AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹಿಗಳು ಹಸಿ ಪಾಲಕ್ ತಿನ್ನಬೇಕಾ? ಬೇಯಿಸಿ ಸೇವಿಸಬೇಕಾ?

ಮಧುಮೇಹ ಸಮಸ್ಯೆ ಇರುವವರು ಕೂಡ ಪಾಲಕ್ ಸೊಪ್ಪು ಸೇವಿಸಿದರೆ ಹಲವು ರೀತಿಯ ಪ್ರಯೋಜನಗಳಿವೆ. ಆದರೆ, ಪಾಲಕ್ ಸೊಪ್ಪನ್ನು ಮಧುಮೇಹಿಗಳು ಹಸಿಯಾಗಿ ಸೇವಿಸಬೇಕಾ? ಅಥವಾ ಬೇಯಿಸಿ ತಿನ್ನಬೇಕಾ? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಮಧುಮೇಹಿಗಳು ಹಸಿ ಪಾಲಕ್ ತಿನ್ನಬೇಕಾ? ಬೇಯಿಸಿ ಸೇವಿಸಬೇಕಾ?
ಬೇಯಿಸಿದ ಪಾಲಕ್
ಸುಷ್ಮಾ ಚಕ್ರೆ
|

Updated on:Feb 02, 2024 | 11:11 AM

Share

ಪಾಲಕ್ ಸೊಪ್ಪಿನಲ್ಲಿ ಹೇರಳವಾದ ಕಬ್ಬಿಣಾಂಶ ಇರುತ್ತದೆ. ಹೀಗಾಗಿ, ಈ ಸೊಪ್ಪು ಗರ್ಭಿಣಿಯರಿಗೆ, ಬಾಣಂತಿಯರಿಗೆ, ವಯಸ್ಸಾದವರಿಗೆ ಅತ್ಯುತ್ತಮವಾದುದು. ಮಧುಮೇಹ ಸಮಸ್ಯೆ ಇರುವವರು ಕೂಡ ಪಾಲಕ್ ಸೊಪ್ಪು ಸೇವಿಸಿದರೆ ಹಲವು ರೀತಿಯ ಪ್ರಯೋಜನಗಳಿವೆ. ಆದರೆ, ಪಾಲಕ್ ಸೊಪ್ಪನ್ನು ಮಧುಮೇಹಿಗಳು ಹಸಿಯಾಗಿ ಸೇವಿಸಬೇಕಾ? ಅಥವಾ ಬೇಯಿಸಿ ತಿನ್ನಬೇಕಾ? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಬೇಯಿಸಿದ ಪಾಲಕ್ ಮಧುಮೇಹಿಗಳಿಗೆ ಹೆಚ್ಚು ಆರೋಗ್ಯಕರವಾಗಿದೆ. ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಸಿ ಪಾಲಕ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಕೆಲವರಿಗೆ ಅಜೀರ್ಣ, ಹೊಟ್ಟೆ ನೋವು, ಗ್ಯಾಸ್, ಮಲಬದ್ಧತೆ, ಅತಿಸಾರ ಮುಂತಾದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಹೀಗಾಗಿ, ಪಾಲಕ್ ಸೊಪ್ಪನ್ನು ಬೇಯಿಸಿ ತಿನ್ನುವುದು ಉತ್ತಮ.

ಇದನ್ನೂ ಓದಿ: Pregnant Health: ಗರ್ಭಿಣಿಯರು ಈ 8 ಹಣ್ಣುಗಳನ್ನು ಯಾಕೆ ತಿನ್ನಬಾರದು?

ಬೇಯಿಸಿದ ಪಾಲಕ್ ವಿಟಮಿನ್, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಇದು ಮಧುಮೇಹಿಗಳಿಗೆ ಹೆಚ್ಚಿನ ಆರೋಗ್ಯವನ್ನು ನೀಡುತ್ತದೆ. ಕಡಿಮೆ ಕ್ಯಾಲೋರಿ ಆಹಾರವಾದ ಪಾಲಕ್​ನಲ್ಲಿ ಫೈಬರ್ ಅಂಶ ಅಧಿಕವಾಗಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.

ಬೇಯಿಸುವುದರಿಂದ ಪಾಲಕ್​ನಲ್ಲಿರುವ ಸಂಯುಕ್ತಗಳು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ. ರಕ್ತದಲ್ಲಿನ ಗ್ಲೂಕೋಸ್ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಪಾಲಕ್‌ನಲ್ಲಿರುವ ಪೊಟ್ಯಾಸಿಯಮ್ ರಕ್ತದ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪಾಲಕ್‌ನ ಉತ್ಕರ್ಷಣ ನಿರೋಧಕಗಳು ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಎದುರಿಸುತ್ತವೆ. ಇದು ಮಧುಮೇಹಿಗಳಿಗೆ ಉಂಟಾಗುವ ತಲೆನೋವಿಗೆ ಪರಿಹಾರವನ್ನು ನೀಡುತ್ತದೆ.

ಇದನ್ನೂ ಓದಿ: ಪಾಲಕ್‌ ಸೊಪ್ಪಿನಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಪಾಲಕ್ ಸೊಪ್ಪನ್ನು ಬೇಯಿಸುವುದರಿಂದ ಇದರ ಜೀವಸತ್ವಗಳು ರಕ್ತದಲ್ಲಿನ ಸಕ್ಕರೆ ಮಟ್ಟಕ್ಕೆ ಕೊಡುಗೆ ನೀಡುತ್ತವೆ. ಪಾಲಕ್ ಸೊಪ್ಪಿನಲ್ಲಿರುವ ಲುಟೀನ್ ಮತ್ತು ಝೀಕ್ಸಾಂಥಿನ್ ಡಯಾಬಿಟಿಕ್ ರೆಟಿನೋಪತಿಯಿಂದ ರಕ್ಷಿಸುತ್ತದೆ. ಪಾಲಕದಲ್ಲಿರುವ ವಿಟಮಿನ್ ಕೆ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಸದೃಢವಾಗಿರಿಸುತ್ತದೆ. ಇದು ಆಸ್ಟಿಯೊಪೊರೋಸಿಸ್‌ಗೆ ಗುರಿಯಾಗುವ ಮಧುಮೇಹಿಗಳಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ.

ಬೇಯಿಸಿದ ಪಾಲಕ್ ನಾರಿನಂಶವನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಊಟದ ನಂತರ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರಿಕೆಯಾಗುವುದನ್ನು ತಡೆಯುತ್ತದೆ. ಪಾಲಕ್ ಸೊಪ್ಪನ್ನು ಬೇಯಿಸುವುದರಿಂದ ಇದು ಆಕ್ಸಲೇಟ್ ಮಟ್ಟವನ್ನು ಶೇ. 30ರಿಂದ ಶೇ. 87ರಷ್ಟು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಹಾಗಂತ ಪಾಲಕ್ ಅನ್ನು ಅತಿಯಾಗಿ ಬೇಯಿಸಬಾರದು. ಏಕೆಂದರೆ ಇದರಿಂದ ಪಾಲಕ್ ಪೌಷ್ಠಿಕಾಂಶದ ಅಂಶವನ್ನು ಕಳೆದುಕೊಳ್ಳುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:42 pm, Sat, 27 January 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!