AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಗೆ ಸಿಗುವ ಮಾವಿನ ಜ್ಯೂಸ್ ಇಷ್ಟಪಟ್ಟು ಕುಡಿಯುತ್ತೀರಾ? ಹಾಗಿದ್ರೆ ನೀವು ಈ ಸ್ಟೋರಿ ಓದಲೇಬೇಕು

ಮಾವಿನ ಹಣ್ಣು ಎಲ್ಲರಿಗೂ ಇಷ್ಟ. ಅದರಲ್ಲಿಯೂ ಕೆಲವರಿಗೆ ಮಾವಿನಹಣ್ಣಿನಿಂದ ತಯಾರಿಸಿದ ಜ್ಯೂಸ್ ಎಂದರೆ ಬಲು ಇಷ್ಟ. ಆದರೆ ಹೊರಗಡೆ ಅಂಗಡಿಗಳಲ್ಲಿ ಸಿಗುವ ಜ್ಯೂಸ್ ಎಷ್ಟು ಆರೋಗ್ಯಕರ ಎಂದು ಯೋಚಿಸಿದ್ದೀರಾ? ಕೆಲವೊಮ್ಮೆ ನಿಮಗೆ ತಿಳಿಯದಂತೆ ಸ್ವಲ್ಪ ಕೊಳೆತ ಅಥವಾ ಮೇಲ್ನೋಟಕ್ಕೆ ಸ್ವಲ್ಪ ಚೆನ್ನಾಗಿರುವ ಮಾವಿನ ಹಣ್ಣುಗಳನ್ನು ಬಳಸಿ ಜ್ಯೂಸ್ ಮಾಡಿಕೊಡಬಹುದು. ಈ ರೀತಿ ಹಾಳಾಗಿರುವ ಹಣ್ಣಿನಿಂದ ಮಾಡಿದ ಜ್ಯೂಸ್ ಕುಡಿದರೆ ಏನಾಗಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೊರಗೆ ಸಿಗುವ ಮಾವಿನ ಜ್ಯೂಸ್ ಇಷ್ಟಪಟ್ಟು ಕುಡಿಯುತ್ತೀರಾ? ಹಾಗಿದ್ರೆ ನೀವು ಈ ಸ್ಟೋರಿ ಓದಲೇಬೇಕು
Contaminated Mango JuiceImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 11, 2026 | 7:25 PM

Share

ಇತ್ತೀಚೆಗೆ ಗುಜರಾತ್‌ನಲ್ಲಿ ಹಾಳಾಗಿರುವ, ಹುಳ ಬಿದ್ದ ಮಾವಿನ ಹಣ್ಣುಗಳನ್ನು ಜ್ಯೂಸ್ ತಯಾರಿಕೆಗೆ ಬಳಸಲಾಗುತ್ತಿದ್ದ ಘಟನೆ ಬೆಳಕಿಗೆ ಬಂದಿತ್ತು. ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದ (FSSAI) ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಹಾಳಾದ ಹಣ್ಣುಗಳನ್ನು ವಶಪಡಿಸಿಕೊಂಡಿದ್ದರು. ಈ ಘಟನೆ ಬಳಿಕ ಹೊರಗೆ ಸಿಗುವ ಜ್ಯೂಸ್ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಸ್ವಲ್ಪ ಹೆಚ್ಚು ಹಣ್ಣಾದದ್ದು ಸಾಮಾನ್ಯವಾಗಿ ದೊಡ್ಡ ಸಮಸ್ಯೆ ಉಂಟುಮಾಡದೇ ಇರಬಹುದು. ಆದರೆ ಕೊಳೆತ ಅಥವಾ ಸಣ್ಣ ಹುಳ ಇರುವ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾ, ಫಂಗಸ್ ಮತ್ತು ಕೀಟಗಳು ವೇಗವಾಗಿ ಬೆಳೆಯುತ್ತವೆ. ಮೇಲ್ನೋಟಕ್ಕೆ ಸ್ವಲ್ಪ ಭಾಗದಲ್ಲಿ ಮಾತ್ರ ಕಾಣಿಸಿಕೊಂಡರೂ ಅದರ ವಿಷಕಾರಿ ಅಂಶ ಹಣ್ಣಿನ ಒಳಭಾಗಕ್ಕೂ ಹರಡಿರಬಹುದು. ಹಾಗಾದರೆ ಈ ರೀತಿ ಹೊರಗಡೆ ಕುಡಿಯುವ ಜ್ಯೂಸ್ ಎಷ್ಟು ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹಾಳಾಗಿರುವ ಹಣ್ಣಿನಿಂದ ಮಾಡಿದ ಜ್ಯೂಸ್ ಕುಡಿದರೆ ಏನಾಗಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹಾಳಾದ ಜ್ಯೂಸ್ ಕುಡಿದರೆ ಏನಾಗಬಹುದು?

ತಜ್ಞರ ಪ್ರಕಾರ, ಸ್ವಲ್ಪ ಹಾಳಾದ ಹಣ್ಣುಗಳಿಂದ ತಯಾರಿಸಿದ ಜ್ಯೂಸ್ ಕುಡಿದರೂ ಕೂಡ ದೇಹಕ್ಕೆ ಹಾನಿಕರ ಬ್ಯಾಕ್ಟೀರಿಯಾ ಮತ್ತು ವಿಷಕಾರಿ ಅಂಶಗಳು ದೇಹದೊಳಗೆ ಹೋಗಬಹುದು. ಜೊತೆಗೆ ಹೊಟ್ಟೆನೋವು, ವಾಂತಿ, ಹೊಟ್ಟೆ ಉಬ್ಬರ, ಜ್ವರ, ಫುಡ್ ಪಾಯ್ಸನಿಂಗ್ ಹೀಗೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಕೆಲವೊಮ್ಮೆ ಫಂಗಸ್‌ನಿಂದ ಕಂಡುಬರುವ “ಮೈಕೋಟಾಕ್ಸಿನ್” ಎಂಬ ವಿಷಕಾರಿ ಅಂಶ ಯಕೃತ್ ಮತ್ತು ಮೂತ್ರಪಿಂಡಗಳ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ.

ಮಕ್ಕಳಿಗೆ ಮತ್ತು ವೃದ್ಧರಿಗೆ ಹೆಚ್ಚು ಅಪಾಯ

ಹುಳು ಬಿದ್ದ ಹಣ್ಣುಗಳಲ್ಲಿ ಅಪಾಯಕಾರಿ ಕೀಟಾಣುಗಳು ಇರುವ ಸಾಧ್ಯತೆ ಹೆಚ್ಚು. ವಿಶೇಷವಾಗಿ ಮಕ್ಕಳು, ಗರ್ಭಿಣಿಯರು, ವೃದ್ಧರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಇದು ಹೆಚ್ಚು ಅಪಾಯಕಾರಿಯಾಗಿದೆ.

ಇದನ್ನೂ ಓದಿ: ಹಾಲು ಹಾಕಿದ ಚಹಾ ಕುಡಿದರೆ ಅಸಿಡಿಟಿ ಆಗುತ್ತಾ? ಹಾಗಿದ್ರೆ ಈ ಸಿಂಪಲ್ ಟ್ರಿಕ್ ಪಾಲಿಸಿ ನೋಡಿ

ರಾಸಾಯನಿಕಗಳಿಂದ ಹಣ್ಣನ್ನು ಗುರುತಿಸುವುದು ಹೇಗೆ?

ಕೆಲ ವ್ಯಾಪಾರಿಗಳು “ಕ್ಯಾಲ್ಸಿಯಂ ಕಾರ್ಬೈಡ್” ಬಳಸಿ ಕೃತಕವಾಗಿ ಹಣ್ಣಾಗಿಸುತ್ತಾರೆ. ಇಂತಹ ಹಣ್ಣುಗಳಲ್ಲಿ ಒಂದೇ ತರದ ಗಾಢ ಹಳದಿ ಬಣ್ಣ, ರುಚಿಯಲ್ಲಿ ಅಸಹಜತೆ, ಕಡಿಮೆ ರಸ, ನೀರಿನಲ್ಲಿ ತೇಲುವ ಗುಣ ಕಾಣಿಸಬಹುದು.

ಜ್ಯೂಸ್ ಕುಡಿಯುವಾಗ ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು?

  • ನಿಮ್ಮ ಎದುರಲ್ಲೇ ಹಣ್ಣು ಕತ್ತರಿಸಿ ಜ್ಯೂಸ್ ಮಾಡಿಸಿಕೊಳ್ಳಿ
  • ಮುಂಚಿತವಾಗಿ ತಯಾರಿಸಿದ ಪಲ್ಪ್ ಅಥವಾ ಜ್ಯೂಸ್ ಕುಡಿಯುವುದನ್ನು ತಪ್ಪಿಸಿ
  • ಹಣ್ಣುಗಳನ್ನು ಚೆನ್ನಾಗಿ ತೊಳೆದು ಬಳಸಿ
  • ಸಾಧ್ಯವಾದರೆ ಮನೆಯಲ್ಲೇ ತಾಜಾ ಜ್ಯೂಸ್ ತಯಾರಿಸಿ ಕುಡಿಯಿರಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು