಾವು ಹಲ್ಲು ಮತ್ತು ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಬಾಯಿ ದುರ್ನಾತ ಬರಬಾರದೆಂದು ಮೌತ್​ವಾಶ್, ಮೌತ್​ ಫ್ರೆಷನರ್ ಏನೇ ಬಳಸಬಹುದು. ಆದರೆ, ಹಲ್ಲಿನ ಆರೋಗ್ಯ ಚೆನ್ನಾಗಿರದಿದ್ದರೆ ಅದು ನಮಗೂ, ಬೇರೆಯವರಿಗೂ ಕಿರಿಕಿರಿ ಉಂಟುಮಾಡುತ್ತದೆ. ಕೆಲವರು ದಿನಕ್ಕೆ 2 ಬಾರಿ ಬ್ರಶ್ ಮಾಡುತ್ತಾರೆ. ಆದರೆ, ಅವರಿಗೆ ಸರಿಯಾಗಿ ಹೇಗೆ ಬ್ರಶ್ ಮಾಡಬೇಕೆಂಬುದು ಗೊತ್ತಿರುವುದಿಲ್ಲ. ನೀವು ಕೂಡ ಗಟ್ಟಿಯಾಗಿ ಮತ್ತು ಗಟ್ಟಿಯಾದ ಬ್ರಶ್​ನಿಂದ ಹಲ್ಲು ಉಜ್ಜುವವರಾಗಿದ್ದರೆ ಆ ಅಭ್ಯಾಸವನ್ನು ಬದಲಾಯಿಸಿಕೊಳ್ಳುವುದು ಉತ್ತಮ.

ನೀವು ತುಂಬಾ ಗಟ್ಟಿಯಾಗಿ ಬ್ರಷ್ ಮಾಡಿದರೆ ಏನಾಗುತ್ತದೆ ಎಂದು ಗೊತ್ತೇ? ನಿಮ್ಮ ಹಲ್ಲುಗಳನ್ನು ತುಂಬಾ ಗಟ್ಟಿಯಾಗಿ ಉಜ್ಜುವುದು ನಿಮ್ಮ ಬಾಯಿಯ ಆರೋಗ್ಯಕ್ಕೆ ಸಮಸ್ಯೆ ಉಂಟುಮಾಡಬಹುದು. ಹಲ್ಲಿನ ಮೇಲೆ ಹೆಚ್ಚಿನ ಒತ್ತಡವನ್ನು ಹಾಕುವುದರಿಂದ ನಿಮ್ಮ ದಂತಕವಚವು ನಿಧಾನವಾಗಿ ಸವೆದುಹೋಗಬಹುದು. ಇದರಿಂದ ಹಲ್ಲುಗಳು ಮತ್ತಷ್ಟು ಸೆನ್ಸಿಟಿವ್ ಆಗಬಹುದು.

ಇದನ್ನೂ ಓದಿ: ಬೆಳಗ್ಗೆ ಹಲ್ಲುಜ್ಜದೆ ಆಹಾರ ತಿನ್ನುವ ಅಭ್ಯಾಸವಿದೆಯೇ? ಇದರಿಂದ ನಿಮ್ಮ ವಸಡಿಗೆ ಮಾತ್ರವಲ್ಲ ಹೃದಯಕ್ಕೂ ಅಪಾಯ

ತುಂಬಾ ಗಟ್ಟಿಯಾಗಿ ಹಲ್ಲುಜ್ಜುವುದರಿಂದ ವಸಡು ಸಡಿಲವಾಗುತ್ತದೆ. ಇದು ನಿಮ್ಮ ನಗುವಿನ ಮೇಲೆ ಪರಿಣಾಮ ಬೀರುವುದು ಮಾತ್ರವಲ್ಲದೆ, ನಿಮ್ಮ ಹಲ್ಲುಗಳ ಬೇರುಗಳು ಹೊರಗೆ ಕಾಣಿಸಬಹುದು. ಇದರಿಂದ ಹಲ್ಲುಗಳು ಒಳಗೊಳಗೇ ಕೊಳೆಯತೊಡಗುತ್ತದೆ.

ಸರಿಯಾದ ಹಲ್ಲುಜ್ಜುವ ಯಾವುದು?:

ನೀವು ಮೃದುವಾದ ಬ್ರಿಸ್ಟಲ್ ಟೂತ್ ಬ್ರಷ್ ಅನ್ನು ಬಳಸಿ.

ನಿಮ್ಮ ಹಲ್ಲುಗಳ ಮೇಲೆ 45 ಡಿಗ್ರಿ ಕೋನದಲ್ಲಿ ಬ್ರಷ್ ಅನ್ನು ಹಿಡಿದುಕೊಂಡು ಬ್ರಶ್ ಮಾಡಿ.

ನಿಮ್ಮ ಒಸಡುಗಳನ್ನು ಕೂಡ ನಿಧಾನವಾಗಿ ಬ್ರಶ್ ಮಾಡಿ.

ನೀವು ಎಲೆಕ್ಟ್ರಿಕ್ ಟೂತ್ ಬ್ರಷ್ ಅನ್ನು ಬಳಸಿದರೆ, ನಿಮ್ಮ ಹಲ್ಲುಗಳ ಮೇಲೆ ನೀವು ಅದನ್ನು ಬಲವಾಗಿ ಒತ್ತಬೇಕಾಗಿಲ್ಲ. ಅದನ್ನು ಹಲ್ಲುಗಳ ಮೇಲೆ ಇಟ್ಟರೆ ತನ್ನಿಂತಾನೇ ಬ್ರಶ್ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ