AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸಮಯದಲ್ಲಿ ನಿಮ್ಮ ಬಾಯಿ ಸ್ವಚ್ಛವಾಗಿರಲೇ ಬೇಕು; ಹಲ್ಲಿನ ಸ್ವಚ್ಛತೆಗೆ ಇಲ್ಲಿದೆ ಸಲಹೆಗಳು

ಬಾಯಿಯಲ್ಲಿನ ಲಾಲಾರಸದ ಮೂಲಕ ಕೊರೊನಾ ವೈರಸ್​ ಶ್ವಾಸಕೋಶವನ್ನು ತಲುಪುತ್ತದೆ. ಅದರಲ್ಲಿಯೂ ವಸಡು ಅಥವಾ ದವಡೆ ಸಮಸ್ಯೆ ಉಳ್ಳವರಿಗೆ ಅತಿ ವೇಗವಾಗಿ ಕೊರೊನಾ ಸೋಂಕು ಹಾನಿ ಮಾಡುತ್ತದೆ.

ಕೊವಿಡ್​ ಸಮಯದಲ್ಲಿ ನಿಮ್ಮ ಬಾಯಿ ಸ್ವಚ್ಛವಾಗಿರಲೇ ಬೇಕು; ಹಲ್ಲಿನ ಸ್ವಚ್ಛತೆಗೆ ಇಲ್ಲಿದೆ ಸಲಹೆಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 17, 2021 | 8:06 AM

Share

ಉಸಿರಾಟದ ತೊಂದರೆ ಜತೆಗೆ ಕೊವಿಡ್-​19 ದೇಹದ ಇನ್ನಿತರ ಅಂಗಗಳ ಮೇಲೂ ಪರಿಣಾಮ ಬೀರುತ್ತಿದೆ. ಹಾಗಿದ್ದಾಗ ಕೊರೊನಾ ವೈರಸ್​ ವಿರುದ್ಧ ಹೋರಾಡಲು ನಾವು ದಿನನಿತ್ಯದ ಚಟುವಟಿಕೆಯಲ್ಲಿ ಒಂದಿಷ್ಟು ನಿಯಮವನ್ನು ಪಾಲಿಸಲೇಬೇಕು. ಕೊರೊನಾ ಸೋಂಕು ಎಷ್ಟು ಹಾನಿಕರವಾಗಿದೆ? ದೇಹದ ಇತರರ ಅಂಗಗಳಿಗೆ ಪ್ರವೇಶಿಸದಂತೆ ನಾವು ಯಾವ ರೀತಿಯಲ್ಲಿ ಮುನ್ನಚ್ಚರಿಕೆವಹಿಸಬೇಕು? ಎಂಬುದರ ಕುರಿತಾಗಿ ಒಂದಿಷ್ಟು ತಿಳಿಯಲೇ ಬೇಕಾದ ಮಾಹಿತಿ ಇಲ್ಲಿದೆ. 

ಬಾಯಿಯಲ್ಲಿನ ಲಾಲಾರಸದ ಮೂಲಕ ಕೊರೊನಾ ವೈರಸ್​ ಶ್ವಾಸಕೋಶವನ್ನು ತಲುಪುತ್ತದೆ. ಅದರಲ್ಲಿಯೂ ವಸಡು ಅಥವಾ ದವಡೆ ಸಮಸ್ಯೆ ಉಳ್ಳವರಿಗೆ ಅತಿ ವೇಗವಾಗಿ ಕೊರೊನಾ ಸೋಂಕು ಹಾನಿ ಮಾಡುತ್ತದೆ. ಹೀಗಿರುವಾಗ ಹಲ್ಲು ಮತ್ತು ಬಾಯಿಯನ್ನು ಆದಷ್ಟು ಸ್ವಚ್ಛವಾಗಿರಿಸಿಕೊಳ್ಳುವ ಕುರಿತಾಗಿ ನಾವು ಹೆಚ್ಚು ಗಮನಕೊಡಬೇಕಿದೆ.

ಕೊವಿಡ್​-19 ತಗುಲಿದ್ದ ಹೆಚ್ಚಿನ ರೋಗಿಗಳಲ್ಲಿ ಪಿರಿಯಾಂಟೈಸಿಸ್​ ಕಂಡು ಬಂದಿರುವುದರಿಂದ ಲಾಲಾರಸದ ಮೂಲಕ ದೇಹದ ಇತರ ಭಾಗಗಳಿಗೆ ಬ್ಯಾಕ್ಟೀರಿಯಾಗಳು ಹರಡುತ್ತವೆ. ಹಾಗಿದ್ದಾಗ ಇದಕ್ಕೆ ಪರಿಹಾರವೇನು ಎಂಬುದರ ಕುರಿತಾಗಿ ತಜ್ಞರು ಮಾಹಿತಿ ಹಂಚಿಕೊಂಡಿದ್ದಾರೆ.

ಹೆಚ್ಚು ನೀರು ಕುಡಿಯಿರಿ ಮುಖಗವಸು ಧರಿಸುವುದರಿಂದ ಬಾಯಿ ಆಗಾಗ ಒಣಗುತ್ತದೆ. ಇದರಿಂದ ಬಾಯಿಯಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗಲು ಕಾರಣವಾಗುತ್ತದೆ. ಬಾಯಿಯಿಂದ ಉಸಿರಾಡುವ ಮೂಲಕ ಕೆಟ್ಟ ಗಾಳಿ ನಮ್ಮ ದೇಹವನ್ನು ಪ್ರವೇಶಿಸುತ್ತದೆ. ಬಾಯಾರಿಕೆ ಆಗುವವರೆಗೂ ಕಾಯಬೇಡಿ. ಆಗಾಗ ನೀರು ಕುಡಿಯುತ್ತಿರಿ.

ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ ಹಸಿರು ತರಕಾರಿಗಳು, ಹಣ್ಣುಗಳನ್ನು ಹೆಚ್ಚು ಸೇವಿಸಿ ಇದು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ ಮತ್ತು ದೇಹದಲ್ಲಿ ರೋಗರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ.

ಆಹಾರ ಆಯ್ಕೆಗಳು ಆದಷ್ಟು ಎಣ್ಣೆಯಲ್ಲಿ ಕರಿದ ಪದಾರ್ಥಗಳಿಂದ ದೂರವಿರಿ. ಉದಾಹರಣೆಗೆ ಚಿಪ್ಸ್​, ಕರಿದ ತಿಂಡಿ​ ಮುಂತಾದ ತಿಂಡಿಗಳು. ಅದರ ಬದಲಾಗಿ ಕ್ಯಾರೆಟ್​, ಬೀಟ್ರೂಟ್​ನಂತಹ ಪೌಷ್ಠಿಕಯುಕ್ತ ಆಹಾರವನ್ನು ಸೇವಿಸಿ. ಆಹಾರ ಸೇವನೆಯ ಬಳಿಕ ನಿಮ್ಮ ಹಲ್ಲುಗಳನ್ನು ಸ್ವಚ್ಛಗೊಳಿಸಿಕೊಳ್ಳಿ

ಬಾಯಿ ಮುಕ್ಕಳಿಸಿ ಆಹಾರ ತಿಂದ ಬಳಿಕವೇ ನೀರಿನಿಂದ ನಿಮ್ಮ ಬಾಯಿಯನ್ನು ಮುಕ್ಕಳಿಸಿ. ಇದರಿಂದ ಹಲ್ಲುಗಳಲ್ಲಿ ಸಿಲುಕಿಕೊಂಡಿರುವ ಆಹಾರ ಪದಾರ್ಥಗಳನ್ನು ತೆಗೆಯಬಹುದು. ಆರೋಗ್ಯದ ಸುರಕ್ಷತೆಗೆ ಇದು ಮುಖ್ಯವಾದ ಸಲಹೆಯಾಗಿದೆ.

ಒಳ್ಳೆಯ ಬ್ಯಾಕ್ಟೀರಿಯಾ ನಾಶವಾಗದಂತೆ ನೋಡಿಕೊಳ್ಳಿ ಆಹಾರ ಸೇವನೆಯ ಬಳಿಕ ಅತಿಯಾಗಿ ಹಲ್ಲುಜ್ಜುವುದು ಮತ್ತು ನಾಲಿಗೆಯನ್ನು ಕ್ಲೀನರ್​ ಮೂಲಕ ಸ್ವಚ್ಛಗೊಳಿಸುವುದರಿಂದ ದೇಹಕ್ಕೆ ಅವಶ್ಯವಾಗಿರುವ ಒಳ್ಳೆಯ ಬ್ಯಾಕ್ಟೀರಿಯಾಗಳೂ ಸಹ ನಾಶವಾಗುತ್ತದೆ. ಆದ್ದರಿಂದ ಪದೇ ಪದೇ ಆಹಾರ ಸೇವಿಸಿ ಬಾಯಿ ಸ್ವಚ್ಛ ಮಾಡಿಕೊಳ್ಳುವಂತಹ ಪರಿಸ್ಥಿತಿ ತಂದುಕೊಳ್ಳುವುದು ಒಳ್ಳೆಯದಲ್ಲ.

ವರ್ಷಕ್ಕೆ ಎರಡು ಬಾರಿಯಾದರೂ ತಪಾಸಣೆ ವರ್ಷದಲ್ಲಿ ಎರಡು ಬಾರಿಯಾದರೂ ವೈದ್ಯರಲ್ಲಿ ನಿಮ್ಮ ದಂತ ಪರೀಕ್ಷೆ ಮಾಡಿಸಿಕೊಳ್ಳಿ. ನಿಮಗೆ ಯಾವುದೇ ಸಮಸ್ಯೆ ಕಾಡದೇ ಇರಬಹುದು. ಆದರೆ ಕೆಲವು ಬಾರಿ ದಂತ ಸವೆತದಂತಹ ಸಮಸ್ಯೆಗಳು ಗೊತ್ತೇ ಅಗುವುದಿಲ್ಲ. ಆದ್ದರಿಂದ ಹಲ್ಲಿನ ಸದೃಢತೆ ಮತ್ತು ದಂತದ ಆರೋಗ್ಯಕ್ಕಾಗಿ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ.

ಇದನ್ನೂ ಓದಿ:

Health Tips: ಸೈನಸ್ ಸಮಸ್ಯೆಯ ನಿವಾರಣೆಗೆ ಸರಳ ಉಪಾಯ; ಮನೆಯಲ್ಲೇ ತಯಾರಿಸಬಹುದಾದ ಔಷಧಿಗಳ ಬಗ್ಗೆ ಗಮನಹರಿಸಿ

Health Tips: ಆಸಿಡಿಟಿ ನಿವಾರಣೆಗೆ ಯೋಗಾಭ್ಯಾಸ; ಯಾವ ಯೋಗ ಭಂಗಿ ಸೂಕ್ತ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ