AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ವಿಟಮಿನ್ ಬಿ 12 ಕೊರತೆ ಎಂದರೇನು? ಈ ಸಮಸ್ಯೆಯಿಂದ ಹೊರಬರಲು ಸೇವಿಸಬೇಕಾದ ಆಹಾರ ಪದ್ಧತಿಗಳ ವಿವರ ಹೀಗಿದೆ

ವಯಸ್ಸಾದವರಲ್ಲಿ ಗೊಂದಲ ಮತ್ತು ಮರೆವಿನ ಲಕ್ಷಣಗಳು ಸಾಮಾನ್ಯವಾಗಿರುತ್ತದೆ. ಅದಕ್ಕೆ ಕಾರಣ ವಿಟಮಿನ್ ಬಿ 12 ಕೊರತೆ. ಹೀಗಾಗಿ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಬಿ 12 ಇರುವುದು ಅವಶ್ಯಕ.

Health Tips: ವಿಟಮಿನ್ ಬಿ 12 ಕೊರತೆ ಎಂದರೇನು? ಈ ಸಮಸ್ಯೆಯಿಂದ ಹೊರಬರಲು ಸೇವಿಸಬೇಕಾದ ಆಹಾರ ಪದ್ಧತಿಗಳ ವಿವರ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 17, 2021 | 8:32 AM

Share

ವಿಟಮಿನ್ ಬಿ 12 ನಮ್ಮ ದೇಹದ ಕಾರ್ಯಚಟುವಟಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಯಸ್ಸಾದವರಲ್ಲಿ ಗೊಂದಲ ಮತ್ತು ಮರೆವಿನ ಲಕ್ಷಣಗಳು ಸಾಮಾನ್ಯವಾಗಿರುತ್ತದೆ. ಅದಕ್ಕೆ ಕಾರಣ ವಿಟಮಿನ್ ಬಿ 12 ಕೊರತೆ. ಹೀಗಾಗಿ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಬಿ 12 ಇರುವುದು ಅವಶ್ಯಕ. ಇದನ್ನು ಸೈನೊಕೊಬಾಲಾಮಿನ್, ಕೋಬಾಲಾಮಿನ್ ಎಂದೂ ಕೂಡ ಕರೆಯುತ್ತಾರೆ. ಈ ವಿಟಮಿನ್ ಕೊರತೆಯು ರಕ್ತಹೀನತೆಗೆ ಕಾರಣವಾಗಬಹುದು. ಇದು ನೀರಿನಲ್ಲಿ ಕರಗುವ ವಿಟಮಿನ್ ಆಗಿದ್ದು, ಇದರ ಸೇವನೆಯಿಂದ ನರಮಂಡಲದ ಕಾರ್ಯಚಟುವಟಿಕೆಯಲ್ಲಿ ಮೆದುಳು ಪ್ರಮುಖ ಪಾತ್ರ ವಹಿಸುತ್ತದೆ. ಇದಲ್ಲದೆ, ದೇಹದಲ್ಲಿನ ಕೆಂಪು ರಕ್ತ ಕಣಗಳ ಉತ್ಪಾದನೆ, ಡಿಎನ್‌ಎ ಉತ್ಪಾದನೆ, ನಿಯಂತ್ರಣ ಮತ್ತು ಕೊಬ್ಬಿನಾಮ್ಲಗಳಿಗೆ ವಿಟಮಿನ್ ಬಿ 12 ಅವಶ್ಯಕವಾಗಿದೆ.

ವಿಟಮಿನ್ ಬಿ 12 ಉಪಯೋಗ ನಮ್ಮ ನರಮಂಡಲವನ್ನು ಆರೋಗ್ಯವಾಗಿಡಲು ಕೆಂಪು ರಕ್ತ ಕಣಗಳ ಉತ್ಪಾದನೆಗೆ ವಿಟಮಿನ್ ಬಿ 12 ಅವಶ್ಯಕ. ಇದರ ಕೊರತೆಯು ಸಣ್ಣ ಪ್ರಮಾಣದಲ್ಲಿ ಇದ್ದರೆ, ಅದು ಸ್ನಾಯು ದೌರ್ಬಲ್ಯ, ಆಲಸ್ಯ, ನಡುಕ, ಮೂತ್ರ ಸಮಸ್ಯೆ, ಕಡಿಮೆ ರಕ್ತದೊತ್ತಡ, ರೋಗಗ್ರಸ್ತತೆ ಮತ್ತು ಮರೆವಿಗೆ ಕಾರಣವಾಗಬಹುದು. ವಿಟಮಿನ್ ಬಿ 12ನ ಕೊರತೆ ತುಂಬಾ ತೀವ್ರವಾಗಿದ್ದರೆ, ಅದು ರಕ್ತಹೀನತೆಗೆ ಕಾರಣವಾಗಬಹುದು. ಎಲ್ಲಾ ಬಿ ಜೀವಸತ್ವಗಳಂತೆ ಬಿ 12 ನೀರಿನಲ್ಲಿ ಕರಗುತ್ತದೆ.

ಶೇಖರಣಾ ಪ್ರಮಾಣ ಕಡಿಮೆಯಿದ್ದರೆ ಬಿ 12 ಕೊರತೆ ಬಹಳ ಬೇಗನೆ ಸಂಭವಿಸುತ್ತದೆ. ಮಕ್ಕಳಲ್ಲಿ ಇದು ಮೊದಲು ಪರಿಣಾಮವನ್ನು ಬೀರುತ್ತದೆ. ವಿಟಮಿನ್ ಮಟ್ಟವನ್ನು ತಿಳಿಯಲು ರಕ್ತ ಪರೀಕ್ಷೆ ಮಾಡಬೇಕು. ವಿಟಮಿನ್ ಬಿ 12 ಕೊರತೆಯಿರುವ ಜನರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಆಹಾರದಲ್ಲಿ ಬದಲಾವಣೆಗಳನ್ನು ಮಾಡಿದ ನಂತರ ಯಾವುದೇ ಬದಲಾವಣೆಗಳಿಲ್ಲದಿದ್ದರೆ, ವಿಟಮಿನ್ ಬಿ 12 ಕೊರತೆಯ ವೈದ್ಯಕೀಯ ಕಾರಣಗಳನ್ನು ಕಂಡುಹಿಡಿಯಲು ವೈದ್ಯರನ್ನು ಸಂಪರ್ಕಿಸಿ.

ಆಹಾರ ಪದ್ಧತಿಯಲ್ಲಿ ಬದಲಾವಣೆ ಕೆಲವು ಆಹಾರವನ್ನು ಸೇವಿಸುವುದರಿಂದ ಜೀವಸತ್ವಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಹಾಲು, ಮೀನು, ಏಡಿಗಳು, ಸೋಯಾ ಉತ್ಪನ್ನಗಳು, ಚೀಸ್, ಮೊಟ್ಟೆ, ಕೆಂಪು ಮಾಂಸ, ಹಾಲು ಮತ್ತು ಮೊಸರನ್ನು ನಿಯಮಿತವಾಗಿ ಸೇವಿಸುವುದರಿಂದ ವಿಟಮಿನ್ ಬಿ 12 ಅಧಿಕವಾಗಿರುತ್ತದೆ ಮತ್ತು ದೇಹಕ್ಕೆ ಹೆಚ್ಚು ಶಕ್ತಿ ನೀಡುತ್ತದೆ.

ಇದನ್ನೂ ಓದಿ:

Toothpaste Benefits: ಹಲ್ಲುಗಳನ್ನು ಸ್ವಚ್ಛಗೊಳಿಸುವುದರ ಜತೆಗೆ ಟೂತ್​ಪೇಸ್ಟ್ ಮುಖದ ಸೌಂದರ್ಯವನ್ನೂ ಹೆಚ್ಚಿಸುತ್ತದೆ

Mouth Ulcers: ಬಾಯಿ ಹುಣ್ಣಿನಿಂದ ಬಳಲುತ್ತಿದ್ದೀರಾ? ಈ ಸರಳ ವಿಧಾನವನ್ನು ಅನುಸರಿಸಿ ನೋವಿನಿಂದ ಮುಕ್ತಿ ಪಡೆಯಿರಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ