AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟ ಮಾಡಿದ ತಕ್ಷಣ ವಾಕಿಂಗ್ ಮಾಡುವುದು ಸರಿಯೋ ತಪ್ಪೋ? ಇಲ್ಲಿದೆ ತಜ್ಞರ ಅಭಿಪ್ರಾಯ

ಊಟ ಮಾಡಿದ ತಕ್ಷಣ ನಡೆಯುವ ಅಭ್ಯಾಸ ಹಲವರಲ್ಲಿ ಇರುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ದೇಹವು ವಿಭಿನ್ನ ಅಗತ್ಯಗಳನ್ನು ಹೊಂದಿರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅಂದರೆ ಈ ಅಭ್ಯಾಸ ಎಲ್ಲರಿಗೂ ಸರಿಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿರುತ್ತದೆ. ಸರಿಯಾದ ಮಾಹಿತಿಯಿಲ್ಲದೆ ಯಾವುದೇ ಅಭ್ಯಾಸವನ್ನು ಅಳವಡಿಸಿಕೊಳ್ಳುವುದು ಒಳ್ಳೆಯದಲ್ಲ. ಆದ್ದರಿಂದ, ವಾಕಿಂಗ್ ಮಾಡಲು ಸರಿಯಾದ ಸಮಯ ಯಾವುದು? ಊಟ ಮಾಡಿದ ಮೇಲೆ ವಾಕಿಂಗ್ ಹೋಗುವುದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಊಟ ಮಾಡಿದ ತಕ್ಷಣ ವಾಕಿಂಗ್ ಮಾಡುವುದು ಸರಿಯೋ ತಪ್ಪೋ? ಇಲ್ಲಿದೆ ತಜ್ಞರ ಅಭಿಪ್ರಾಯ
Walk Immediately After EatingImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Feb 25, 2026 | 6:46 PM

Share

ಅನೇಕರು ಊಟ ಮಾಡಿದ ತಕ್ಷಣ ವಾಕಿಂಗ್ ಮಾಡಲು ಹೋಗುತ್ತಾರೆ. ಇದು ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಹೊಟ್ಟೆ ಭಾರವಾಗುವುದನ್ನು ತಡೆಯುತ್ತದೆ ಎಂಬುದು ಅವರು ನಂಬಿಕೆಯಾಗಿರುತ್ತದೆ. ಇನ್ನು ಕೆಲವರು ತೂಕವನ್ನು ನಿಯಂತ್ರಿಸಲು, ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಅಥವಾ ಆಲಸ್ಯವನ್ನು ಹೋಗಲಾಡಿಸಲು ಈ ರೀತಿ ಮಾಡುತ್ತಾರೆ. ಆಫೀಸ್ ಅಥವಾ ಮನೆಯಲ್ಲಿ ದೀರ್ಘಕಾಲ ಕುಳಿತು ಕೆಲಸ ಮಾಡುವವರು ಊಟದ ನಂತರ ಸ್ವಲ್ಪ ನಡೆಯುವುದು ಅಗತ್ಯವೆಂದು ಭಾವಿಸುತ್ತಾರೆ. ಗ್ಯಾಸ್, ಆಮ್ಲೀಯತೆ ಅಥವಾ ಮಲಬದ್ಧತೆಯನ್ನು (Constipation) ತಪ್ಪಿಸಲು ಅನೇಕರು ಈ ಅಭ್ಯಾಸವನ್ನು ಅಳವಡಿಸಿಕೊಂಡಿರುತ್ತಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ಜೀರ್ಣಕ್ರಿಯೆಯ ಸಾಮರ್ಥ್ಯವಿಭಿನ್ನವಾಗಿರುತ್ತದೆ ಮತ್ತು ದೇಹದ ಅಗತ್ಯತೆಗಳು ಸಹ ಬದಲಾಗಬಹುದು. ಇತ್ತೀಚಿನ ದಿನಗಳಲ್ಲಿ, ಈ ಫಿಟ್ನೆಸ್ ಪ್ರವೃತ್ತಿಗಳಿಂದಾಗಿ, ಜನ ಇಂತಹ ಅಭ್ಯಾಸವನ್ನು ಹೆಚ್ಚೆಚ್ಚು ಅಳವಡಿಸಿಕೊಳ್ಳುತ್ತಿದ್ದಾರೆ. ಆದರೆ ನಿಮಗೆ ತಿಳಿದಿರಲಿ ಸರಿಯಾದ ಮಾಹಿತಿಯಿಲ್ಲದೆ ಯಾವುದೇ ಅಭ್ಯಾಸವನ್ನು ಅಳವಡಿಸಿಕೊಳ್ಳುವುದು ಒಳ್ಳೆಯದಲ್ಲ. ಆದ್ದರಿಂದ, ವಾಕಿಂಗ್ ಮಾಡಲು ಸರಿಯಾದ ಸಮಯ ತಿಳಿದುಕೊಳ್ಳುವುದು ಬಹಳ ಮುಖ್ಯ.

ಊಟ ಮಾಡಿದ ತಕ್ಷಣ ನಡೆಯುವುದು ಸರಿಯೋ ತಪ್ಪೋ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕರಾದ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಊಟ ಮಾಡಿದ ತಕ್ಷಣ ಚುರುಕಾದ ನಡಿಗೆ ಸಾಮಾನ್ಯವಾಗಿ ಸೂಕ್ತವಲ್ಲ. ಊಟದ ನಂತರ, ದೇಹದಲ್ಲಿನ ಹೆಚ್ಚಿನ ರಕ್ತದ ಹರಿವು ಸರಿಯಾದ ಜೀರ್ಣಕ್ರಿಯೆಗೆ ಸಹಾಯ ಮಾಡಲು ಜೀರ್ಣಾಂಗ ವ್ಯವಸ್ಥೆಯ ಕಡೆಗೆ ನಿರ್ದೇಶಿಸಲ್ಪಡುತ್ತದೆ. ಅಂತಹ ಸಂದರ್ಭಗಳಲ್ಲಿ, ಊಟ ಮಾಡಿದ ತಕ್ಷಣ ವೇಗವಾಗಿ ನಡೆಯುವುದು ಅಥವಾ ಭಾರೀ ಚಟುವಟಿಕೆಯಲ್ಲಿ ತೊಡಗುವುದು ಜೀರ್ಣಕ್ರಿಯೆಯ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ಕೆಲವರಿಗೆ ಹೊಟ್ಟೆ ನೋವು, ಭಾರ ಅಥವಾ ಆಮ್ಲೀಯತೆ ಉಂಟಾಗಬಹುದು. ಆದರೆ ಕೆಲವು ನಿಮಿಷ ನಿಧಾನವಾಗಿ ನಡೆಯುವುದು ಹಾನಿಕಾರಕವಲ್ಲ. ಅದರಲ್ಲಿಯೂ ಊಟ ಮಾಡಿದ 10 ರಿಂದ 15 ನಿಮಿಷಗಳ ನಂತರ ಆರಾಮದಾಯಕ ನಿಧಾನ ನಡಿಗೆ ಮಾಡುವುದು ಬಹಳ ಉತ್ತಮ.

ಇದನ್ನೂ ಓದಿ: ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ?

ಎಷ್ಟು ಹೊತ್ತು ನಡೆಯಬೇಕು?

ಊಟದ ನಂತರ 10 ರಿಂದ 20 ನಿಮಿಷಗಳ ಕಾಲ ಲಘು ನಡಿಗೆ ಮಾಡಿ. ತುಂಬಾ ವೇಗವಾಗಿ ಅಥವಾ ದೂರ ನಡೆಯುವ ಅಗತ್ಯವಿಲ್ಲ. ಜೀರ್ಣಕ್ರಿಯೆಯ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರದಂತೆ ನಿಧಾನವಾಗಿ ನಡೆಯುವುದು ಉತ್ತಮ. ಊಟ ಭಾರವಾಗಿದ್ದರೆ, ಮೊದಲ 10- 15 ನಿಮಿಷಗಳ ಕಾಲ ವಿಶ್ರಾಂತಿ ಪಡೆಯಿರಿ ಮತ್ತು ನಂತರ ನಿಧಾನಗತಿಯಲ್ಲಿ ನಡೆಯಿರಿ. ನಿಯಮಿತ ಮತ್ತು ಸಮತೋಲಿತ ದೈನಂದಿನ ನಡಿಗೆ ಹೆಚ್ಚು ಪ್ರಯೋಜನಕಾರಿ.

ಊಟದ ನಂತರ ನಡೆಯುವುದರಿಂದಾಗುವ ಪ್ರಯೋಜನಗಳು:

ಸಾಮಾನ್ಯವಾಗಿ ಊಟದ ನಂತರ ಲಘುವಾಗಿ ನಡೆಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಗ್ಯಾಸ್ ಅಥವಾ ಉಬ್ಬುವುದು ಮುಂತಾದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ನಿಧಾನ ವೇಗದಲ್ಲಿ ನಡೆಯುವುದರಿಂದ ದೇಹವು ಸಕ್ರಿಯವಾಗಿರುತ್ತದೆ ಮತ್ತು ಸೋಮಾರಿತನ ಕಡಿಮೆಯಾಗುತ್ತದೆ. ನಿಯಮಿತ ಅಭ್ಯಾಸದಿಂದ, ಇದು ತೂಕವನ್ನು ನಿಯಂತ್ರಿಸಲು ಮತ್ತು ಚಯಾಪಚಯ ಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ
ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು