AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಶ್ ಮಾಡಿದ ಅಕ್ಕಿ ಬಳಕೆ ಮಾಡುವುದು ನಿಜಕ್ಕೂ ಇಷ್ಟೊಂದು ಅಪಾಯಕಾರಿಯೇ….

ನೀವು ದಿನನಿತ್ಯ ಇಷ್ಟ ಪಟ್ಟು ಬಳಕೆ ಮಾಡುವ ಅಕ್ಕಿಯನ್ನು ಯಂತ್ರಗಳಲ್ಲಿ ಹಲವಾರು ಬಾರಿ ಪಾಲಿಶ್ ಮಾಡಲಾಗುತ್ತದೆ. ಇದರಿಂದ ಅಕ್ಕಿಯ ಮೇಲಿನ ಸಿಪ್ಪೆ ಸಂಪೂರ್ಣವಾಗಿ ತೆಗೆದು ಹೋಗಿ ಅಕ್ಕಿ ಬಿಳಿಯಾಗಿ ಹೊಳೆಯುವಂತಾಗುತ್ತದೆ. ನೋಡುವುದಕ್ಕೆ ಈ ಅಕ್ಕಿ ಚೆಂದವಾಗಿ ಕಾಣುತ್ತದೆ ಆದರೆ ತಜ್ಞರು ಹೇಳುವಂತೆ ಈ ರೀತಿಯ ಪಾಲಿಶ್ ಮಾಡಿದ ಅಕ್ಕಿಯನ್ನು ತಿನ್ನುವುದು ಒಳ್ಳೆಯದಲ್ಲ ಇದು ಆರೋಗ್ಯ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ. ಹಾಗಾದರೆ ಪಾಲಿಶ್ ಮಾಡಿದ ಅಕ್ಕಿ ಸೇವನೆಯಿಂದ ಯಾವ ರೀತಿಯ ಸಮಸ್ಯೆಗಳಾಗುತ್ತದೆ? ಯಾಕೆ ಸೇವನೆ ಮಾಡಬಾರದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪಾಲಿಶ್ ಮಾಡಿದ ಅಕ್ಕಿ ಬಳಕೆ ಮಾಡುವುದು ನಿಜಕ್ಕೂ ಇಷ್ಟೊಂದು ಅಪಾಯಕಾರಿಯೇ....
ಪಾಲಿಶ್ ಅಕ್ಕಿ ಬಳಕೆಯ ಅಡ್ಡಪರಿಣಾಮ
ಪ್ರೀತಿ ಭಟ್​, ಗುಣವಂತೆ
|

Updated on: Nov 26, 2025 | 4:01 PM

Share

ಇತ್ತೀಚಿನ ದಿನಗಳಲ್ಲಿ ಪಾಲಿಶ್ ಮಾಡಿದ ಅಕ್ಕಿ (Polished Rice) ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನೀವು ದಿನನಿತ್ಯ ಇಷ್ಟ ಪಟ್ಟು ತಿನ್ನುವ ಅಕ್ಕಿಯನ್ನು ಯಂತ್ರಗಳಲ್ಲಿ ಹಲವಾರು ಬಾರಿ ಪಾಲಿಶ್ ಮಾಡಲಾಗುತ್ತದೆ. ಇದರಿಂದಲೇ ಅಕ್ಕಿ (Rice) ಬಿಳಿಯಾಗಿ ಹೊಳೆಯುವಂತೆ ಕಾಣುತ್ತದೆ. ಆದರೆ ಆರೋಗ್ಯ ತಜ್ಞರು ಇಂತಹ ಪಾಲಿಶ್ ಮಾಡಿದ ಅಕ್ಕಿಯನ್ನು ಪ್ರತಿನಿತ್ಯ ಸೇವನೆ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ. ಮೊದಲೆಲ್ಲಾ ಅಕ್ಕಿ ಕೆಂಪಾಗಿರುತ್ತಿದ್ದು ಅವುಗಳ ಸೇವನೆ ಮಾಡುವ ವ್ಯಕ್ತಿ ಕೂಡ ಆರೋಗ್ಯವಂತನಾಗಿರುತ್ತಿದ್ದ ಆದರೆ ಈಗ ಹಾಗಲ್ಲ. ಅನಾರೋಗ್ಯ ಇಲ್ಲದ, ಆರೋಗ್ಯವಂತ ವ್ಯಕ್ತಿಯನ್ನು ಹುಡುಕುವುದೇ ಬಲು ಕಷ್ಟ ಎನಿಸಿದೆ. ಹಾಗಾದರೆ ಪಾಲಿಶ್ ಮಾಡಿದ ಅಕ್ಕಿ ಸೇವನೆಯಿಂದ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪಾಲಿಶ್ ಅಕ್ಕಿ ಬಳಕೆಯ ಅಡ್ಡಪರಿಣಾಮ:

ಪಾಲಿಶ್ ಮಾಡಿದ ಅಕ್ಕಿ ಸೇವನೆ ಮಾಡುವುದರಿಂದ ದೇಹಕ್ಕೆ ಅಗತ್ಯವಿರುವಷ್ಟು ವಿಟಮಿನ್ ಬಿ1 (ಥಯಾಮಿನ್) ದೊರೆಯುವುದಿಲ್ಲ. ಇದು ಬೆರಿಬೆರಿ ಕಾಯಿಲೆಗೆ ಕಾರಣವಾಗಬಹುದು, ಮಾತ್ರವಲ್ಲ, ನರಮಂಡಲ ಮತ್ತು ಹೃದಯ ಸಂಬಂಧಿ ಕಾರ್ಯಗಳನ್ನು ಕೂಡ ನಿಧಾನಗೊಳಿಸುತ್ತದೆ. ಅದರಲ್ಲಿಯೂ ಈ ಅಕ್ಕಿಯಲ್ಲಿ ಕಾರ್ಬೋಹೈಡ್ರೇಟ್‌ಗಳು ಅಧಿಕವಾಗಿದ್ದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ, ಅಜೀರ್ಣ, ಉಬ್ಬುವುದು ಸೇರಿದಂತೆ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಪಾಲಿಶ್ ಮಾಡಿದ ಅನ್ನವನ್ನು ಸೇವನೆ ಮಾಡುವುದರಿಂದ ಹಸಿವು ಹೆಚ್ಚಾಗುತ್ತದೆ. ಆದರೆ ಇದರಲ್ಲಿ ನಾರಿನಾಂಶದ ಕೊರತೆ ಇರುವುದರಿಂದ ನೀವು ಎಷ್ಟೇ ತಿಂದರೂ, ಹೊಟ್ಟೆ ತುಂಬುವುದಿಲ್ಲ. ಹಾಗಾಗಿ ಹಸಿವಿಗೆ ಕಾರಣವಾಗುತ್ತದೆ. ಪರಿಣಾಮವಾಗಿ, ಜನರು ಜಂಕ್ ಫುಡ್ ಸೇವನೆ ಮಾಡುವ ಮೂಲಕ ತೂಕ ಹೆಚ್ಚಿಸಿಕೊಳ್ಳುತ್ತಾರೆ ಇದಲ್ಲದೆ, ಪಾಲಿಶ್ ಮಾಡಿದ ಅಕ್ಕಿಯಲ್ಲಿ ಪೋಷಕಾಂಶಗಳು ಕಡಿಮೆ ಇರುತ್ತದೆ ಇದರಿಂದ ಮೂತ್ರಪಿಂಡಗಳಿಗೆ ಸರಿಯಾದ ಪೋಷಣೆ ಸಿಗುವುದಿಲ್ಲ. ಅಷ್ಟೇ ಅಲ್ಲ ಇವುಗಳ ನಿಯಮಿತ ಸೇವನೆಯಿಂದ ಕೈ ಕಾಲುಗಳಲ್ಲಿ ಮರಗಟ್ಟುವಿಕೆ ಉಂಟಾಗುತ್ತದೆ. ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಈ ರೀತಿಯ ಪೋಷಣೆಯ ಕೊರತೆ ಒತ್ತಡ ಮತ್ತು ಆತಂಕಕ್ಕೆ ಕಾರಣವಾಗಬಹುದು. ಅತಿಯಾಗಿ ಪಾಲಿಶ್ ಮಾಡಿದ ಅಕ್ಕಿ ತಿನ್ನುವುದರಿಂದ ಉಸಿರಾಟದ ತೊಂದರೆಯೂ ಉಂಟಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು