AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ಟಿಲು ಹತ್ತಿ ಇಳಿಯುವುದರಿಂದ ಎಷ್ಟು ಉಪಯೋಗ ಇದೆ ಅಂತ ತಿಳಿದ್ರೆ ನೀವು ಲಿಫ್ಟ್ ಬಳಸುವುದೇ ಇಲ್ಲ…

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ಸವಾಲಾಗಿ ಪರಿಣಮಿಸಿದೆ. ಹೆಸರೇ ಕೇಳಿರದ ಕಾಯಿಲೆಗಳು ಜನರನ್ನು ಕಾಡುತ್ತಿದೆ. ಆದರೆ ಇದರಿಂದ ಮುಕ್ತಿ ಪಡೆಯಲು ವೈದ್ಯರ ಬಳಿ ಅಥವಾ ಜಿಮ್‌ಗಳಿಗೆ ಹೋಗುವ ಅವಶ್ಯಕತೆ ಇಲ್ಲ. ಪ್ರತಿನಿತ್ಯ ವಾಕಿಂಗ್ ಅಥವಾ ಜಾಗಿಂಗ್ ಮಾಡಬೇಕಾಗಿಯೂ ಇಲ್ಲ. ಕೇವಲ ನಿಮ್ಮ ಮನೆಯ ಮೆಟ್ಟಿಲುಗಳನ್ನು 6 ನಿಮಿಷ ಹತ್ತಿ ಇಳಿದರೆ ಸಾಕು ನಿಮ್ಮ ಎಲ್ಲಾ ಆರೋಗ್ಯ ಸಮಸ್ಯೆಗೂ ಬಾಯ್ ಬಾಯ್ ಹೇಳಬಹುದು. ಹೌದು, ಕೇವಲ ಮೆಟ್ಟಿಲು ಹತ್ತಿ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಮೆಟ್ಟಿಲು ಹತ್ತಿ ಇಳಿಯುವುದರಿಂದ ಎಷ್ಟು ಉಪಯೋಗ ಇದೆ ಅಂತ ತಿಳಿದ್ರೆ ನೀವು ಲಿಫ್ಟ್ ಬಳಸುವುದೇ ಇಲ್ಲ...
Stair Workout
ಪ್ರೀತಿ ಭಟ್​, ಗುಣವಂತೆ
|

Updated on: Dec 17, 2025 | 6:20 PM

Share

ಇಂದಿನ ವೇಗದ ಜೀವನದಲ್ಲಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಒಂದು ಸವಾಲಾಗಿದೆ. ಜನರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಮಧುಮೇಹ (diabetes), ತೂಕ ಹೆಚ್ಚಾಗುವುದು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚುತ್ತಿದೆ. ಅದರಲ್ಲಿಯೂ ಬೊಜ್ಜು (obesity) ಅನೇಕರಲ್ಲಿ ಕಾಡುತ್ತಿರುವ ಸಮಸ್ಯೆಯಾಗಿದೆ. ಹಾಗಾಗಿ ಅನೇಕರು ಜಿಮ್‌ಗಳಿಗೆ ಸೇರುತ್ತಿದ್ದಾರೆ, ಇದು ಆರೋಗ್ಯವಾಗಿರಲು ಸಹಾಯ ಮಾಡುತ್ತದೆಯಾದರೂ ಸಾಕಷ್ಟು ಹಣ ಖರ್ಚಾಗುತ್ತದೆ. ಅದರ ಜೊತೆಗೆ ವಿವಿಧ ರೀತಿಯ ಆಹಾರ ಪದ್ಧತಿಗಳನ್ನು ಅನುಸರಿಸಬೇಕಾಗುತ್ತದೆ. ಆದರೆ ನಿಮ್ಮ ಮನೆಯಲ್ಲಿರುವ ಮೆಟ್ಟಿಲು ಹತ್ತುವುದರಿಂದ (Climbing Stairs) ಒಂದು ರೂಪಾಯಿಯ ಖರ್ಚಿಲ್ಲದೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರೆ ನಂಬುತ್ತೀರಾ… ಹೌದು, ಮನೆಯಲ್ಲಿರುವ ಮೆಟ್ಟಿಲುಗಳು ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ. ಹಾಗಾದರೆ ಮೆಟ್ಟಿಲು ಹತ್ತುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ಸ್ಟೋರಿ ಮೂಲಕ ತಿಳಿದುಕೊಳ್ಳಿ.

6 ನಿಮಿಷ ಮೆಟ್ಟಿಲು ಹತ್ತುವುದರಿಂದ ಸಿಗುವ ಪ್ರಯೋಜನ:

ಮೆಟ್ಟಿಲು ಹತ್ತುವುದರಿಂದ ದೇಹಕ್ಕೆ ಅದ್ಭುತವಾದ ಆರೋಗ್ಯ ಪ್ರಯೋಜನಗಳು ಸಿಗುತ್ತದೆ. ದೇಹದ ಶಕ್ತಿಯನ್ನು ಹೆಚ್ಚಿಸುವುದು, ಕೊಬ್ಬನ್ನು ಕಡಿಮೆ ಮಾಡುವುದು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುವಂತಹ ಹಲವಾರು ಉಪಯೋಗಗಳು ಈ ಒಂದು ಚಟುವಟಿಕೆಯಿಂದ ಸಿಗುತ್ತದೆ. ನಿಯಮಿತ ವಾಕಿಂಗ್ ಅಥವಾ ಜಾಗಿಂಗ್ ಗಿಂತ ಮೆಟ್ಟಿಲುಗಳನ್ನು ಹತ್ತುವುದು ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಸಂಶೋಧನೆಯೂ ಸೂಚಿಸುತ್ತದೆ. 6 ನಿಮಿಷಗಳ ಕಾಲ ನಿರಂತರವಾಗಿ ಮೆಟ್ಟಿಲುಗಳನ್ನು ಹತ್ತುವುದರಿಂದ ದೇಹದ ಒಟ್ಟು ಕೊಬ್ಬಿನ ಶೇಕಡಾ 15 ರಷ್ಟು ಕಡಿಮೆಯಾಗುತ್ತದೆ. ವಿಶೇಷ ವ್ಯಾಯಾಮದ ಅಗತ್ಯವಿಲ್ಲದೆಯೇ ಮೆಟ್ಟಿಲುಗಳನ್ನು ಹತ್ತುವುದರ ಮೂಲಕ ನೀವು ಸುಲಭವಾಗಿ ಕೊಬ್ಬನ್ನು ಕರಗಿಸಬಹುದು. ಇದು ಕಡಿಮೆ ಸಮಯದಲ್ಲಿ ಬಹಳಷ್ಟು ಕ್ಯಾಲೊರಿಗಳನ್ನು ಬರ್ನ್ ಮಾಡುವ ಮೂಲಕ ತೂಕವನ್ನು ತ್ವರಿತವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಹೊಟ್ಟೆ ಬೊಜ್ಜು ಏನ್ ಮಾಡಿದ್ರೂ ಕಡಿಮೆ ಆಗಲ್ಲ ಅಂದ್ರೆ ಈ ಬೀಜಗಳಿಂದ ಚಹಾ ಮಾಡಿ ಕುಡಿಯಿರಿ

30 ನಿಮಿಷಗಳ ಕಾಲ ಮೆಟ್ಟಿಲುಗಳನ್ನು ಹತ್ತುವುದರಿಂದ 250- 300 ಕ್ಯಾಲೊರಿಗಳು ಬರ್ನ್ ಆಗುತ್ತದೆ. ಈ ಅಭ್ಯಾಸವನ್ನು ಪ್ರತಿನಿತ್ಯ ರೂಢಿಸಿಕೊಳ್ಳುವುದರಿಂದ ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಕಾಲು, ಸೊಂಟ, ಕ್ವಾಡ್ರೆಸ್ ಮತ್ತು ಕರು ಸ್ನಾಯುಗಳನ್ನು ಕೂಡ ಬಲಪಡಿಸುತ್ತದೆ. ಇಂದಿನ ಕಾರ್ಯನಿರತ ಜೀವನದಲ್ಲಿ, ಸರಿಯಾದ ದೈಹಿಕ ವ್ಯಾಯಾಮಕ್ಕಾಗಿ ಸಮಯವನ್ನು ಮೀಸಲಿಡಲು ಸಾಧ್ಯವಾಗದಿರುವವರು ದೈನಂದಿನ ಚಟುವಟಿಕೆಗಳಲ್ಲಿ ಮೆಟ್ಟಿಲುಗಳಿಗೆ ಆದ್ಯತೆ ನೀಡುವುದರಿಂದ ದೇಹಕ್ಕೆ ಉತ್ತಮ ಪ್ರಯೋಜನಗಳನ್ನು ಪಡೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು