AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಸೇವಿಸಲು ಸರಿಯಾದ ಸಮಯ ಯಾವುದು? ಇಲ್ಲಿದೆ ಮಾಹಿತಿ

ಜ್ಞರ ಪ್ರಕಾರ ಪುರುಷರು ದಿನಕ್ಕೆ 3.5 ಲೀ ನೀರನ್ನು ಸೇವಿಸಬೇಕು ಹಾಗೂ ಮಹಿಳೆಯರು2.5 ಲೀ ನೀರನ್ನು ಸೇವಿಸಬೇಕು ಎನ್ನುತ್ತಾರೆ. ಮಾನವನ ದೇಹ ಸರಿಯಾಗಿ ಕೆಲಸ ಮಾಡಬೇಕು.

ನೀರು ಸೇವಿಸಲು ಸರಿಯಾದ ಸಮಯ ಯಾವುದು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 9:00 AM

Share

ಮಾನವನ ದೇಹದ ಶೇ.75ರಷ್ಟು ಭಾಗ ನೀರಿನಿಂದಲೇ ಕೂಡಿದೆ. ಹೀಗಾಗಿ ನೀರು ಮಾನವನ ದೇಹಕ್ಕೆ ಅತೀ ಅವಶ್ಯಕವಾದ ಅಂಶವಾಗಿದೆ. ಮೆದುಳು, ಚರ್ಮ ಮತ್ತು ಹೃದಯದ ಆರೋಗ್ಯವನ್ನು ನಿಯಂತ್ರಿಸುವುದರಿಂದ ಹಿಡಿದು, ದೇಹದ ಎಲ್ಲಾ ಅಂಗಗಳ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನೀರು ಪ್ರಮುಖ ಪಾತ್ರವಹಿಸುತ್ತದೆ. ತಜ್ಞರ ಪ್ರಕಾರ ಪುರುಷರು ದಿನಕ್ಕೆ 3.5 ಲೀ ನೀರನ್ನು ಸೇವಿಸಬೇಕು ಹಾಗೂ ಮಹಿಳೆಯರು2.5 ಲೀ ನೀರನ್ನು ಸೇವಿಸಬೇಕು ಎನ್ನುತ್ತಾರೆ. ಮಾನವನ ದೇಹ ಸರಿಯಾಗಿ ಕೆಲಸ ಮಾಡಬೇಕು. ಆರೋಗ್ಯಯುತವಾಗಿರಬೇಕು ಎಂದರೆ ಸೇವಿಸುವ ಆಹಾರ, ನಿದ್ದೆ ಎಲ್ಲವೂ ಮುಖ್ಯವಾಗಿರುತ್ತದೆ. ಅದರ ಜತೆಗೆ ನೀರು ಸಹ ಅಷ್ಟೇ ಮುಖ್ಯವಾಗಿರುತ್ತದೆ.

ಪ್ರತಿದಿನ ನೀರಿನ ಸೇವನೆಗೂ ಒಂದು ಸಮಯವಿದೆ. ಹಾಗಾದರೆ ನೀರು ಸೇವನೆಗೆ ಸೂಕ್ತ ಸಮಯ ಯಾವುದು? ಇಲ್ಲಿದೆ ನೋಡಿ ಮಾಹಿತಿ

ಬೆಳಗ್ಗೆ ನಿರಂತರ 7-9ರಿಂದ ಗಂಟೆಗಳ ನಿದ್ದೆಯ ಬಳಿಕ ಬೆಳಗ್ಗೆ ನೀರಿನ ಸೇವನೆಯಿಂದ ದೇಹ ಶುದ್ಧಗೊಳ್ಳುತ್ತದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ನೀರಿನ ಸೇವನೆ ಉತ್ತಮ ಅಭ್ಯಾಸವಾಗಿದೆ. ಅಲ್ಲದೆ ದೇಹದ ಚಯಾಪಚಯ ಕ್ರಿಯೆಯನ್ನು ನೀರು ಸುಲಲಿತವಾಗಿ ನಡೆಯುವಂತೆ ಮಾಡುತ್ತದೆ.

ವ್ಯಾಯಾಮದ ಬಳಿಕ ವ್ಯಾಯಾಮ ಅಥವಾ ಜಿಮ್​ ವರ್ಕೌಟ್​ ಬಳಿಕ ದೇಹದಲ್ಲಿನ ನೀರು ಬೆವರಿನ ರೂಪದಲ್ಲಿ ಸಂಪೂರ್ಣವಾಗಿ ಕಳೆದುಹೋಗಿರುತ್ತದೆ. ಆದ್ದರಿಂದ ನಿಮ್ಮ ವರ್ಕೌಟ್​ ಬಳಿಕ ದೇಹಕ್ಕೆ ಬೇಕಾದಷ್ಟು ನೀರು ನೀಡಿ. ನೆನಪಿಡಿ. ನಿರ್ಜಲೀಕರಣಗೊಂಡ ದೇಹವನ್ನು ನಿರ್ಲಕ್ಷಿಸಬೇಡಿ. ಇದು ನಿಮ್ಮ ಹೃದಯಕ್ಕೆ ಹಾನಿಯುಂಟು ಮಾಡಬಹುದು. ಹೀಗಾಗಿ ವರ್ಕೌಟ್​ ಬಳಿಕ ನೀರು ಸೇವಿಸಿ.

ಊಟದ ಮೊದಲು ಊಟಕ್ಕೆ ಮೊದಲು ನೀರಿನ ಸೇವನೆ ನಿಮ್ಮ ಅತಿಯಾದ ತೂಕ ಇಳಿಕಗೆ ಸಹಾಯಕವಾಗಿದೆ. ಇದನ್ನು ಪ್ರಿಲೋಡಿಂಗ್​ ಎಂದು ಕರೆಯುತ್ತಾರೆ. ಹಸಿವನ್ನು ನೀಗಿಸಿ ಅತಿಯಾಗಿ ತಿನ್ನುವ ಅಭ್ಯಾಸಕ್ಕೆ ನೀರು ಕಡಿವಾಣ ಹಾಕಲಿದೆ. ಹೀಗಾಗಿ ಊಟಕ್ಕೂ ಮೊದಲು ನೀರಿನ ಸೇವನೆ ಉತ್ತಮ.

ರಾತ್ರಿ ಮಲಗುವ ಮೊದಲು ಸ್ವಲ್ಪವಾದರೂ ನೀರನ್ನು ಕುಡಿಯಿರಿ. ಅದು ನಿಮ್ಮನ್ನು ಆರಾಮದ ನಿದ್ದೆಗೆ ಎಳೆದೊಯ್ಯಲಿದೆ. ದೇಹ ನಿರ್ಜಲೀಕರಣಗೊಂಡಷ್ಟು ನಿದ್ದೆಗೆ ಕಿರಿಕಿರಿಯಾಗಬಹುದು. ಅಲ್ಲದೆ ದೇಹದ ಉಷ್ಣತೆ ಜಾಸ್ತಿಯಾಗಿ ತಲೆನೋವಿನಂತಹ ಸಮಸ್ಯೆಗಳು ಉಲ್ಬಣಿಸಬಹುದು.

ಇತರ ಸಮಯಗಳು ಈ ಮೇಲೆ ತಿಳಿಸಿದ ಸಮಯಗಳಲ್ಲಿ ಅವಶ್ಯವಾಗಿ ನೀರು ಸೇವಿಸಿ. ಅದನ್ನು ಹೊರತುಪಡಿಸಿ ಉಳಿದ ಸಮಯಗಳಲ್ಲೂ ನೀರು ದೇಹಕ್ಕೆ ಅವಶ್ಯಕವಾಗಿರುತ್ತದೆ. ಹೀಗಾಗಿ ನಿಮ್ಮ ಪ್ರಯಾಣದ ವೇಳೆಯಲ್ಲಿ ನೀರಿನ ಬಾಟಲಿಯನ್ನು ಜೊತೆಗಿರಿಸಿಕೊಳ್ಳುವುದು ಉತ್ತಮ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ