AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾನ ಮಾಡಿದ ತಕ್ಷಣ ಬೆವರುತ್ತೀರಾ? ಇದಕ್ಕೆ ಪರಿಹಾರವೇನು?

ಸ್ನಾನ ಮಾಡಿದ ನಂತರ ತಕ್ಷಣವೇ ನಿಮ್ಮ ಮೈಯನ್ನು ಟವೆಲ್​ನಿಂದ ಒರೆಸಿಕೊಳ್ಳುವುದರಿಂದ ಬೆವರುವಿಕೆಯನ್ನು ತಪ್ಪಿಸಬಹುದು ಎಂದು ನೀವು ಭಾವಿಸಬಹುದು. ಆದರೆ, ಅದು ಬೇರೆ ರೀತಿಯಲ್ಲಿ ಕೆಲಸ ಮಾಡಬಹುದು. ಹಾಗಾದರೆ, ಸ್ನಾನವಾದ ತಕ್ಷಣ ಬೆವರುವುದನ್ನು ತಡೆಯಲು ಏನು ಮಾಡಬೇಕು?

ಸ್ನಾನ ಮಾಡಿದ ತಕ್ಷಣ ಬೆವರುತ್ತೀರಾ? ಇದಕ್ಕೆ ಪರಿಹಾರವೇನು?
ಸ್ನಾನImage Credit source: iStock
ಸುಷ್ಮಾ ಚಕ್ರೆ
|

Updated on: Oct 11, 2023 | 7:12 PM

Share

ಆರಾಮಾಗಿ ಸ್ನಾನ ಮಾಡಿಕೊಂಡು, ರಿಫ್ರೆಶ್ ಆಗಬೇಕೆಂದು ಬಾತ್​ರೂಮಿಗೆ ಹೋಗಿ ಮನಸಿಗೆ ನೆಮ್ಮದಿಯಾಗುವಷ್ಟು ಹೊತ್ತು ಸ್ನಾನ ಮಾಡಿಕೊಂಡು ಬರುತ್ತೀರಿ. ಆದರೆ, ಅಷ್ಟರಲ್ಲಾಗಲೆ ನಿಮ್ಮ ಮೈ ಬೆವರಲು ಶುರುವಾಗುತ್ತದೆ. ಸ್ನಾನ ಮಾಡಿದ ಕೆಲವೇ ಹೊತ್ತಿನಲ್ಲಿ ಮತ್ತೆ ದೇಹದಿಂದ ಬೆವರಿನ ವಾಸನೆ ಬರಲಾರಂಭಿಸಿ, ನಿಮಗೇ ಕಿರಿಕಿರಿಯಾಗತೊಡಗುತ್ತದೆ. ಈ ರೀತಿಯಾದಾಗ ಏನು ಮಾಡಬೇಕು? ಸ್ನಾನ ಮಾಡಿದ ಕೂಡಲೆ ಮೈ ಬೆವರಲು ಕಾರಣವೇನು? ಈ ಬಗ್ಗೆ ಮಾಹಿತಿ ಇಲ್ಲಿದೆ.

ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುವಾಗ ನೀರಿನಿಂದ ಬೆಚ್ಚಗಿನ ಆವಿಗಳು ಬಾತ್​ರೂಮಿನಲ್ಲಿ ತಾಪಮಾನ ಮತ್ತು ತೇವಾಂಶದ ಏರಿಕೆಗೆ ಕಾರಣವಾಗುತ್ತವೆ. ಇದು ನಿಮ್ಮ ದೇಹದ ಉಷ್ಣತೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಮೈ ಬೆವರತೊಡಗುತ್ತದೆ.

ಇದನ್ನೂ ಓದಿ: Sweating: ಈ ಬೇಸಿಗೆಯಲ್ಲಿ ಅತಿಯಾಗಿ ಬೆವರುವುದನ್ನು ತಡೆಗಟ್ಟುವುದು ಹೇಗೆ? ಇಲ್ಲಿದೆ ಸಲಹೆ

ಸ್ನಾನ ಮಾಡಿದ ನಂತರ ತಕ್ಷಣವೇ ನಿಮ್ಮ ಮೈಯನ್ನು ಟವೆಲ್​ನಿಂದ ಒರೆಸಿಕೊಳ್ಳುವುದರಿಂದ ಬೆವರುವಿಕೆಯನ್ನು ತಪ್ಪಿಸಬಹುದು ಎಂದು ನೀವು ಭಾವಿಸಬಹುದು. ಆದರೆ, ಅದು ಬೇರೆ ರೀತಿಯಲ್ಲಿ ಕೆಲಸ ಮಾಡಬಹುದು. ನಿಮ್ಮ ಚರ್ಮದ ಮೇಲೆ ಟವೆಲ್​ ಅನ್ನು ಉಜ್ಜಿದಾಗ ಉಂಟಾಗುವ ಘರ್ಷಣೆಯ ಶಾಖವು ನಿಮಗೆ ಇನ್ನಷ್ಟು ಬಿಸಿ ಉಂಟುಮಾಡಬಹುದು. ಇದು ಹೆಚ್ಚು ಬೆವರುವಿಕೆಯನ್ನು ಉಂಟುಮಾಡುತ್ತದೆ.

ಸ್ನಾನದ ನಂತರ ಬೆವರುವುದನ್ನು ತಡೆಯಲು ಏನು ಮಾಡಬೇಕು?:

ಸ್ನಾನದ ನಂತರ ಬೆವರುವಿಕೆಯನ್ನು ತಡೆಯಲು ನೀವು ಮೊದಲು ಬಿಸಿಬಿಸಿಯಾದ ನೀರಿನಿಂದ ಸ್ನಾನ ಮಾಡಿದರೂ ಕೊನೆಯಲ್ಲಿ ಸ್ವಲ್ಪ ತಣ್ಣಗಿನ ನೀರನ್ನು ಬಿಡಬೇಕು. ಇದರಿಂದ ಬಾತ್​ರೂಂನ ತಾಪಮಾನಕ್ಕೆ ನಿಮ್ಮ ದೇಹ ಹೊಂದಿಕೊಳ್ಳುತ್ತದೆ. ಬಾತ್​ರೂಂನಲ್ಲಿ ತುಂಬಿದ್ದ ಬಿಸಿ ತಾಪಮಾನ ಕೂಡ ಕಡಿಮೆಯಾಗುತ್ತದೆ. ಹಾಗೇ, ತಲೆಸ್ನಾನ ಮಾಡುವಾಗ ಕೊನೆಯಲ್ಲಿ ನಿಮ್ಮ ನೆತ್ತಿಯ ಮೇಲೆ ಸ್ವಲ್ಪ ತಣ್ಣೀರನ್ನು ಹಾಕಿಕೊಳ್ಳಿ. ಇದು ನಿಮ್ಮ ದೇಹವನ್ನು ಬೆವರು ಮಾಡುವುದನ್ನು ತಡೆಯುವುದು ಮಾತ್ರವಲ್ಲದೆ ನಿಮ್ಮ ಕೂದಲನ್ನು ಮೃದುವಾಗಿಸುತ್ತದೆ. ಹಾಗೇ, ನಿಮ್ಮ ಬಾತ್​ರೂಂನಲ್ಲಿ ಎಕ್ಸಾಸ್ಟರ್ ಫ್ಯಾನ್ ಹಾಕಲು ಮರೆಯಬೇಡಿ. ಇದರಿಂದ ಬಾತ್​ರೂಂನೊಳಗಿನ ಬಿಸಿ ಗಾಳಿ ಹೊರಗೆ ಹೋಗಿ, ಮೈ ಬೆವರುವಿಕೆ ಕೂಡ ಕಡಿಮೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್