AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garbhageete: 4 ತಿಂಗಳ ಗರ್ಭಿಣಿಯರ ಆಹಾರ ಪದ್ಧತಿ ಹೇಗಿರಬೇಕು? ತಜ್ಞರು ಏನಂತಾರೆ?

ಗರ್ಭಿಣಿಯರು ತಮ್ಮ ನಾಲ್ಕನೇ ತಿಂಗಳಿನಲ್ಲಿ ಹೇಗಿರಬೇಕು, ಎಂತಹ ಆಹಾರ ಸೇವಿಸಬೇಕು?, ಯಾವ ಆಹಾರ ಸೇವಿಸದರೆ ಏನೆಲ್ಲಾ ತೊಂದರೆಗಳು ಬಾಧಿಸಬಹುದು ಎಂಬುದೆಲ್ಲರ ಕುರಿತು ಯೋಗ ತಜ್ಞೆ ಕಮಲಾ ಭಾರದ್ವಾಜ್ ನೀಡಿರುವ ಮಾಹಿತಿ ಇಲ್ಲಿದೆ.

Garbhageete: 4 ತಿಂಗಳ ಗರ್ಭಿಣಿಯರ ಆಹಾರ ಪದ್ಧತಿ ಹೇಗಿರಬೇಕು? ತಜ್ಞರು ಏನಂತಾರೆ?
Kamala Bharadwaj
TV9 Web
| Edited By: |

Updated on: Jun 29, 2022 | 8:30 PM

Share

ಗರ್ಭಿಣಿಯರು ತಮ್ಮ ನಾಲ್ಕನೇ ತಿಂಗಳಿನಲ್ಲಿ ಹೇಗಿರಬೇಕು, ಎಂತಹ ಆಹಾರ ಸೇವಿಸಬೇಕು?, ಯಾವ ಆಹಾರ ಸೇವಿಸದರೆ ಏನೆಲ್ಲಾ ತೊಂದರೆಗಳು ಬಾಧಿಸಬಹುದು ಎಂಬುದೆಲ್ಲರ ಕುರಿತು ಯೋಗ ತಜ್ಞೆ ಕಮಲಾ ಭಾರದ್ವಾಜ್ ನೀಡಿರುವ ಮಾಹಿತಿ ಇಲ್ಲಿದೆ.

 ಸಿಹಿ: ಗರ್ಭಿಣಿಯರು ತುಂಬಾ ಸಿಹಿಯನ್ನು ಸೇವನೆ ಮಾಡಿದರೆ ಅದರಿಂದ ಮಧುಮೇಹ ಮೂತ್ರಕೋಶದ ರೋಗಗಳು, ಸ್ಥೂಲಕಾಯ ಇವೆಲ್ಲವೂ ಕಾಣಿಸಿಕೊಳ್ಳಬಹುದು.

ಹುಳಿ: ಹುಳಿಯನ್ನು ಹೆಚ್ಚು ಸೇವನೆ ಮಾಡುವುದರಿಂದ ಚರ್ಮ ಹಾಗೂ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಅವರನ್ನು ಕಾಡಬಹುದು.

ಉಪ್ಪು: ಉಪ್ಪಿನ ಸೇವನೆ ಹೆಚ್ಚು ಮಾಡಿದರೆ ಬಿಳಿ ಕೂದಲು, ಚರ್ಮ ಸುಕ್ಕುಗಟ್ಟುವ ಸಾಧ್ಯತೆ ಇದೆ, ಹಲ್ಲುಗಳ ಬೆಳವಣಿಗೆ ಸರಿಯಾಗಿ ಆಗದೇ ಇರಬಹುದು.

ಖಾರ: ಖಾರದ ಸೇವನೆ ಹೆಚ್ಚಾದರೆ ರಜೋದೋಷ, ವೀರ್ಯದೋಷ ಆಗುವ ಸಾಧ್ಯತೆ ಇದೆ.

ಕಹಿ : ಕಹಿ ಸೇವನೆ ಮಾಡಿದರೆ ಊತ, ದುರ್ಬಲತೆ, ಜೀರ್ಣಶಕ್ತಿಯಲ್ಲಿ ಕೊರತೆ, ಇವೆಲ್ಲದರ ಸಾಧ್ಯತೆ ಹೆಚ್ಚಿರುತ್ತದೆ.

ಒಗರು: ಒಗರುಳ್ಳ ಪದಾರ್ಥ ಸೇವನೆ ಮಾಡಿದರೆ ತೇಗು, ಎದೆಯುರಿ ಒಣಚರ್ಮದ ಸಮಸ್ಯೆ ಉಂಟಾಗಬಹುದು.

ಹಾಗಾದರೆ ಮಗು ಹೊಟ್ಟೆಯಲ್ಲಿದ್ದಾಗ ತಾಯಿ ಮಾಡಬೇಕಾಗಿದ್ದೇನು, ಮಾಡುವ ಊಟ ಹೇಗಿರಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ತಾಯಿ ಗರ್ಭಾವಸ್ಥೆಯಲ್ಲಿರುವಾಗ ಯಾವ ಆಹಾರವನ್ನು ಹೆಚ್ಚು ತೆಗೆದುಕೊಳ್ಳುತ್ತಾಳೋ ಅದೆಲ್ಲಕ್ಕೂ ಅದರದ್ದೇ ಆದ ದುಷ್ಪರಿಣಾಮಗಳಿವೆ. ಊಟದಲ್ಲಿ ಸಮತೋಲವನ್ನು ಕಾಯ್ದುಕೊಳ್ಳಬೇಕು.

 

ಊಟ ಹೀಗಿರಲಿ ಬಾಳೆಎಲೆಯಲ್ಲಿ ಬಡಿಸುವ ಹಾಗೆ ಬಲಭಾಗಕ್ಕೆ ಪಾಯಸ, ಎಡ ಭಾಗಕ್ಕೆ ಚಿತ್ರಾನ್ನ ಅಥವಾ ಪುಳಿಯೊಗರೆಯನ್ನು ಬಿಡುವುದು, ಬಾಳೆಯ ಮೇಲ್ಭಾಗ ಎರಡು ಬಗೆಯ ಕೋಸಂಬರಿ, ಎರಡು ರೀತಿಯ ಪಲ್ಯ, ಒಂದು ಗೊಜ್ಜು, ಎಡ ಭಾಗದಲ್ಲಿ ಸ್ವಲ್ಪ ಉಪ್ಪು, ಉಪ್ಪಿನಕಾಯಿ ಹಾಗೂ ಚಟ್ನಿಯನ್ನು ಹಾಕಲಾಗುತ್ತದೆ.

ಮಧ್ಯ ಭಾಗದಲ್ಲಿ ಅನ್ನ ತೊವೆ, ಸಾರು, ಸಾಂಬಾರು, ಕೊನೆಯಲ್ಲಿ ಮಜ್ಜಿಗೆ ಹಾಕಲಾಗುತ್ತದೆ. ಹಾಗೆಯೇ ಕರಿದ ತಿಂಡಿ, ಸಿಹಿ ಪದಾರ್ಥಗಳನ್ನು ಬಡಿಸಲಾಗುತ್ತದೆ.

ನಾವು ಬಲಗೈನಲ್ಲಿ ಊಟ ಮಾಡುವ ಕಾರಣ ಊಟವನ್ನು ಎಂದೂ ಬಲಗಡೆಯಿಂದಲೇ ಪ್ರಾರಂಭಿಸಬೇಕು, ಅಂದರೆ ಸಿಹಿಯಿಂದ ಪ್ರಾರಂಭಿಸಬೇಕು. ಉಪ್ಪನ್ನು ಎಡಗಡೆ ಅಂದರೆ ಬಲಗೈಯಿಂದ ಆದಷ್ಟು ದೂರದಲ್ಲಿರುತ್ತದೆ. ಹಾಗಾಗಿ ಉಪ್ಪನ್ನು ಅತಿಯಾಗಿ ಬಳಸಬಾರದು ಎಂಬುದು ನಮ್ಮ ತಲೆಯಲ್ಲಿರಬೇಕು.

ಕಮಲಾ ಭಾರಧ್ವಾಜ್ ಕುರಿತು ಮಾಹಿತಿ: ಕಮಲಾ ಭಾರಧ್ವಾಜ್ ಪ್ರಸಿದ್ಧ ಯೋಗ ತಜ್ಞರಾಗಿದ್ದು, ಸತ್ಯವೆನ್ನುವ ಯೋಗ ಕೇಂದ್ರವನ್ನು ಮುನ್ನಡೆಸುತ್ತಿದ್ದಾರೆ. ಯೋಗದಲ್ಲಿ ಎಂಎಸ್​ಸಿ ಮಾಡಿದ್ದು, ಹಾಗೆಯೇ ಯೋಗದಲ್ಲಿಯೇ ಪಿಜಿ ಡಿಪ್ಲೊಮಾ ಓದಿದ್ದಾರೆ. ಅವರು ಜೈನ್​ ಕಾಲೇಜಿನಲ್ಲಿ ಎಂಬಿಎ ಪೂರೈಸಿದ್ದಾರೆ.

ಅವರಿಗೆ 2015ರಲ್ಲಿ ಯೋಗದಲ್ಲಿನ ಸಾಧನೆಗಾಗಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಯೋಗ ಕಲಾಸಾಧಕಿ ಪ್ರಶಸ್ತಿಗೂ ಭಾಜನರಾಗಿದ್ದಾರೆ, ಜ್ಯೋತಿಷ ರತ್ನ ಸೇರಿದಂತೆ ಹಲವು ಕೋರ್ಸ್​ಗಳನ್ನು ಮಾಡಿದ್ದಾರೆ. ಗರ್ಭಾವಸ್ಥೆ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.ನಂ.9663879672. www.astroyoga.co.in ಭೇಟಿ ನೀಡಿ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ