AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ ನಾಲ್ಕು ಬಗೆಯ ಅಕ್ಕಿಗಳಲ್ಲಿದೆ ಆರೋಗ್ಯ ಪ್ರಯೋಜನಗಳು

ಆರೋಗ್ಯದ ದೃಷ್ಟಿಯಿಂದ ಕಂದು ಸೇರಿದಂತೆ ಇತರೆ ಅಕ್ಕಿಯತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಬಿಳಿ ಅಕ್ಕಿ ಜೊತೆಗೆ ಕಂದು, ಕೆಂಪು ಮತ್ತು ಕಪ್ಪು ಅಕ್ಕಿ ಲಭ್ಯವಿದೆ.

Health Tips: ಈ ನಾಲ್ಕು ಬಗೆಯ ಅಕ್ಕಿಗಳಲ್ಲಿದೆ ಆರೋಗ್ಯ ಪ್ರಯೋಜನಗಳು
ವಿವಿಧ ಬಗೆಯ ಅಕ್ಕಿ
TV9 Web
| Edited By: |

Updated on: Aug 09, 2021 | 5:45 PM

Share

ಆರೋಗ್ಯವೇ ಭಾಗ್ಯ ಅನ್ನೊ ಈಗಿನ ಜನರು ತಮ್ಮ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದರಲ್ಲೂ ತೂಕ ಇಳಿಸುವವರು, ಮಧುಮೇಹ ಕಾಯಿಲೆ ಇರುವವರು ಅನ್ನ ಸೇವಿಸಲು ಹಿಂದೆ ಸರಿಯುತ್ತಾರೆ. ಸಾಮಾನ್ಯವಾಗಿ ಬಿಳಿ ಅಕ್ಕಿಯಿಂದ ಮಾಡುವ ಅನ್ನ ಅಥವಾ ತಿಂಡಿ ತಿನ್ನುತ್ತಾರೆ. ಆದರೆ ಆರೋಗ್ಯದ ದೃಷ್ಟಿಯಿಂದ ಕಂದು ಸೇರಿದಂತೆ ಇತರೆ ಅಕ್ಕಿಯತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಬಿಳಿ ಅಕ್ಕಿ ಜೊತೆಗೆ ಕಂದು, ಕೆಂಪು ಮತ್ತು ಕಪ್ಪು ಅಕ್ಕಿ ಲಭ್ಯವಿದೆ. ಒಂದೊಂದು ಬಗೆಯ ಅಕ್ಕಿ ತನ್ನದೇ ಆದ ಪ್ರಯೋಜನಗಳು ಮತ್ತು ಪೋಷಕಾಂಶಗಳಿಂದ ಕೂಡಿವೆ.

ಬಿಳಿ ಅಕ್ಕಿ (White rice) ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಬಿಳಿ ಅಕ್ಕಿ ಇರುತ್ತದೆ. ಹೆಚ್ಚಾಗಿ ಬಿಳಿ ಅಕ್ಕಿಯನ್ನೇ ಬಳಸುತ್ತಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಎಲ್ಲಾ ವಿಧದ ಅಕ್ಕಿಗಳಲ್ಲಿ ಬಿಳಿ ಅಕ್ಕಿಯನ್ನು ಹೆಚ್ಚು ಸಂಸ್ಕರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ಸಂಸ್ಕರಣೆ ಮಾಡಿದಾಗ ಪೌಷ್ಟಿಕಾಂಶದ ಪ್ರಮಾಣ ಕಡಿಮೆಯಾಗುತ್ತವೆ. ಇದು ಉತ್ಕರ್ಷಣ ನಿರೋಧಕಗಳು, ಪ್ರೋಟೀನ್​ಗಳು, ಥಯಾಮಿನ್, ಜೀವಸತ್ವಗಳನ್ನು ಹೊಂದಿರುತ್ತದೆ.

ಕಂದು ಅಕ್ಕಿ (Brown Rice) ಕಂದು ಅಕ್ಕಿ ಎಂದರೆ ಬ್ರೌನ್ ರೈಸ್. ಇದು ಬಿಳಿ ಅಕ್ಕಿಗಿಂತ ಹೆಚ್ಚು ಪೌಷ್ಟಿಕಾಂಶದಿಂದ ಕೂಡಿದೆ. ಇದರಲ್ಲಿ ಫ್ಲಾವೊನೈಡ್ ಮತ್ತು ಆಂಟಿ-ಆಕ್ಸಿಡೆಂಟ್ಗಳಿದ್ದು, ಕೆಲ ರೋಗಗಳಿಂದ ಮುಕ್ತವಾಗಿಸುತ್ತದೆ. ಕಂದು ಅಕ್ಕಿಯೂ ಬಿಳಿ ಅಕ್ಕಿಯಂತೆ ಕ್ಯಾಲೊರಿ ಮತ್ತು ಕಾರ್ಬೋಹೈಡ್ರೇಟ್​ಗಳನ್ನು ಹೊಂದಿದೆ. ಆದಾಗ್ಯೂ, ಇದರಲ್ಲಿ ಪ್ರೋಟೀನ್ ಮತ್ತು ಫೈಬರ್ ಅಧಿಕವಾಗಿರುತ್ತದೆ.

ಕೆಂಪು ಅಕ್ಕಿ (Red Rice) ಈ ಅಕ್ಕಿಯಲ್ಲಿ ಆಂಥೋಸಯಾನಿನ್ ಎಂಬ ಉತ್ಕರ್ಷಣ ನಿರೋಧಕವಿದ್ದು, ಅದು ಅಕ್ಕಿಗೆ ಕೆಂಪು ಬಣ್ಣವನ್ನು ನೀಡುತ್ತದೆ. ಇದು ಉತ್ತಮ ಪ್ರಮಾಣದ ಕಬ್ಬಿಣಾಂಶವನ್ನು ಹೊಂದಿದೆ. ಹೀಗಾಗಿ ಉರಿಯೂತ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಈ ಅಕ್ಕಿಯಿಂದ ಮಾಡುವ ಖಾದ್ಯ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ತೂಕ ಇಳಿಸಿಕೊಳ್ಳುವವರಿಗೆ ಈ ಅಕ್ಕಿ ಬಳಸುವುದು ಹೆಚ್ಚು ಸೂಕ್ತವಾಗಿರುತ್ತದೆ. ಫೈಬರ್, ಪ್ರೋಟೀನ್ ಸೇರಿದಂತೆ ಹಲವು ಪೌಷ್ಟಿಕ ಅಂಶಗಳನ್ನು ಒಳಗೊಂಡಿರುವ ಕೆಂಪು ಅಕ್ಕಿಯ ಖಾದ್ಯ ತಿನ್ನುವುದರಿಂದ ಬೇಗ ಹಸಿವು ಆಗಲ್ಲ. ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.

ಕಪ್ಪು ಅಕ್ಕಿ (Black Rice) ಹಲವರಿಗೆ ಕಪ್ಪು ಅಕ್ಕಿ ಬಗ್ಗೆ ಗೊತ್ತಿಲ್ಲ. ಈ ವಿಧದ ಅಕ್ಕಿ ಪ್ರೋಟೀನ್, ಫೈಬರ್, ವಿಟಮಿನ್ ಇ ಮತ್ತು ಆಂಟಿ-ಆಕ್ಸಿಡೆಂಟ್​ಗಳಿಂದ ಸಮೃದ್ಧವಾಗಿದೆ. ಆರೋಗ್ಯಕ್ಕೆ ಈ ಅಕ್ಕಿ ತುಂಬಾ ಒಳ್ಳೆಯದು. ಈ ಅಕ್ಕಿಗೆ ಶ್ರೀಮಂತರ ಅಕ್ಕಿ ಎನ್ನುವ ಹೆಸರಿದೆ. ಕಾರಣ ಚೀನಾ ದೇಶದ ದೊರೆಗಳು ಕಪ್ಪು ಅಕ್ಕಿಯಿಂದ ಮಾಡುವ ಖಾದ್ಯವನ್ನು ಸೇವಿಸುತ್ತಿದ್ದರಂತೆ. ಈ ಅಕ್ಕಿಯಲ್ಲಿ ಮಾಡುವ ಅನ್ನವನ್ನು ಸೇವಿಸುವುದರಿಂದ ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳಿಂದ ದೂರವಿರಬಹುದು.

ಯಾವ ಅಕ್ಕಿ ಹೆಚ್ಚು ಪ್ರಯೋಜನಕಾರಿ ಈ ನಾಲ್ಕು ಬಗೆಯ ಅಕ್ಕಿಗಳಲ್ಲಿ ಕೆಂಪು, ಕಂದು, ಕಪ್ಪು ಅಕ್ಕಿ ಆರೋಗ್ಯ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇವು ಉತ್ಕರ್ಷಣ ನಿರೋಧಕಗಳು, ಫೈಬರ್, ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ಬಿಳಿ ಅಕ್ಕಿಯನ್ನು ಹೆಚ್ಚು ಸಂಸ್ಕರಿಸಲಾಗುತ್ತದೆ. ಹೀಗಾಗಿ ಇದರಲ್ಲಿ ಪೌಷ್ಟಿಕಾಂಶ ಅಂಶ ಕಡಿಮೆ ಇರುತ್ತದೆ.

ಇದನ್ನೂ ಓದಿ

Health Tips: ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿದ್ರೆ ಸಿಗುವ ಪ್ರಯೋಜನಗಳೇನು ಗೊತ್ತಾ?

Health Tips: ಈ ಹಣ್ಣು, ತರಕಾರಿಗಳ ಸಿಪ್ಪೆಯನ್ನು ಎಂದಿಗೂ ಎಸೆಯಬೇಡಿ

(Which is the best rice for good health)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ