Singer Alka Yagnik: ಅಲ್ಕಾ ಯಾಗ್ನಿಕ್​ಗೆ ಕಿವಿ ಕೇಳದಿರಲು ಈ ಸೋಂಕು ಕಾರಣ, ಇದು ಬರದಂತೆ ಈ ರೀತಿ ಎಚ್ಚರಿಕೆ ವಹಿಸಿ

ಪ್ರಸಿದ್ಧ ಬಾಲಿವುಡ್ ಗಾಯಕಿ ಅಲ್ಕಾ ಯಾಗ್ನಿಕ್​ ಅವರಿಗೆ ಈಗ ಕಿವಿ ಕೇಳಿಸುತ್ತಿಲ್ಲ (Sensory Hearing loss). ಈ ವಿಚಾರವನ್ನು ಅವರೇ ಹಂಚಿಕೊಂಡಿದ್ದು, "ಶ್ರವಣ ನಷ್ಟದಿಂದ ಬಳಲುತ್ತಿದ್ದೇನೆ" ಎಂದು ಇನ್​ಸ್ಟಾಗ್ರಾಮ್​ನ ಪೋಸ್ಟ್​ ನಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದರೆ ಈ ಸಮಸ್ಯೆಗೆ ಕಾರಣವೇನು? ರೋಗ ಲಕ್ಷಣಗಳೇನು? ತಡೆಯುವುದು ಹೇಗೆ? ಈ ಬಗ್ಗೆ ಡಾ.ಸುಧೀರ್ ಕುಮಾರ್ ಅವರು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.

Singer Alka Yagnik: ಅಲ್ಕಾ ಯಾಗ್ನಿಕ್​ಗೆ ಕಿವಿ ಕೇಳದಿರಲು ಈ ಸೋಂಕು ಕಾರಣ, ಇದು ಬರದಂತೆ ಈ ರೀತಿ ಎಚ್ಚರಿಕೆ ವಹಿಸಿ
ಗಾಯಕಿ ಅಲ್ಕಾ ಯಾಗ್ನಿಕ್
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 19, 2024 | 10:02 AM

ಪ್ರಸಿದ್ಧ ಬಾಲಿವುಡ್ ಗಾಯಕಿ ಗಾಯಕಿಯರಲ್ಲಿ ಒಬ್ಬರಾದ ಅಲ್ಕಾ ಯಾಗ್ನಿಕ್​ (Singer Alka Yagnik) ತಮ್ಮ ಮಧುರ ಗೀತೆಗಳಿಂದ ಜನರನ್ನು ರಂಜಿಸಿದ್ದಾರೆ. 80 ಮತ್ತು 90 ರ ದಶಕದಲ್ಲಿ ಜೊತೆಗೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಹಲವಾರು ಜನಪ್ರೀಯ ಗೀತೆಗಳನ್ನು ನೀಡಿದ ಕೊಡುಗೆ ಅವರಿಗೆ ಸಲ್ಲುತ್ತದೆ. ಆದರೆ​ ಅವರಿಗೆ ಈಗ ಕಿವಿ ಕೇಳಿಸುತ್ತಿಲ್ಲ (Sensory Hearing loss). ಈ ವಿಚಾರವನ್ನು ಅವರೇ ಹಂಚಿಕೊಂಡಿದ್ದು, “ಶ್ರವಣ ನಷ್ಟದಿಂದ ಬಳಲುತ್ತಿದ್ದೇನೆ” ಎಂದು ಇನ್​ಸ್ಟಾಗ್ರಾಮ್​ನ ಪೋಸ್ಟ್​ ನಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದರೆ ಈ ಸಮಸ್ಯೆಗೆ ಕಾರಣವೇನು? ರೋಗ ಲಕ್ಷಣಗಳೇನು? ತಡೆಯುವುದು ಹೇಗೆ? ಈ ಬಗ್ಗೆ ಡಾ.ಸುಧೀರ್ ಕುಮಾರ್ ಅವರು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.

1. ಶ್ರವಣದೋಷಕ್ಕೆ ಕಾರಣವೇನು?

ಸಾಮಾನ್ಯವಾಗಿ ಇದು ವೈರಲ್ ಸೋಂಕಿನಿಂದ ಉಂಟಾಗುತ್ತದೆ. ಶ್ರವಣ ನಷ್ಟಕ್ಕೆ ಹಲವಾರು ವೈರಸ್ ಗಳು ಕಾರಣವಾಗಿರಬಹುದು. ಶ್ರವಣ ನಷ್ಟವು, ವೈರಸ್ಗಳಿಂದ ಶ್ರವಣ (ಕೋಕ್ಲಿಯರ್) ನರಗಳ ನೇರ ಆಕ್ರಮಣ ಮಾಡಿದಾಗ ಮತ್ತು ಸೋಂಕಿನಿಂದ ಉಂಟಾಗುವ ಉರಿಯೂತದಿಂದ ಉಂಟಾಗುತ್ತದೆ ಎಂದು ಭಾವಿಸಲಾಗಿದೆ. ಇಲ್ಲಿ ವ್ಯಕ್ತಿಯ ಪ್ರತಿರಕ್ಷಣಾ ವ್ಯವಸ್ಥೆಯು ಕೂಡ ಮುಖ್ಯ ಪಾತ್ರ ವಹಿಸುತ್ತದೆ.

2. ರೋಗಲಕ್ಷಣಗಳು ಯಾವುವು?

ಸಾಮಾನ್ಯ ಲಕ್ಷಣವೆಂದರೆ ಶ್ರವಣ ನಷ್ಟ, ಕೆಲವರಿಗೆ ಎರಡೂ ಕಿವಿಗಳು ಕೇಳಿಸದಿರಬಹುದು ಆದರೆ ಇದು ತುಂಬಾ ಅಪರೂಪವಾಗಿ ಕಂಡು ಬರುತ್ತದೆ. ಇತರ ರೋಗಲಕ್ಷಣಗಳಲ್ಲಿ ಕಿವಿಯಲ್ಲಿ ಒಂದು ರೀತಿಯ ಶಬ್ದ ಕೇಳಿಸುವುದು(ಟಿನ್ನಿಟಸ್), ತಲೆತಿರುಗುವಿಕೆ ಸೇರಿವೆ.

3. ಈ ಸ್ಥಿತಿಯನ್ನು ಹೇಗೆ ಪತ್ತೆಹಚ್ಚಲಾಗುತ್ತದೆ?

ಇದು ಕ್ಲಿನಿಕಲ್ ರೋಗನಿರ್ಣಯವಾಗಿದ್ದು ರೋಗಲಕ್ಷಣಗಳ ಆಧಾರದ ಮೇಲೆ ಹೇಳಲಾಗುತ್ತದೆ. ಇದಕ್ಕೆ ಇಎನ್ ಟಿ ಶಸ್ತ್ರಚಿಕಿತ್ಸಕರಿಂದ ಕ್ಲಿನಿಕಲ್ ಪರೀಕ್ಷೆಯ ಅಗತ್ಯವಿದೆ.

4. ನರವೈಜ್ಞಾನಿಕ ಮೌಲ್ಯಮಾಪನದ ಅಗತ್ಯವಿದೆಯೇ?

ಅಪರೂಪವಾಗಿ, ಏಕೆಂದರೆ ಹಠಾತ್ ಶ್ರವಣ ನಷ್ಟವು ಪೊಂಟೈನ್ ಪಾರ್ಶ್ವವಾಯುವಿನಿಂದ ಉಂಟಾಗಬಹುದು (ಮೆದುಳಿನ ಒಂದು ಭಾಗವಾದ ಪೊನ್ಸ್ ಗೆ ರಕ್ತದ ಹರಿವಿನ ಕೊರತೆ). ನರವೈಜ್ಞಾನಿಕ ಪರೀಕ್ಷೆ, ನಂತರ ಎಂಆರ್ ಐ ಈ ಸ್ಥಿತಿಯನ್ನು ತಳ್ಳಿಹಾಕಬಹುದು.

5. ವೈರಲ್ ಸೋಂಕಿನಿಂದ ಉಂಟಾಗುವ ಶ್ರವಣ ನಷ್ಟಕ್ಕೆ ಹೇಗೆ ಚಿಕಿತ್ಸೆ ನೀಡಲಾಗುತ್ತದೆ?

ಈ ಚಿಕಿತ್ಸೆಯು ಸ್ಟಿರಾಯ್ಡ್‌ಗಳನ್ನು ಒಳಗೊಂಡಿರುತ್ತದೆ. ಮೂರು ದಿನಗಳವರೆಗೆ ದಿನಕ್ಕೆ ಒಮ್ಮೆ, ಡ್ರಿಪ್ ಮೂಲಕ ಇದನ್ನು ನೀಡಲಾಗುತ್ತದೆ, ನಂತರ ಮಾತ್ರೆಗಳು ಮತ್ತು ಟಿಂಪಾನಿಕ್ ಮೆಂಬ್ರೇನ್ (ಕಿವಿ ಡ್ರಮ್) ನಲ್ಲಿ ಸ್ಟೀರಾಯ್ಡ್ ಚುಚ್ಚುಮದ್ದನ್ನು ನೀಡಲಾಗುತ್ತದೆ. ಇದನ್ನು ರೋಗಿಯ ಪ್ರತಿಕ್ರಿಯೆಗೆ ಅನುಗುಣವಾಗಿ ನೀಡಲಾಗುತ್ತದೆ.

ಇದನ್ನೂ ಓದಿ: ‘ಇದ್ದಕ್ಕಿದ್ದಂತೆ ಕಿವಿ ಕೇಳಿಸುತ್ತಿಲ್ಲ’; ಗಾಯಕಿ ಅಲ್ಕಾ ಯಾಗ್ನಿಕ್​ಗೆ ಗಂಭೀರ ಆರೋಗ್ಯ ಸಮಸ್ಯೆ

6. ಪರಿಣಾಮವೇನು?

ಅನೇಕ ರೋಗಿಗಳು ಮೊದಲ ಕೆಲವು ದಿನಗಳಲ್ಲಿ ತಾವಾಗಿಯೇ ಚೇತರಿಸಿಕೊಳ್ಳುತ್ತಾರೆ. ಆರಂಭಿಕ ಚಿಕಿತ್ಸೆಯಲ್ಲಿಯೇ ಸ್ಟಿರಾಯ್ಡ್‌ಗಳನ್ನು ತೆಗೆದುಕೊಳ್ಳುವ ರೋಗಿಗಳು ಸಹ ಚೇತರಿಸಿಕೊಳ್ಳುತ್ತಾರೆ. ಆದರೆ ಕೆಲವು ರೋಗಿಗಳು ಮಾತ್ರ ಶಾಶ್ವತ ಅಥವಾ ದೀರ್ಘಕಾಲದ ಶ್ರವಣ ನಷ್ಟಕ್ಕೆ ಒಳಗಾಗುತ್ತಾರೆ.

7. ಶಾಶ್ವತ ಶ್ರವಣದೋಷ ಉಂಟಾದರೆ ಏನು ಮಾಡಬಹುದು?

ಅಂತಹ ರೋಗಿಗಳಿಗೆ ಶ್ರವಣ ಸಾಧನವನ್ನು ನೀಡಬಹುದು.

8. ಈ ಸ್ಥಿತಿಯನ್ನು ತಡೆಗಟ್ಟಲು ಯಾವ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು?

ವೈರಲ್ ಸೋಂಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ. ಅಂದರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬೇಡಿ. ವರ್ಷವೂ ಫ್ಲೂ ಲಸಿಕೆಯನ್ನು ತೆಗೆದುಕೊಳ್ಳಿ (ನಿಮ್ಮ ವೈದ್ಯರ ಮಾರ್ಗದರ್ಶನದಲ್ಲಿ), ದೊಡ್ಡ ಶಬ್ದವನ್ನು ಹೆಚ್ಚು ಹೆಚ್ಚು ಕೇಳಿಸಿಕೊಳ್ಳಬೇಡಿ ಅದನ್ನು ತಪ್ಪಿಸಿ, ದೀರ್ಘಕಾಲದವರೆಗೆ ಹೆಡ್ ಫೋನ್ /ಇಯರ್ ಫೋನ್ ಗಳನ್ನು ಬಳಕೆ ಮಾಡುವುದನ್ನು ತಪ್ಪಿಸಿ, ವಿಶೇಷವಾಗಿ ಜೋರಾಗಿ ಹಾಡು ಕೇಳುವುದನ್ನು ಬಿಟ್ಟುಬಿಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು