AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zika virus: ಏನಿದು ಝಿಕಾ ವೈರಸ್? ಭಾರತದಲ್ಲಿ ಇದರ ತೀವ್ರತೆ ಎಷ್ಟಿದೆ?

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬವ್‌ಧಾನ್ ಪ್ರದೇಶದಲ್ಲಿ 67 ವರ್ಷದ ವ್ಯಕ್ತಿಯೊಬ್ಬರಿಗೆ ಝಿಕಾ ವೈರಸ್ ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆ ಶುಕ್ರವಾರ ತಿಳಿಸಿದೆ. ಸೋಂಕಿತ ವ್ಯಕ್ತಿ ನಾಸಿಕ್ ನಿವಾಸಿಯಾಗಿದ್ದು, ನವೆಂಬರ್ 6 ರಂದು ಪುಣೆಗೆ ಬಂದಿದ್ದರು ಎಂದು ಸುದ್ದಿ ಮೂಲಗಳು ತಿಳಿಸಿವೆ.

Zika virus: ಏನಿದು ಝಿಕಾ ವೈರಸ್? ಭಾರತದಲ್ಲಿ ಇದರ ತೀವ್ರತೆ ಎಷ್ಟಿದೆ?
ಝಿಕಾ ವೈರಸ್Image Credit source: Google
TV9 Web
| Edited By: |

Updated on:Dec 03, 2022 | 11:09 AM

Share

ಈಗಾಗಲೇ ಕೊರೊನಾ ವೈರಸ್ (Coronavirus)ವಿಶ್ವದ್ಯಾಂತ ಜನರನ್ನು ಕಂಗೆಡಿಸುವಂತೆ ಮಾಡಿದೆ. ಆದ್ದರಿಂದ ಯಾವುದೇ ರೋಗ ಲಕ್ಷಣಗಳು ಕಂಡುಬಂದರೂ ಕೂಡ ನಿರ್ಲಕ್ಷ್ಯಿಸದಿರಿ. ಆರೋಗ್ಯದ ಮೇಲೆ ಕಾಳಜಿವಹಿಸುವುದು ಅತ್ಯಂತ ಅಗತ್ಯವಾಗಿದೆ. ಈಗಾಗಲೇ ಝಿಕಾ ವೈರಸ್ ರೋಗ ಲಕ್ಷಣಗಳು ಭಾರತದಲ್ಲಿ ಕಂಡು ಬಂದಿದ್ದು, ಕೆಲವರಲ್ಲಿ ಈ ರೋಗ ಇರುವುದು ದೃಢಪಟ್ಟಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬವ್‌ಧಾನ್ ಪ್ರದೇಶದಲ್ಲಿ 67 ವರ್ಷದ ವ್ಯಕ್ತಿಯೊಬ್ಬರಿಗೆ ಝಿಕಾ ವೈರಸ್ (Zika virus) ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆ ಶುಕ್ರವಾರ ತಿಳಿಸಿದೆ. ಸೋಂಕಿತ ವ್ಯಕ್ತಿ ನಾಸಿಕ್ ನಿವಾಸಿಯಾಗಿದ್ದು, ನವೆಂಬರ್ 6 ರಂದು ಪುಣೆಗೆ ಬಂದಿದ್ದರು ಎಂದು ಸುದ್ದಿ ಮೂಲಗಳು ತಿಳಿಸಿವೆ.

ಇದು ಮಹಾರಾಷ್ಟ್ರದಲ್ಲಿ ಝಿಕಾ ವೈರಸ್‌ನ ಮೂರನೇ ಪ್ರಕರಣವಾಗಿದೆ. ಇದಕ್ಕೂ ಮೊದಲು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕಿಗೆ ಸೊಳ್ಳೆ ಕಡಿತದಿಂದ ಈ ವೈರಸ್ ಸೋಂಕು ತಗುಲಿತ್ತು ಹಾಗೂ ಅದಕ್ಕಿಂತಲೂ ಮೊದಲು, ಕಳೆದ ವರ್ಷ ಜುಲೈನಲ್ಲಿ ಪುಣೆಯಲ್ಲಿ ಮೊದಲ ಬಾರಿಗೆ ಈ ರೋಗ ಲಕ್ಷಣ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿತ್ತು. 2007ರಲ್ಲಿ ಮೊದಲ ಬಾರಿಗೆ ಮೈಕ್ರೋನೇಷಿಯಾದಲ್ಲಿ ಸಾಂಕ್ರಾಮಿಕ ರೋಗವನ್ನು ಉಂಟು ಮಾಡಿತು ಎಂದು ತಿಳಿದು ಬಂದಿದೆ. ಇದು ಈಡಿಸ್ ಸೊಳ್ಳೆಯಿಂದ ಹರಡುವ ರೋಗವಾಗಿದೆ.

ಝಿಕಾ ವೈರಸ್ ಸಾಮಾನ್ಯ ಲಕ್ಷಣಗಳು:

ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿ ಜ್ವರ, ತಲೆನೋವು, ಕೀಲು ನೋವು, ಕಣ್ಣು ಕೆಂಪಾಗುವುದು ಮತ್ತು ಸ್ನಾಯು ನೋವುಗಳು ಕಂಡುಬರುತ್ತದೆ. ಇದು ಸೊಳ್ಳೆ ಕಡಿತದಿಂದ ಉಂಟಾಗುವ ರೋಗವಾಗಿದೆ. ಗರ್ಭಿಣಿಯರು ಹೆಚ್ಚಾಗಿ ಜಾಗೃತಿ ವಹಿಸುವುದು ಅತ್ಯಂತ ಅಗತ್ಯವಾಗಿದೆ. ಇದು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ.

ಇದನ್ನು ಓದಿ: ಈ ವಿಷಕಾರಿ ಕೀಟಗಳು ನಿಮ್ಮ ಮನೆಯಲ್ಲಿ ಕಾಣಿಸಿಕೊಂಡರೆ ಎಚ್ಚರ

ಝಿಕಾ ವೈರಸ್ ನಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ?

ಸೊಳ್ಳೆ ಕಡಿತದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳುವುದು ಈ ರೋಗದಿಂದ ತಡೆಗಟ್ಟಲು ಉತ್ತಮ ಮಾರ್ಗವಾಗಿದೆ. ಪ್ರಮುಖವಾಗಿ ಗರ್ಭಿಣಿಯರು, ಬಾಣಂತಿಯರು ಸೊಳ್ಳೆಗಳ ಹೆಚ್ಚಿನ ಗಮನಹರಿಸುವುದು ಅತ್ಯಂತ ಅಗತ್ಯವಾಗಿದೆ. ಇದಕ್ಕಾಗಿ EPA-ನೋಂದಾಯಿತ ಕೀಟ ನಿವಾರಕಗಳು ಬಳಸಿವುದು ಸೂಕ್ತ ಎಂದು ಸಂಶೋಧನೆ ತಿಳಿಸಿದೆ. ಆದ್ದರಿಂದ ನಿಮ್ಮ ಮನೆಯ ಸುತ್ತಮುತ್ತ ಸ್ವಚ್ಚಗೊಳಿಸುವುದು ಅಗತ್ಯವಾಗಿದೆ. ಆದಷ್ಟು ಮನೆಯ ಸುತ್ತಮುತ್ತ ಅಲಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 11:09 am, Sat, 3 December 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?