AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಕೈ ಕಾಲು ಮರಗಟ್ಟುವಿಕೆಗೆ ನರದ ಸಮಸ್ಯೆ ಕಾರಣವೇ; ಈ ಬಗ್ಗೆ ತಜ್ಞರು ಏನನ್ನುತ್ತಾರೆ

ಚಳಿಗಾಲದಲ್ಲಿ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟಿದ ಅನುಭವವಾಗುತ್ತಾ? ಇದಕ್ಕೆ ಚಳಿ ಕಾರಣವೋ ಅಥವಾ ಇದು ನರಗಳ ಸಮಸ್ಯೆಯ ಆರಂಭಿಕ ಲಕ್ಷಣವೋ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಈ ಬಗ್ಗೆ ಡಾ. ಸುಭಾಷ್ ಗಿರಿ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು ಈ ಸಮಸ್ಯೆಗೆ ಕಾರಣವೇನು? ಈ ರೀತಿಯಾಗುವುದನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ತಿಳಿಸಿದ್ದಾರೆ. ನಿಮಗೂ ಈ ರೀತಿಯಾಗುತ್ತಿದ್ದು, ನಿರ್ಲಕ್ಷ್ಯ ಮಾಡುತ್ತಿದ್ದರೆ ಈ ಸ್ಟೋರಿಯಲ್ಲಿ ನೀಡಲಾದ ಸಲಹೆಗಳನ್ನು ಪಾಲಿಸಿ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ.

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಕೈ ಕಾಲು ಮರಗಟ್ಟುವಿಕೆಗೆ ನರದ ಸಮಸ್ಯೆ ಕಾರಣವೇ; ಈ ಬಗ್ಗೆ ತಜ್ಞರು ಏನನ್ನುತ್ತಾರೆ
Hands, Feet Numbness
ಪ್ರೀತಿ ಭಟ್​, ಗುಣವಂತೆ
|

Updated on: Dec 23, 2025 | 6:26 PM

Share

ಚಳಿಗಾಲದಲ್ಲಿ (Winter), ಅನೇಕರ ಕೈ, ಕಾಲು ಮರಗಟ್ಟುತ್ತದೆ (Hands & Feet Numbness). ಈ ರೀತಿಯಾಗುವುದು ಚಳಿಗೋ ಅಥವಾ ನರ (Nerve) ಸಮಸ್ಯೆಯ ಆರಂಭಿಕ ಲಕ್ಷಣವೋ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಸಾಮಾನ್ಯವಾಗಿ ಚಳಿ ಹೆಚ್ಚಾದಂತೆ, ಕೈಕಾಲುಗಳು ತಣ್ಣಗಾಗುವುದು, ಜುಮ್ಮೆನಿಸುವಿಕೆ ಮತ್ತು ಮರಗಟ್ಟುವಿಕೆ ಮುಂತಾದ ಸಮಸ್ಯೆಗಳು ಕಂಡುಬರುತ್ತದೆ. ಅದರಲ್ಲಿಯೂ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಈ ರೀತಿಯಾಗುತ್ತದೆ. ಆದರೆ ಕೆಲವರು ಇದನ್ನು ಚಳಿಯಿಂದ ಆಗುತ್ತದೆ ಎಂದು ತಿಳಿದುಕೊಂಡು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರು ಇದು ನರ ಸಂಬಂಧಿತ ಸಮಸ್ಯೆಯ ಆರಂಭಿಕ ಲಕ್ಷಣವಾಗಿರಬಹುದು ಎನ್ನುತ್ತಾರೆ. ಹಾಗಾದರೆ ಇದನ್ನು ಕಂಡು ಹಿಡಿಯುವುದು ಹೇಗೆ, ಈ ಸಮಸ್ಯೆಯನ್ನು ತಡೆಯಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಕೈಕಾಲುಗಳು ಮರಗಟ್ಟುವುದಕ್ಕೆ ಕಾರಣವೇನು?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಡಾ. ಸುಭಾಷ್ ಗಿರಿ ಅವರ ಪ್ರಕಾರ, ಚಳಿಗಾಲದಲ್ಲಿ ಕೈಕಾಲುಗಳು ಮರಗಟ್ಟುವುದು ದೇಹದ ಸಾಮಾನ್ಯ ಪ್ರಕ್ರಿಯೆ. ಹೃದಯ ಮತ್ತು ಮೆದುಳಿನಂತಹ ಅಗತ್ಯ ಅಂಗಗಳನ್ನು ರಕ್ಷಿಸಲು ದೇಹವು ಕೈಕಾಲುಗಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ. ಅದಕ್ಕಾಗಿಯೇ ಕೈ ಬೆರಳು ಮತ್ತು ಪಾದಗಳು ಜುಮ್ಮೆನಿಸುತ್ತದೆ ಕೆಲವರಲ್ಲಿ ಮರಗಟ್ಟಿದ ಅನುಭವವಾಗುತ್ತದೆ. ಇಂತಹ ಸಮಯದಲ್ಲಿ ಕೈಕಾಲುಗಳನ್ನು ಬೆಚ್ಚಗಾಗಿಸುವ ಮೂಲಕ, ಕೈಗವಸುಗಳನ್ನು ಧರಿಸುವ ಮೂಲಕ ಅಥವಾ ಸ್ವಲ್ಪ ಸಮಯ ವಿಶ್ರಾಂತಿ ಪಡೆಯುವ ಮೂಲಕ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಆದರೆ ಈ ರೀತಿ ಪದೇ ಪದೇ ಆಗುತ್ತಿದ್ದರೆ ಅಥವಾ ಚಳಿ ಇಲ್ಲದ ಸಮಯದಲ್ಲಿ ಕಂಡುಬಂದರೆ ಇದು ನರ ಸಮಸ್ಯೆಯ ಆರಂಭಿಕ ಲಕ್ಷಣವಾಗಿರಬಹುದು. ಇದರ ಜೊತೆಗೆ, ಸುಡುವ ಸಂವೇದನೆ, ನೋವು, ದೌರ್ಬಲ್ಯ ಅಥವಾ ನಡೆಯಲು ಅಥವಾ ವಸ್ತುಗಳನ್ನು ಹಿಡಿದಿಡಲು ತೊಂದರೆಯಾಗುವುದು ನರ ಸಂಬಂಧಿತ ಸಮಸ್ಯೆಯನ್ನು ಸೂಚಿಸುತ್ತದೆ. ವಿಟಮಿನ್ ಬಿ 12 ಕೊರತೆ, ಮಧುಮೇಹ, ಒಂದೇ ಸ್ಥಾನದಲ್ಲಿ ದೀರ್ಘಕಾಲ ಕುಳಿತುಕೊಳ್ಳುವುದು ಅಥವಾ ನರಗಳ ಮೇಲಿನ ಒತ್ತಡವು ಕೂಡ ಇದಕ್ಕೆ ಕಾರಣಗಳಾಗಿರಬಹುದು. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ, ಸಮಯಕ್ಕೆ ಸರಿಯಾಗಿ ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ: ಚಳಿಗಾಲದಲ್ಲಿ ಇತರರಿಗಿಂತ ತುಸು ಹೆಚ್ಚೆ ನಿಮ್ಗೆ ಚಳಿಯಾಗುತ್ತಾ? ಇದಕ್ಕೆ ಈ ವಿಟಮಿನ್ ಕೊರತೆಯೇ ಕಾರಣ

ಕೈಕಾಲುಗಳು ಮರಗಟ್ಟುವುದನ್ನು ತಡೆಯಲು ಸಲಹೆ:

  • ಕೈ ಮತ್ತು ಪಾದಗಳನ್ನು ಚೆಚ್ಚಗಿಟ್ಟುಕೊಳ್ಳಿ.
  • ಆಗಾಗ ಕೈ ಮತ್ತು ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ಬೆಚ್ಚಗಾಗಿಸಿ.
  • ಚಳಿ ಅಥವಾ ಗಾಳಿ ಹೆಚ್ಚಾಗಿ ಕಂಡುಬರುವ ಜಾಗದಲ್ಲಿ ಹೆಚ್ಚುಹೊತ್ತು ಇರುವುದನ್ನು ತಪ್ಪಿಸಿ.
  • ಸಮತೋಲಿತ ಆಹಾರವನ್ನು ಸೇವಿಸಿ, ವಿಶೇಷವಾಗಿ ವಿಟಮಿನ್ ಬಿ 12 ಸಮೃದ್ಧವಾಗಿರುವ ಆಹಾರಗಳನ್ನು ಸೇವನೆ ಮಾಡಿ.
  • ಲಘು ವ್ಯಾಯಾಮ ಮತ್ತು ಸ್ಟ್ರೆಚಿಂಗ್ ಮಾಡಿ.
  • ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!