AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿರಿಯಡ್ಸ್ ಸಮಯದಲ್ಲಿ ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಎಷ್ಟು ಮುಖ್ಯ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಸ್ಯಾನಿಟರಿ ಪ್ಯಾಡ್‌ಗಳು ಲಭ್ಯವಿದೆ. ಅಂತಹ ಸಮಯದಲ್ಲಿ, ವೈಯಕ್ತಿಕ ನೈರ್ಮಲ್ಯ ಮತ್ತು ಚರ್ಮದ ರಕ್ಷಣೆಗೆ ಸರಿಯಾದ ಸ್ಯಾನಿಟರಿ ಪ್ಯಾಡ್ ಅನ್ನು ಆಯ್ಕೆ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಅದರಲ್ಲಿಯೂ ಇತ್ತೀಚಿಗೆ ಬಹಳ ಚರ್ಚೆಯಲ್ಲಿರುವ ಮೋರಿಂಗಾ ಪ್ಯಾಡ್‌ ಬಳಕೆಗೆ ಉತ್ತಮೋ, ಅಲ್ಲವೋ? ಎಂಬುದರ ಬಗ್ಗೆ ಹಲವರಿಗೆ ಗೊಂದಲವಿದೆ. ಹಾಗಾಗಿ ಯಾವ ರೀತಿಯ ಪ್ಯಾಡ್ ಬಳಸಬೇಕು, ಏನಿದು ಮೋರಿಂಗಾ ಪ್ಯಾಡ್‌, ಇದು ನಿಜವಾಗಿಯೂ ಉಪಯೋಗಕಾರಿಯೇ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಉತ್ತಮ.

ಪಿರಿಯಡ್ಸ್ ಸಮಯದಲ್ಲಿ ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಎಷ್ಟು ಮುಖ್ಯ ಗೊತ್ತಾ?
Sanitary PadImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 27, 2026 | 7:53 PM

Share

ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಪಿರಿಯಡ್ಸ್ (Periods) ಹೈಜೀನ್ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಈಗ ಮಹಿಳೆಯರು ತಾವು ಬಳಸುವ ಪ್ಯಾಡ್‌ನ ಗುಣಮಟ್ಟ ಮತ್ತು ಅದು ಚರ್ಮದ ಮೇಲೆ ಬೀರುವ ಪರಿಣಾಮಗಳತ್ತವೂ ಹೆಚ್ಚು ಗಮನ ಹರಿಸುತ್ತಿದ್ದಾರೆ. ತಜ್ಞರ ಪ್ರಕಾರ, ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡದಿದ್ದರೆ ಚರ್ಮದ ಸಮಸ್ಯೆಗಳು ಮತ್ತು ಸೋಂಕಿನ ಅಪಾಯ ಹೆಚ್ಚಾಗಬಹುದು. ವೈದ್ಯರು ನೀಡುವ ಮಾಹಿತಿ ಪ್ರಕಾರ, ಸ್ಯಾನಿಟರಿ ಪ್ಯಾಡ್‌ನ ಮೇಲಿನ ಪದರ ದೇಹದ ಸೂಕ್ಷ್ಮ ಭಾಗದೊಂದಿಗೆ ನೇರ ಸಂಪರ್ಕದಲ್ಲಿರುತ್ತದೆ. ಪ್ಯಾಡ್‌ನಲ್ಲಿ ಹೆಚ್ಚು ಸುಗಂಧ ದ್ರವ್ಯಗಳು ಅಥವಾ ಹಾನಿಕಾರಕ ರಾಸಾಯನಿಕಗಳು ಇದ್ದರೆ ಚರ್ಮದಲ್ಲಿ ಉರಿ, ಕೆಂಪು ದದ್ದುಗಳು ಮತ್ತು ಅಲರ್ಜಿ ಸಮಸ್ಯೆಗಳು ಕಾಣಿಸಬಹುದು. ವಿಶೇಷವಾಗಿ ಬೇಸಿಗೆ ಮತ್ತು ತೇವಾಂಶ ಇರುವ ವಾತಾವರಣದಲ್ಲಿ ದೀರ್ಘಕಾಲ ಒಂದೇ ಪ್ಯಾಡ್ ಬಳಸುವುದರಿಂದ ಬ್ಯಾಕ್ಟೀರಿಯಾ ಹಾಗೂ ಫಂಗಲ್ ಇನ್‌ಫೆಕ್ಷನ್ ಅಪಾಯ ಹೆಚ್ಚಾಗುತ್ತದೆ. ಹಾಗಾದರೆ ಯಾವ ರೀತಿಯ ಪ್ಯಾಡ್ ಬಳಸಬೇಕು, ಏನಿದು ಮೋರಿಂಗಾ ಪ್ಯಾಡ್‌, ಇದು ನಿಜವಾಗಿಯೂ ಉಪಯೋಗಕಾರಿಯೇ ಎಂಬುದನ್ನು ತಿಳಿದುಕೊಳ್ಳಿ.

ಯಾವ ರೀತಿಯ ಪ್ಯಾಡ್ ಬಳಸಬೇಕು?

ತಜ್ಞರು, ಮಹಿಳೆಯರಿಗೆ ಮೃದುವಾದ, ಗಾಳಿಯಾಡುವ ಮತ್ತು ಚರ್ಮ ಸ್ನೇಹಿ ಪ್ಯಾಡ್‌ಗಳನ್ನು ಬಳಸುವಂತೆ ಸಲಹೆ ನೀಡುತ್ತಾರೆ. ಹೆಚ್ಚು ಸುಗಂಧವಿರುವ ಪ್ಯಾಡ್‌ಗಳನ್ನು ಬಳಸದಿರುವುದು ಉತ್ತಮ ಎಂದು ಹೇಳಿದ್ದಾರೆ. ಜೊತೆಗೆ ಪ್ರತಿ 4ರಿಂದ 6 ಗಂಟೆಗಳಿಗೊಮ್ಮೆ ಪ್ಯಾಡ್ ಬದಲಾಯಿಸುವುದು ಆರೋಗ್ಯದ ದೃಷ್ಟಿಯಿಂದ ಅಗತ್ಯವಾಗಿದೆ. ಹೆಚ್ಚು ಬೆವರು ಅಥವಾ ಚರ್ಮದ ಸಮಸ್ಯೆ ಇರುವಂತಹ ಮಹಿಳೆಯರಿಗೆ ಕಾಟನ್ ಆಧಾರಿತ ಪ್ಯಾಡ್‌ಗಳು ಅಥವಾ ಕಾಟನ್ ಪ್ಯಾಂಟಿ ಉತ್ತಮ ಆಯ್ಕೆ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಋತುಚಕ್ರದ ಸಮಯದಲ್ಲಿ ಈ ಆಹಾರಗಳನ್ನು ಕಡ್ಡಾಯವಾಗಿ ಸೇವಿಸಬೇಕು!

ಮೋರಿಂಗಾ ಪ್ಯಾಡ್‌ ನಿಜವಾಗಿಯೂ ಉಪಯೋಗಕಾರಿಯೇ?

ಇತ್ತೀಚೆಗೆ ಮೋರಿಂಗಾ ಆಧಾರಿತ ಸ್ಯಾನಿಟರಿ ಪ್ಯಾಡ್‌ಗಳು ಗಮನ ಸೆಳೆಯುತ್ತಿವೆ. ಮೋರಿಂಗಾದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿ ಕಡಿಮೆ ಮಾಡುವ ಗುಣಗಳಿರುವುದರಿಂದ ಚರ್ಮದ ಸಮಸ್ಯೆ ಹಾಗೂ ದುರ್ಗಂಧ ಕಡಿಮೆ ಮಾಡಲು ಸಹಾಯಕವಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಮಹಿಳೆಯರ ಆರೋಗ್ಯಕ್ಕೆ ಪೀರಿಯಡ್ಸ್ ಹೈಜೀನ್ ಅತ್ಯಂತ ಮುಖ್ಯ. ಆದ್ದರಿಂದ ಗುಣಮಟ್ಟದ ಮತ್ತು ಸುರಕ್ಷಿತ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಆರೋಗ್ಯ ಕಾಪಾಡುವ ಪ್ರಮುಖ ಹೆಜ್ಜೆಯಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!