AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೆಂಗಳೂರಿನಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚುತ್ತಿರುವುದೇಕೆ? ತಜ್ಞರು ಹೇಳುವುದೇನು?

ಬೆಂಗಳೂರಿನಲ್ಲಿ ಟೈಫಾಯಿಡ್, ವೈರಲ್ ಹೆಪಟೈಟಿಸ್, ಅತಿಸಾರದಂತಹ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ನಿರಂತರವಾಗಿ ಹೆಚ್ಚುತ್ತಿವೆ. ಳೆದ ನಾಲ್ಕು ತಿಂಗಳಲ್ಲಿ 60,100 ಕ್ಕೂ ಹೆಚ್ಚು ಜನರು ಕರುಳಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬಹುತೇಕ ಜನರಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ವರದಿಯಾಗುತ್ತಿವೆ. ಬೆಂಗಳೂರಿನಲ್ಲಿಈ ರೀತಿ ಪ್ರಕರಣಗಳು ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Health Tips: ಬೆಂಗಳೂರಿನಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚುತ್ತಿರುವುದೇಕೆ? ತಜ್ಞರು ಹೇಳುವುದೇನು?
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: May 22, 2024 | 8:23 PM

ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನಲ್ಲಿ ಟೈಫಾಯಿಡ್, ವೈರಲ್ ಹೆಪಟೈಟಿಸ್, ಅತಿಸಾರದಂತಹ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ನಿರಂತರವಾಗಿ ಹೆಚ್ಚುತ್ತಿವೆ. ಎಡಿಡಿ (ತೀವ್ರ ಅತಿಸಾರ) 4500 ಕ್ಕೂ ಹೆಚ್ಚು ಜನರಲ್ಲಿ ಪತ್ತೆಯಾಗಿದೆ. ಅಲ್ಲದೆ, ಕಳೆದ ನಾಲ್ಕು ತಿಂಗಳಲ್ಲಿ 60,100 ಕ್ಕೂ ಹೆಚ್ಚು ಜನರು ಕರುಳಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬಹುತೇಕ ಜನರಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ವರದಿಯಾಗುತ್ತಿವೆ. ಬೆಂಗಳೂರಿನಲ್ಲಿಈ ರೀತಿ ಪ್ರಕರಣಗಳು ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಹವಾಮಾನ ಬದಲಾವಣೆ ಮತ್ತು ಹೆಚ್ಚುತ್ತಿರುವ ಶಾಖದಿಂದಾಗಿ ಈ ರೀತಿಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ತಜ್ಞರು ಹೇಳುತ್ತಾರೆ. ಪ್ರಸ್ತುತ, ಈ ಋತುವಿನಲ್ಲಿ ಅತಿಸಾರದ ಪ್ರಕರಣಗಳು ಹೆಚ್ಚಾಗುತ್ತಿದೆ. ಕಲುಷಿತ ನೀರನ್ನು ಕುಡಿಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಡಾ. ಜುಗಲ್ ಕಿಶೋರ್ ಅವರು ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚಾಗುತ್ತವೆ ಎಂದು ಹೇಳುತ್ತಾರೆ. ನಿರ್ಜಲೀಕರಣ, ಹೊಟ್ಟೆಯಲ್ಲಿ ಸೋಂಕು, ವಾಂತಿ ಮತ್ತು ಅತಿಸಾರದಂತಹ ಸಮಸ್ಯೆಗಳು ಕಂಡುಬರುವುದು ಸಾಮಾನ್ಯವಾಗಿದೆ.

ಬೆಂಗಳೂರಿನಲ್ಲಿ ಏಕೆ ಪ್ರಕರಣಗಳು ಹೆಚ್ಚುತ್ತಿವೆ?

ಬೆಂಗಳೂರಿನಲ್ಲಿ ಈ ರೀತಿ ಪ್ರಕರಣಗಳು ಹೆಚ್ಚಾಗಲು ಅನೇಕ ಕಾರಣಗಳಿರಬಹುದು. ಜನರು ಕುಡಿಯುತ್ತಿರುವ ನೀರು, ಸೇವನೆ ಮಾಡುತ್ತಿರುವ ಆಹಾರ, ಇವೆಲ್ಲವೂ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಲುಷಿತ ನೀರನ್ನು ಕುಡಿಯುತ್ತಿದ್ದರೆ ಅತಿಸಾರ, ಟೈಫಾಯಿಡ್ ಮತ್ತು ಹೆಪಟೈಟಿಸ್ ಅಪಾಯ ಹೆಚ್ಚಾಗುತ್ತದೆ. ವಾಂತಿ ಮತ್ತು ಅತಿಸಾರದಂತಹ ಪ್ರಕರಣಗಳು ಹೆಚ್ಚಾಗುತ್ತದೆ. ಇದು ದೇಹದಲ್ಲಿ ನೀರಿನ ಕೊರತೆಯನ್ನು ಉಂಟುಮಾಡುತ್ತದೆ. ಹೆಪಟೈಟಿಸ್ ಕಾಯಿಲೆ ಅಪಾಯಕಾಯಾಗಿದ್ದು, ಇದು ಯಕೃತ್ತಿನ ಹಾನಿಗೆ ಕಾರಣವಾಗಬಹುದು.

ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳ ಲಕ್ಷಣಗಳು?

  • ಅತಿಸಾರ, ವಾಕರಿಕೆ ಮತ್ತು ವಾಂತಿ
  • ಹೊಟ್ಟೆಯಲ್ಲಿ ಸೆಳೆತ
  • ಹೊಟ್ಟೆ ನೋವು
  • ಅಜೀರ್ಣ

ಹೇಗೆ ರಕ್ಷಿಸಿಕೊಳ್ಳುವುದು?

  • ನೀರನ್ನು ಕುದಿಸಿ ಕುಡಿಯಿರಿ
  • ಏನನ್ನಾದರೂ ತಿನ್ನುವ ಮೊದಲು ಕೈಗಳನ್ನು ತೊಳೆಯಿರಿ
  • ಮನೆಯನ್ನು ಸ್ವಚ್ಛವಾಗಿರಿಸಿಕೊಳ್ಳಿ
  • ಆದಷ್ಟು ಹೊರಗೆ ಊಟ ಮಾಡಬೇಡಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ