Garbhageete: 7-8ನೇ ತಿಂಗಳಲ್ಲಿ ಭ್ರೂಣದ ಬೆಳವಣಿಗೆ ಹೇಗಿರುತ್ತೆ? ಗರ್ಭಿಣಿಯರು ಹೇಗೆಲ್ಲಾ ಜಾಗ್ರತೆವಹಿಸಬೇಕು?

ಗರ್ಭಿಣಿಯರು 7-8ನೇ ತಿಂಗಳಲ್ಲಿ ಹೇಗೆಲ್ಲಾ ಜಾಗ್ರತೆವಹಿಸಬೇಕು, ಮಗುವಿನ ಬೆಳವಣಿಗೆಯ ಬಗ್ಗೆ ಯೋಗ ತಜ್ಞೆ ಕಮಲಾ ಭಾರದ್ವಾಜ್ ನೀಡಿರುವ ಮಾಹಿತಿ ಇಲ್ಲಿದೆ. ಏಳನೇ ತಿಂಗಳಿನಲ್ಲಿ ಗರ್ಭದಲ್ಲಿರುವ ಮಗುವಿನ ಎಲ್ಲಾ ಅಂಗಾಂಗಗಳು ಚೆನ್ನಾಗಿ ಬೆಳೆದಿರುತ್ತವೆ. ದೇಹದ ಎಲ್ಲಾ ಭಾಗಗಳು ಸ್ಪಷ್ಟವಾಗಿರುತ್ತವೆ. ಈ ಹಂತದಲ್ಲಿ ಮಗು ಹುಟ್ಟಿದಲ್ಲಿ ಅದು ಬದುಕುಳಿಯುತ್ತದೆ.

Garbhageete: 7-8ನೇ ತಿಂಗಳಲ್ಲಿ ಭ್ರೂಣದ ಬೆಳವಣಿಗೆ ಹೇಗಿರುತ್ತೆ? ಗರ್ಭಿಣಿಯರು ಹೇಗೆಲ್ಲಾ ಜಾಗ್ರತೆವಹಿಸಬೇಕು?
Kamala Bharadwaj
Follow us
| Updated By: ನಯನಾ ರಾಜೀವ್

Updated on: Jul 02, 2022 | 8:30 PM

ಗರ್ಭಿಣಿಯರು 7-8ನೇ ತಿಂಗಳಲ್ಲಿ ಹೇಗೆಲ್ಲಾ ಜಾಗ್ರತೆವಹಿಸಬೇಕು, ಮಗುವಿನ ಬೆಳವಣಿಗೆಯ ಬಗ್ಗೆ ಯೋಗ ತಜ್ಞೆ  ಕಮಲಾ ಭಾರದ್ವಾಜ್ ನೀಡಿರುವ ಮಾಹಿತಿ ಇಲ್ಲಿದೆ. ಏಳನೇ ತಿಂಗಳಿನಲ್ಲಿ ಗರ್ಭದಲ್ಲಿರುವ ಮಗುವಿನ ಎಲ್ಲಾ ಅಂಗಾಂಗಗಳು ಚೆನ್ನಾಗಿ ಬೆಳೆದಿರುತ್ತವೆ. ದೇಹದ ಎಲ್ಲಾ ಭಾಗಗಳು ಸ್ಪಷ್ಟವಾಗಿರುತ್ತವೆ. ಈ ಹಂತದಲ್ಲಿ ಮಗು ಹುಟ್ಟಿದಲ್ಲಿ ಅದು ಬದುಕುಳಿಯುತ್ತದೆ.

ಗರ್ಭಿಣಿಗೆ ಬಳಲಿಕೆ ಹೆಚ್ಚು ಅದಕ್ಕಾಗಿ ಹಣ್ಣಿನ ರಸ, ಎಳನೀರು, ಸಿಹಿ ಮಜ್ಜಿಗೆ, ರಾಗಿ ಗಂಜಿ ಮುಂತಾದವುಗಳನ್ನು ಹೆಚ್ಚು ಬಳಸಬೇಕು. ಇನ್ನು ಎಂಟನೇ ತಿಂಗಳಿನಲ್ಲಿ ಗರ್ಭಿಣಿಯ ಗರ್ಭಕೋಶದ ಕೆಳಭಾಗವು ಹಿಗ್ಗಿ ಭ್ರೂಣದ ತಲೆ ಅದರಲ್ಲಿ ಕೂಡುವಂತೆ ಅನು ಮಾಡುತ್ತದೆ. ಈ ಹಂತದಲ್ಲಿ ಮಗುವಿಗೆ ಸಂಪೂರ್ಣ ಕೊಬ್ಬು ಪೂರೈಕೆಯಾಗವುದರಿಂದ ಅದು ಗರ್ಭದ ಹೊರಗೆ ಜೀವಿಸುವ ಕ್ಷಮತೆಯನ್ನು ಹೊಂದಿರುತ್ತದೆ.

ಮಗುವಿನ ಮಾಂಸಖಂಡಗಳು ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿ, ರಕ್ತ ಪರಿಚಲನೆ ಆರಮಭವಾಗಿ ತಿಂದ ಆಹಾರ ಜೀರ್ಣಿಸಿಕೊಳ್ಳುವ ಶಕ್ತಿಯನ್ನು ಪಡೆದಿರುತ್ತದೆ. ಈ ವೇಳೆ ಗರ್ಭಿಣಿಯ ಮನೋಸ್ಥಿತಿ ಶಾಂತವಾಗಿರಬೇಕು, ಅದಕ್ಕಾಗಿ ಪ್ರಾರ್ಥನೆ, ಧ್ಯಾನ ಮಾಡುವುದು ಒಳ್ಳೆಯದು, ಹೆರಿಗೆ ಕುರಿತು ಅನವಶ್ಯಕವಾದ ಭಯವನ್ನು ಮನಸ್ಸಿನಿಂದ ತೆಗೆದುಹಾಕಬೇಕು.

ಇತರರ ಮಾತಿನ ಕಡೆ ಗಮನಕೊಟ್ಟು ಮನಸ್ಸಿಗೆ ನೋವು ಮಾಡಿಕೊಳ್ಳಬಾರದು. ಈ ಸಮಯದಲ್ಲಿ ಗರ್ಭಿಣಿಯು ದೈಹಿಕವಾಗಿ ಹಾಗೂ ಮಾನಸಿಕ ಸ್ಥೈರ್ಯ ಹೊಂದಿದಲ್ಲಿ ಆತಂಕ ಯಾವುದೇ ರೀತಿ ಕಾಡುವುದಿಲ್ಲ.

ಕಮಲಾ ಭಾರಧ್ವಾಜ್ ಕುರಿತು ಮಾಹಿತಿ: ಕಮಲಾ ಭಾರಧ್ವಾಜ್ ಪ್ರಸಿದ್ಧ ಯೋಗ ತಜ್ಞರಾಗಿದ್ದು, ಸತ್ಯವೆನ್ನುವ ಯೋಗ ಕೇಂದ್ರವನ್ನು ಮುನ್ನಡೆಸುತ್ತಿದ್ದಾರೆ. ಯೋಗದಲ್ಲಿ ಎಂಎಸ್​ಸಿ ಮಾಡಿದ್ದು, ಹಾಗೆಯೇ ಯೋಗದಲ್ಲಿಯೇ ಪಿಜಿ ಡಿಪ್ಲೊಮಾ ಓದಿದ್ದಾರೆ. ಅವರು ಜೈನ್​ ಕಾಲೇಜಿನಲ್ಲಿ ಎಂಬಿಎ ಪೂರೈಸಿದ್ದಾರೆ.

ಅವರಿಗೆ 2015ರಲ್ಲಿ ಯೋಗದಲ್ಲಿನ ಸಾಧನೆಗಾಗಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಯೋಗ ಕಲಾಸಾಧಕಿ ಪ್ರಶಸ್ತಿಗೂ ಭಾಜನರಾಗಿದ್ದಾರೆ, ಜ್ಯೋತಿಷ ರತ್ನ ಸೇರಿದಂತೆ ಹಲವು ಕೋರ್ಸ್​ಗಳನ್ನು ಮಾಡಿದ್ದಾರೆ. ಗರ್ಭಾವಸ್ಥೆ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.ನಂ.9663879672. www.astroyoga.co.in ಭೇಟಿ ನೀಡಿ.

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು