AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Covid Variant Arcturus: ಕೋವಿಡ್​ನ ಈ ಹೊಸ ರೂಪಾಂತರಿ ಹಲವು ಪಟ್ಟು ವೇಗವಾಗಿ ಹರಡುತ್ತಂತೆ, ಲಕ್ಷಣಗಳೂ ಭಿನ್ನ

ದೇಶದಲ್ಲಿ ಕೊರೊನಾ ಸೋಂಕು(Coronovirus) ಅಂತ್ಯವಾಗುವಂತೆ ಕಾಣುತ್ತಿಲ್ಲ, ಕೆಲವು ತಿಂಗಳ ಕಾಲ ಕಡಿಮೆಯಾಗಿದ್ದ ಸೋಂಕು ಮತ್ತೆ ವೇಗವಾಗಿ ಹರಡುತ್ತಿದೆ.

New Covid Variant Arcturus: ಕೋವಿಡ್​ನ ಈ ಹೊಸ ರೂಪಾಂತರಿ ಹಲವು ಪಟ್ಟು ವೇಗವಾಗಿ ಹರಡುತ್ತಂತೆ, ಲಕ್ಷಣಗಳೂ ಭಿನ್ನ
ಕೊರೊನಾವೈರಸ್
ನಯನಾ ರಾಜೀವ್
|

Updated on: Apr 13, 2023 | 11:13 AM

Share

ದೇಶದಲ್ಲಿ ಕೊರೊನಾ ಸೋಂಕು(Coronovirus) ಅಂತ್ಯವಾಗುವಂತೆ ಕಾಣುತ್ತಿಲ್ಲ, ಕೆಲವು ತಿಂಗಳ ಕಾಲ ಕಡಿಮೆಯಾಗಿದ್ದ ಸೋಂಕು ಮತ್ತೆ ವೇಗವಾಗಿ ಹರಡುತ್ತಿದೆ. ಡೆಲ್ಟಾ, ಓಮಿಕ್ರಾನ್ ನಂತರ ಈಗ ಹೊಸ ರೂಪಾಂತರವು ಜನ್ಮ ತಳೆದಿದೆ ಅದರ ಹೆಸರು ಆರ್ಕ್ಟರಸ್ (XBB.1.16) Arcturus. ಇದು ಓಮಿಕ್ರಾನ್​ಗಿಂತ ಸಾಕಷ್ಟು ಭಿನ್ನವಾದ ಲಕ್ಷಣಗಳನ್ನು ಹೊಂದಿದೆ. ಇದು ಯುಎಸ್, ಸಿಂಗಾಪುರ್, ಆಸ್ಟ್ರೇಲಿಯಾದಂತಹ ಹಲವು ದೇಶಗಳಲ್ಲಿ ಕಂಡುಬಂದಿದೆ. ಇದು ಇಲ್ಲಿಯವರೆಗೆ ವೇಗವಾಗಿ ಹರಡುತ್ತಿರುವ ರೂಪಾಂತರವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಈ ರೂಪಾಂತರಿಯು ವಿಪರೀತ ಜ್ವರ, ನೆಗಡಿ, ತುರಿಕೆ, ಕಣ್ಣು ಕೆಂಪಗಾಗುವುದು, ಕಿರಿಕಿರಿಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ ಎಂದು ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ಕಮಿಟಿಯ ಡಾ. ವಿಪಿನ್ ಹೇಳಿದ್ದಾರೆ. ಈ ಹೊಸ ರೂಪಾಂತರವು ಇತರ ರೂಪಾಂತರಗಳಿಗಿಂತ 1.17 ರಿಂದ 1.27 ಪಟ್ಟು ವೇಗವಾಗಿ ಹರಡುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಮತ್ತೆ ಎಲ್ಲಾ ದೇಶಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗಬಹುದು ಎನ್ನುವ ಎಚ್ಚರಿಕೆಯನ್ನು ನೀಡಿದ್ದಾರೆ.

ಮತ್ತಷ್ಟು ಓದಿ: India Covid Updates: ಭಾರತದಲ್ಲಿ ಹೊಸದಾಗಿ 10,158 ಮಂದಿಗೆ ಕೊರೊನಾ ಸೋಂಕು, ಪ್ರಕರಣಗಳು ನಿನ್ನೆಗಿಂತ ಶೇ.30ರಷ್ಟು ಹೆಚ್ಚಳ

ಭಾರತದಲ್ಲಿ ಏಪ್ರಿಲ್ 12ಕ್ಕೆ ಹೋಲಿಸಿದರೆ ಒಂದೇ ದಿನದಲ್ಲಿ 3 ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ 10,150 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಸಕ್ರಿಯ ಸೋಂಕಿತರ ಸಂಖ್ಯೆ 44,998 ಇದೆ, ಬುಧವಾರ ದೇಶದಲ್ಲಿ 7,830 ಮಂದಿಗೆ ಕೊರೊನಾ ಸೋಂಕು ತಗುಲಿತ್ತು. ಮಂಗಳವಾರ 5,675 ಮಂದಿ ಸೋಂಕಿಗೆ ತುತ್ತಾಗಿದ್ದರು. ಇದೀಗ ಸೋಂಕು ಬಹುಬೇಗ ಎಲ್ಲ ಕಡೆ ಹರಡುತ್ತಿದೆ.

ದೈನಂದಿನ ಧನಾತ್ಮಕತೆಯ ದರ ಶೇ.4.42ರಷ್ಟಿದ್ದರೆ, ವಾರದ ಧನಾತ್ಮಕತೆಯ ದರ ಶೇ. 4.02ರಷ್ಟಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ ಶೇ.0.10ಯಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್​-19 ಚೇತರಿಕೆ ದರವು ಶೇ.98.71ರಷ್ಟಿದೆ, ಸಾವಿನ ಪ್ರಮಾಣ ಶೇ.1.19ರಷ್ಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,42,10,127ಕ್ಕೆ ಏರಿಕೆಯಾಗಿದೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು