Heart Health: ಹೃದಯದ ಆರೋಗ್ಯ ಕಾಪಾಡಲು ಯಾವ ರೀತಿಯ ಪೋಷಕಾಂಶ ಆಹಾರ ಸೇವಿಸಬೇಕು?

ನಿಮ್ಮ ಹೃದಯವನ್ನು ಆರೋಗ್ಯಕರವಾಗಿಡಲು ಅಗತ್ಯವಿರುವ ಕೆಲವು ಪ್ರಮುಖ ಪೋಷಕಾಂಶಗಳನ್ನು ಪ್ರತಿದಿನ ಸೇವಿಸುವುದು ಅಗತ್ಯ ಜೊತೆಗೆ ಅವುಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಈ ಬಗ್ಗೆ ಆಯುರ್ವೇದ ತಜ್ಞ ವಿಕಾಸ್ ಚಾವ್ಲಾ ಕೆಲವೊಂದು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

Heart Health: ಹೃದಯದ ಆರೋಗ್ಯ ಕಾಪಾಡಲು ಯಾವ ರೀತಿಯ ಪೋಷಕಾಂಶ ಆಹಾರ ಸೇವಿಸಬೇಕು?
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 27, 2023 | 10:32 AM

ಹೃದಯವು ಮಾನವ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ, ರಕ್ತವನ್ನು ಪಂಪ್ ಮಾಡಲು ಮತ್ತು ದೇಹದ ಎಲ್ಲಾ ಭಾಗಗಳಿಗೆ ಆಮ್ಲಜನಕ ಮತ್ತು ಪೋಷಕಾಂಶಗಳನ್ನು ಪೂರೈಸಲು ಕಾರಣವಾಗಿದೆ. ಆದ್ದರಿಂದ, ಆರೋಗ್ಯಕರ ಜೀವನ ನಡೆಸಲು ಮುಖ್ಯವಾಗಿ ನಮ್ಮ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯಗತ್ಯ. ಹೃದಯವನ್ನು ಆರೋಗ್ಯಕರವಾಗಿಡುವ ಅತ್ಯುತ್ತಮ ಮಾರ್ಗವೆಂದರೆ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಸಮತೋಲಿತ ಆಹಾರವನ್ನು ಸೇವಿಸುವುದು. ವೇದಾಸ್ ಕ್ಯೂರ್ನ ಆಯುರ್ವೇದ ತಜ್ಞ ವಿಕಾಸ್ ಚಾವ್ಲಾ ಎಂಬವರು ಹೃದಯವನ್ನು ಆರೋಗ್ಯಕರವಾಗಿಡಲು ಅಗತ್ಯವಿರುವ ಕೆಲವು ಪ್ರಮುಖ ಪೋಷಕಾಂಶಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಒಮೆಗಾ 3 ಕೊಬ್ಬಿನಾಮ್ಲಗಳು: ಒಮೆಗಾ -3 ಕೊಬ್ಬಿನಾಮ್ಲಗಳು ಆಹಾರದ ಮೂಲಕ ಪಡೆಯಬೇಕಾದ ಅಗತ್ಯ ಕೊಬ್ಬಿನಾಂಶಗಳಾಗಿವೆ. ಇವು ಮೀನುಗಳಾದ ಸಾಲ್ಮನ್, ಬಂಗುಡೆ ಮತ್ತು ಸಾರ್ಡೀನ್, ಹಾಗೆಯೇ ಅಗಸೆಬೀಜ, ಚಿಯಾ ಬೀಜಗಳಲ್ಲಿ ಕಂಡುಬರುತ್ತವೆ, ಅವು ಉರಿಯೂತವನ್ನು ಕಡಿಮೆ ಮಾಡುವುದಲ್ಲದೆ, ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ. ಇವೆಲ್ಲವೂ ಉತ್ತಮ ಹೃದಯ ಆರೋಗ್ಯಕ್ಕೆ ಕೊಡುಗೆ ನೀಡುವ ಅಂಶಗಳಾಗಿವೆ.

ಫೈಬರ್: ಫೈಬರ್ ಒಂದು ರೀತಿಯ ಕಾರ್ಬೋಹೈಡ್ರೇಟ್ ಆಗಿದ್ದು, ಇದು ಜೀರ್ಣಕ್ರಿಯೆಯನ್ನು ನಿಯಂತ್ರಿಸಲು, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ನಾರಿನ ಉತ್ತಮ ಮೂಲಗಳಲ್ಲಿ ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ದ್ವಿದಳ ಧಾನ್ಯಗಳು ಸೇರಿವೆ.

ಪೊಟ್ಯಾಸಿಯಮ್: ಪೊಟ್ಯಾಸಿಯಮ್ ಒಂದು ಅತ್ಯಗತ್ಯ ಖನಿಜವಾಗಿದ್ದು, ಇದು ಹೃದಯದ ಲಯ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಬಾಳೆಹಣ್ಣುಗಳು, ಆವಕಾಡೊಗಳು, ಪಾಲಕ್ ಮತ್ತು ಸಿಹಿ ಆಲೂಗಡ್ಡೆಗಳಲ್ಲಿ ಕಂಡುಬರುತ್ತದೆ.

ಇದನ್ನೂ ಓದಿ:Heart Health: ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯಕ ಈ ಪಾನೀಯ

ಮೆಗ್ನೀಷಿಯಂ: ಮೆಗ್ನೀಷಿಯಂ ಮತ್ತೊಂದು ಪ್ರಮುಖ ಖನಿಜವಾಗಿದ್ದು, ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮೆಗ್ನೀಷಿಯಂ ಇರುವ ಉತ್ತಮ ಮೂಲಗಳೆಂದರೆ ಬೀಜಗಳು, ಧಾನ್ಯಗಳು ಮತ್ತು ಹಸಿರು ತರಕಾರಿಗಳು ಸೇರಿವೆ.

ವಿಟಮಿನ್ ಡಿ: ವಿಟಮಿನ್ ಡಿ ದೇಹವು ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ, ಇದು ಆರೋಗ್ಯಕರ ಮೂಳೆಗಳಿಗೆ ಅವಶ್ಯಕವಾಗಿದೆ. ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಿ ಹೃದಯದ ಆರೋಗ್ಯದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಯ ಉತ್ತಮ ಮೂಲಗಳಲ್ಲಿ ಮೀನು, ಮೊಟ್ಟೆಯ ಹಳದಿ ಭಾಗ ಮತ್ತು ಹಾಲು ಹಾಗೂ ಧಾನ್ಯಗಳಂತಹ ಬಲವರ್ಧಿತ ಆಹಾರಗಳು ಸೇರಿವೆ.

ಈ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರ ಜೊತೆಗೆ, ಅನಾರೋಗ್ಯಕರ ಕೊಬ್ಬಿನಾಂಶವಿರುವ ಪದಾರ್ಥ, ಉಪ್ಪು ಮತ್ತು ಹೆಚ್ಚುವರಿ ಸಕ್ಕರೆಗಳ ಸೇವನೆಯನ್ನು ಮಿತಿಗೊಳಿಸುವುದು ಸಹ ಮುಖ್ಯವಾಗಿದೆ. ಇವೆಲ್ಲವೂ ಕಳಪೆ ಹೃದಯದ ಆರೋಗ್ಯಕ್ಕೆ ಕಾರಣವಾಗಬಹುದು. ಹೃದಯದ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ನಿಯಮಿತ ದೈಹಿಕ ಚಟುವಟಿಕೆ ಮತ್ತು ಆರೋಗ್ಯಕರ ರೀತಿಯಲ್ಲಿ ತೂಕವನ್ನು ಕಾಪಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ನಮ್ಮ ಆಹಾರ ಮತ್ತು ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡುವ ಮೂಲಕ, ನಮ್ಮ ಹೃದಯಗಳನ್ನು ರಕ್ಷಿಸಲು ಮತ್ತು ನಮ್ಮ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳಬಹುದು. ನಿಮ್ಮ ಹೃದಯದ ಸ್ಥಿತಿಯು ಸಾಮಾನ್ಯವಾಗಿ ನಿಮ್ಮ ಆಹಾರ ಪದ್ಧತಿಯ ಸ್ಥಿತಿಯ ನೇರ ಪ್ರತಿಬಿಂಬವಾಗಿದೆ. ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುವ ಪೋಷಕಾಂಶಗಳ ಬಗ್ಗೆ ತಿಳಿದುಕೊಂಡು ಆಹಾರದ ಬಗ್ಗೆ ಹೆಚ್ಚು ಗಮನ ನೀಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:30 am, Thu, 27 April 23

ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ