AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾನ ಮಾಡಿದ ತಕ್ಷಣ ಬೆವರುತ್ತೀರಾ? ಇದಕ್ಕೆ ಪರಿಹಾರವೇನು?

ಸ್ನಾನ ಮಾಡಿದ ನಂತರ ತಕ್ಷಣವೇ ನಿಮ್ಮ ಮೈಯನ್ನು ಟವೆಲ್​ನಿಂದ ಒರೆಸಿಕೊಳ್ಳುವುದರಿಂದ ಬೆವರುವಿಕೆಯನ್ನು ತಪ್ಪಿಸಬಹುದು ಎಂದು ನೀವು ಭಾವಿಸಬಹುದು. ಆದರೆ, ಅದು ಬೇರೆ ರೀತಿಯಲ್ಲಿ ಕೆಲಸ ಮಾಡಬಹುದು. ಹಾಗಾದರೆ, ಸ್ನಾನವಾದ ತಕ್ಷಣ ಬೆವರುವುದನ್ನು ತಡೆಯಲು ಏನು ಮಾಡಬೇಕು?

ಸ್ನಾನ ಮಾಡಿದ ತಕ್ಷಣ ಬೆವರುತ್ತೀರಾ? ಇದಕ್ಕೆ ಪರಿಹಾರವೇನು?
ಸ್ನಾನImage Credit source: iStock
ಸುಷ್ಮಾ ಚಕ್ರೆ
|

Updated on: Oct 11, 2023 | 7:12 PM

Share

ಆರಾಮಾಗಿ ಸ್ನಾನ ಮಾಡಿಕೊಂಡು, ರಿಫ್ರೆಶ್ ಆಗಬೇಕೆಂದು ಬಾತ್​ರೂಮಿಗೆ ಹೋಗಿ ಮನಸಿಗೆ ನೆಮ್ಮದಿಯಾಗುವಷ್ಟು ಹೊತ್ತು ಸ್ನಾನ ಮಾಡಿಕೊಂಡು ಬರುತ್ತೀರಿ. ಆದರೆ, ಅಷ್ಟರಲ್ಲಾಗಲೆ ನಿಮ್ಮ ಮೈ ಬೆವರಲು ಶುರುವಾಗುತ್ತದೆ. ಸ್ನಾನ ಮಾಡಿದ ಕೆಲವೇ ಹೊತ್ತಿನಲ್ಲಿ ಮತ್ತೆ ದೇಹದಿಂದ ಬೆವರಿನ ವಾಸನೆ ಬರಲಾರಂಭಿಸಿ, ನಿಮಗೇ ಕಿರಿಕಿರಿಯಾಗತೊಡಗುತ್ತದೆ. ಈ ರೀತಿಯಾದಾಗ ಏನು ಮಾಡಬೇಕು? ಸ್ನಾನ ಮಾಡಿದ ಕೂಡಲೆ ಮೈ ಬೆವರಲು ಕಾರಣವೇನು? ಈ ಬಗ್ಗೆ ಮಾಹಿತಿ ಇಲ್ಲಿದೆ.

ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುವಾಗ ನೀರಿನಿಂದ ಬೆಚ್ಚಗಿನ ಆವಿಗಳು ಬಾತ್​ರೂಮಿನಲ್ಲಿ ತಾಪಮಾನ ಮತ್ತು ತೇವಾಂಶದ ಏರಿಕೆಗೆ ಕಾರಣವಾಗುತ್ತವೆ. ಇದು ನಿಮ್ಮ ದೇಹದ ಉಷ್ಣತೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಮೈ ಬೆವರತೊಡಗುತ್ತದೆ.

ಇದನ್ನೂ ಓದಿ: Sweating: ಈ ಬೇಸಿಗೆಯಲ್ಲಿ ಅತಿಯಾಗಿ ಬೆವರುವುದನ್ನು ತಡೆಗಟ್ಟುವುದು ಹೇಗೆ? ಇಲ್ಲಿದೆ ಸಲಹೆ

ಸ್ನಾನ ಮಾಡಿದ ನಂತರ ತಕ್ಷಣವೇ ನಿಮ್ಮ ಮೈಯನ್ನು ಟವೆಲ್​ನಿಂದ ಒರೆಸಿಕೊಳ್ಳುವುದರಿಂದ ಬೆವರುವಿಕೆಯನ್ನು ತಪ್ಪಿಸಬಹುದು ಎಂದು ನೀವು ಭಾವಿಸಬಹುದು. ಆದರೆ, ಅದು ಬೇರೆ ರೀತಿಯಲ್ಲಿ ಕೆಲಸ ಮಾಡಬಹುದು. ನಿಮ್ಮ ಚರ್ಮದ ಮೇಲೆ ಟವೆಲ್​ ಅನ್ನು ಉಜ್ಜಿದಾಗ ಉಂಟಾಗುವ ಘರ್ಷಣೆಯ ಶಾಖವು ನಿಮಗೆ ಇನ್ನಷ್ಟು ಬಿಸಿ ಉಂಟುಮಾಡಬಹುದು. ಇದು ಹೆಚ್ಚು ಬೆವರುವಿಕೆಯನ್ನು ಉಂಟುಮಾಡುತ್ತದೆ.

ಸ್ನಾನದ ನಂತರ ಬೆವರುವುದನ್ನು ತಡೆಯಲು ಏನು ಮಾಡಬೇಕು?:

ಸ್ನಾನದ ನಂತರ ಬೆವರುವಿಕೆಯನ್ನು ತಡೆಯಲು ನೀವು ಮೊದಲು ಬಿಸಿಬಿಸಿಯಾದ ನೀರಿನಿಂದ ಸ್ನಾನ ಮಾಡಿದರೂ ಕೊನೆಯಲ್ಲಿ ಸ್ವಲ್ಪ ತಣ್ಣಗಿನ ನೀರನ್ನು ಬಿಡಬೇಕು. ಇದರಿಂದ ಬಾತ್​ರೂಂನ ತಾಪಮಾನಕ್ಕೆ ನಿಮ್ಮ ದೇಹ ಹೊಂದಿಕೊಳ್ಳುತ್ತದೆ. ಬಾತ್​ರೂಂನಲ್ಲಿ ತುಂಬಿದ್ದ ಬಿಸಿ ತಾಪಮಾನ ಕೂಡ ಕಡಿಮೆಯಾಗುತ್ತದೆ. ಹಾಗೇ, ತಲೆಸ್ನಾನ ಮಾಡುವಾಗ ಕೊನೆಯಲ್ಲಿ ನಿಮ್ಮ ನೆತ್ತಿಯ ಮೇಲೆ ಸ್ವಲ್ಪ ತಣ್ಣೀರನ್ನು ಹಾಕಿಕೊಳ್ಳಿ. ಇದು ನಿಮ್ಮ ದೇಹವನ್ನು ಬೆವರು ಮಾಡುವುದನ್ನು ತಡೆಯುವುದು ಮಾತ್ರವಲ್ಲದೆ ನಿಮ್ಮ ಕೂದಲನ್ನು ಮೃದುವಾಗಿಸುತ್ತದೆ. ಹಾಗೇ, ನಿಮ್ಮ ಬಾತ್​ರೂಂನಲ್ಲಿ ಎಕ್ಸಾಸ್ಟರ್ ಫ್ಯಾನ್ ಹಾಕಲು ಮರೆಯಬೇಡಿ. ಇದರಿಂದ ಬಾತ್​ರೂಂನೊಳಗಿನ ಬಿಸಿ ಗಾಳಿ ಹೊರಗೆ ಹೋಗಿ, ಮೈ ಬೆವರುವಿಕೆ ಕೂಡ ಕಡಿಮೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ