AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಸೇವಿಸಲು ಸರಿಯಾದ ಸಮಯ ಯಾವುದು? ಇಲ್ಲಿದೆ ಮಾಹಿತಿ

ಜ್ಞರ ಪ್ರಕಾರ ಪುರುಷರು ದಿನಕ್ಕೆ 3.5 ಲೀ ನೀರನ್ನು ಸೇವಿಸಬೇಕು ಹಾಗೂ ಮಹಿಳೆಯರು2.5 ಲೀ ನೀರನ್ನು ಸೇವಿಸಬೇಕು ಎನ್ನುತ್ತಾರೆ. ಮಾನವನ ದೇಹ ಸರಿಯಾಗಿ ಕೆಲಸ ಮಾಡಬೇಕು.

ನೀರು ಸೇವಿಸಲು ಸರಿಯಾದ ಸಮಯ ಯಾವುದು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 9:00 AM

Share

ಮಾನವನ ದೇಹದ ಶೇ.75ರಷ್ಟು ಭಾಗ ನೀರಿನಿಂದಲೇ ಕೂಡಿದೆ. ಹೀಗಾಗಿ ನೀರು ಮಾನವನ ದೇಹಕ್ಕೆ ಅತೀ ಅವಶ್ಯಕವಾದ ಅಂಶವಾಗಿದೆ. ಮೆದುಳು, ಚರ್ಮ ಮತ್ತು ಹೃದಯದ ಆರೋಗ್ಯವನ್ನು ನಿಯಂತ್ರಿಸುವುದರಿಂದ ಹಿಡಿದು, ದೇಹದ ಎಲ್ಲಾ ಅಂಗಗಳ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನೀರು ಪ್ರಮುಖ ಪಾತ್ರವಹಿಸುತ್ತದೆ. ತಜ್ಞರ ಪ್ರಕಾರ ಪುರುಷರು ದಿನಕ್ಕೆ 3.5 ಲೀ ನೀರನ್ನು ಸೇವಿಸಬೇಕು ಹಾಗೂ ಮಹಿಳೆಯರು2.5 ಲೀ ನೀರನ್ನು ಸೇವಿಸಬೇಕು ಎನ್ನುತ್ತಾರೆ. ಮಾನವನ ದೇಹ ಸರಿಯಾಗಿ ಕೆಲಸ ಮಾಡಬೇಕು. ಆರೋಗ್ಯಯುತವಾಗಿರಬೇಕು ಎಂದರೆ ಸೇವಿಸುವ ಆಹಾರ, ನಿದ್ದೆ ಎಲ್ಲವೂ ಮುಖ್ಯವಾಗಿರುತ್ತದೆ. ಅದರ ಜತೆಗೆ ನೀರು ಸಹ ಅಷ್ಟೇ ಮುಖ್ಯವಾಗಿರುತ್ತದೆ.

ಪ್ರತಿದಿನ ನೀರಿನ ಸೇವನೆಗೂ ಒಂದು ಸಮಯವಿದೆ. ಹಾಗಾದರೆ ನೀರು ಸೇವನೆಗೆ ಸೂಕ್ತ ಸಮಯ ಯಾವುದು? ಇಲ್ಲಿದೆ ನೋಡಿ ಮಾಹಿತಿ

ಬೆಳಗ್ಗೆ ನಿರಂತರ 7-9ರಿಂದ ಗಂಟೆಗಳ ನಿದ್ದೆಯ ಬಳಿಕ ಬೆಳಗ್ಗೆ ನೀರಿನ ಸೇವನೆಯಿಂದ ದೇಹ ಶುದ್ಧಗೊಳ್ಳುತ್ತದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ನೀರಿನ ಸೇವನೆ ಉತ್ತಮ ಅಭ್ಯಾಸವಾಗಿದೆ. ಅಲ್ಲದೆ ದೇಹದ ಚಯಾಪಚಯ ಕ್ರಿಯೆಯನ್ನು ನೀರು ಸುಲಲಿತವಾಗಿ ನಡೆಯುವಂತೆ ಮಾಡುತ್ತದೆ.

ವ್ಯಾಯಾಮದ ಬಳಿಕ ವ್ಯಾಯಾಮ ಅಥವಾ ಜಿಮ್​ ವರ್ಕೌಟ್​ ಬಳಿಕ ದೇಹದಲ್ಲಿನ ನೀರು ಬೆವರಿನ ರೂಪದಲ್ಲಿ ಸಂಪೂರ್ಣವಾಗಿ ಕಳೆದುಹೋಗಿರುತ್ತದೆ. ಆದ್ದರಿಂದ ನಿಮ್ಮ ವರ್ಕೌಟ್​ ಬಳಿಕ ದೇಹಕ್ಕೆ ಬೇಕಾದಷ್ಟು ನೀರು ನೀಡಿ. ನೆನಪಿಡಿ. ನಿರ್ಜಲೀಕರಣಗೊಂಡ ದೇಹವನ್ನು ನಿರ್ಲಕ್ಷಿಸಬೇಡಿ. ಇದು ನಿಮ್ಮ ಹೃದಯಕ್ಕೆ ಹಾನಿಯುಂಟು ಮಾಡಬಹುದು. ಹೀಗಾಗಿ ವರ್ಕೌಟ್​ ಬಳಿಕ ನೀರು ಸೇವಿಸಿ.

ಊಟದ ಮೊದಲು ಊಟಕ್ಕೆ ಮೊದಲು ನೀರಿನ ಸೇವನೆ ನಿಮ್ಮ ಅತಿಯಾದ ತೂಕ ಇಳಿಕಗೆ ಸಹಾಯಕವಾಗಿದೆ. ಇದನ್ನು ಪ್ರಿಲೋಡಿಂಗ್​ ಎಂದು ಕರೆಯುತ್ತಾರೆ. ಹಸಿವನ್ನು ನೀಗಿಸಿ ಅತಿಯಾಗಿ ತಿನ್ನುವ ಅಭ್ಯಾಸಕ್ಕೆ ನೀರು ಕಡಿವಾಣ ಹಾಕಲಿದೆ. ಹೀಗಾಗಿ ಊಟಕ್ಕೂ ಮೊದಲು ನೀರಿನ ಸೇವನೆ ಉತ್ತಮ.

ರಾತ್ರಿ ಮಲಗುವ ಮೊದಲು ಸ್ವಲ್ಪವಾದರೂ ನೀರನ್ನು ಕುಡಿಯಿರಿ. ಅದು ನಿಮ್ಮನ್ನು ಆರಾಮದ ನಿದ್ದೆಗೆ ಎಳೆದೊಯ್ಯಲಿದೆ. ದೇಹ ನಿರ್ಜಲೀಕರಣಗೊಂಡಷ್ಟು ನಿದ್ದೆಗೆ ಕಿರಿಕಿರಿಯಾಗಬಹುದು. ಅಲ್ಲದೆ ದೇಹದ ಉಷ್ಣತೆ ಜಾಸ್ತಿಯಾಗಿ ತಲೆನೋವಿನಂತಹ ಸಮಸ್ಯೆಗಳು ಉಲ್ಬಣಿಸಬಹುದು.

ಇತರ ಸಮಯಗಳು ಈ ಮೇಲೆ ತಿಳಿಸಿದ ಸಮಯಗಳಲ್ಲಿ ಅವಶ್ಯವಾಗಿ ನೀರು ಸೇವಿಸಿ. ಅದನ್ನು ಹೊರತುಪಡಿಸಿ ಉಳಿದ ಸಮಯಗಳಲ್ಲೂ ನೀರು ದೇಹಕ್ಕೆ ಅವಶ್ಯಕವಾಗಿರುತ್ತದೆ. ಹೀಗಾಗಿ ನಿಮ್ಮ ಪ್ರಯಾಣದ ವೇಳೆಯಲ್ಲಿ ನೀರಿನ ಬಾಟಲಿಯನ್ನು ಜೊತೆಗಿರಿಸಿಕೊಳ್ಳುವುದು ಉತ್ತಮ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್