AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಅಥವಾ ನಸುಕಿನಲ್ಲಿಯೇ ಹೃದಯಾಘಾತ ಸಂಭವಿಸಲು ಕಾರಣವೇನು? ಈ ಜಾಗ್ರತೆ ವಹಿಸಿ, ಗಂಡಾಂತರ ದೂರ ಮಾಡಿಕೊಳೀ

ರಾತ್ರಿಯಲ್ಲಿ ನಿದ್ರೆಯಿಂದ ಮೂತ್ರ ವಿಸರ್ಜನೆ ಅಥವಾ ಯಾವುದೇ ಕಾರಣಕ್ಕೆ ಆಕಸ್ಮಿಕವಾಗಿ ಎದ್ದಾಗ ಆ ವೇಳೆಯಲ್ಲಿ ನಾವು 3 ರಿಂದ 4 ನಿಮಿಷ ಜಾಗ್ರತೆ ವಹಿಸಿದರೆ ಆಕಸ್ಮಿಕ ಮೃತ್ಯುವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದು.

ರಾತ್ರಿ ಅಥವಾ ನಸುಕಿನಲ್ಲಿಯೇ ಹೃದಯಾಘಾತ ಸಂಭವಿಸಲು ಕಾರಣವೇನು? ಈ ಜಾಗ್ರತೆ ವಹಿಸಿ, ಗಂಡಾಂತರ ದೂರ ಮಾಡಿಕೊಳೀ
ರಾತ್ರಿ ಅಥವಾ ನಸುಕಿನಲ್ಲಿಯೇ ಹೃದಯಾಘಾತ ಸಂಭವಿಸಲು ಕಾರಣವೇನು ಗೊತ್ತಾ?
TV9 Web
| Updated By: ಸಾಧು ಶ್ರೀನಾಥ್​|

Updated on:Sep 05, 2022 | 8:17 PM

Share

ನಾವು ಸುದ್ದಿ ಮಾಧ್ಯಮಗಳಲ್ಲಿ ಎಷ್ಟೋ ಸಲ ಕೇಳ್ತೇವೆ ಚಿಕ್ಕ ವಯಸ್ಸಿನ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಎಂದು. ಅಷ್ಟೇ ಏಕೆ ನಮ್ಮ ಸುತ್ತಮುತ್ತಲೂ ಇಂತಹ ಅನೇಕ ಸಂಗತಿಗಳನ್ನು ಕೇಳುತ್ತೇವೆ. ಜೊತೆಗೆ ಕೆಲವರಂತೂ ತಪ್ಪದೆ ಜಿಮ್ ಗೆ ಹೋಗುವವರೂ, ದೈಹಿಕ ಕಸರತ್ತು ನಿಯಮಿತವಾಗಿ ಮಾಡುವವರೂ ಮರಣ ಹೊಂದಿದ್ದಾರೆ. ಹಾಗಾದರೆ ಇದರಿಂದ ಬಚಾವಾಗಲು ಬರೀ ಮೂರರಿಂದ ನಾಲ್ಕು ನಿಮಿಷದಲ್ಲಿ ಜಾಗ್ರತೆ ವಹಿಸಿದರೆ ಸಾಕು. ಡಾಕ್ಟರುಗಳ ಪ್ರಕಾರ ಯಾರು ನಸುಕಿನಲ್ಲಿ ಮತ್ತು ನಿದ್ರೆಯಿಂದ ಎದ್ದು ಮೂತ್ರ ವಿಸರ್ಜನೆಗೆ ಹೋಗುತ್ತಾರೆ ಅವರ ಸಲುವಾಗಿ ಅತೀ ಮುಖ್ಯವಾದ ಸೂಚನೆ ಇಲ್ಲಿದೆ.

ರಾತ್ರಿಯಲ್ಲಿ ನಿದ್ರೆಯಿಂದ ಮೂತ್ರ ವಿಸರ್ಜನೆ ಅಥವಾ ಯಾವುದೇ ಕಾರಣಕ್ಕೆ ಆಕಸ್ಮಿಕವಾಗಿ ಎದ್ದಾಗ ಆ ವೇಳೆಯಲ್ಲಿ ನಾವು 3 ರಿಂದ 4 ನಿಮಿಷ ಜಾಗ್ರತೆ ವಹಿಸಿದರೆ ಆಕಸ್ಮಿಕ ಮೃತ್ಯುವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದು.

ಶಾರೀರಿಕ ದೃಷ್ಟಿಯಿಂದ ಸದೃಢವಾದ ವ್ಯಕ್ತಿಯೇ ರಾತ್ರಿ ಸಮಯದಲ್ಲಿ ಮರಣ ಹೊಂದಿದ್ದಾನೆ. ಇಂತಹ ವ್ಯಕ್ತಿಗಳ ಬಗ್ಗೆ ನಾವು ಎಷ್ಟೋ ಸಲ ಮಾತಾಡುತ್ತೇವೆ ಅಯ್ಯೋ ಈತನಿಗೆ ನಾನು ನಿನ್ನೆ ಮಾತಾಡಿಸಿದ್ದೇ, ನಿನ್ನೆ ಚೆನ್ನಾಗಿದ್ದ ಒಮ್ಮೆಲೇ ಏನಾಯ್ತು? ಇದು ಸಾಧ್ಯವೇ ಇಲ್ಲ. ಅಂತೆಲ್ಲ ಮಾತಾಡ್ತೇವೆ. ಇದಕ್ಕೆಲ್ಲ ಮುಖ್ಯ ಕಾರಣ ರಾತ್ರಿ ನಿದ್ರೆಯಿಂದ ಮೂತ್ರ ವಿಸರ್ಜನೆಗೆ ಲಗುಬಗೆಯಿಂದ ಎದ್ದು ಓಡುವುದು. ಗಾಢ ನಿದ್ರೆಯಿಂದ ಒಮ್ಮೆಲೇ ಏಳುವದರಿಂದ ಮೆದುಳಿಗೆ ರಕ್ತ ಸಂಚಲನ ಸರಿಯಾಗಿ ಆಗುವುದಿಲ್ಲ.

ಈಗ ಮೇಲೆ ಹೇಳಿದ ಪ್ರಕಾರ ಈ ಸಮಯದಲ್ಲಿ ನಾಲ್ಕು ನಿಮಿಷ ಬಹಳ ಪ್ರಾಮುಖ್ಯವಾಗುತ್ತದೆ. ಗಾಢ ನಿದ್ರೆಯಿಂದ ತತ್ತತಕ್ಷಣವಾಗಿ ಹಾಸಿಗೆಯಿಂದ ಏಳುವದರಿಂದ ಶರೀರದ ಇಸಿಜಿಯ ಪ್ಯಾಟರ್ನ್ ಒಮ್ಮೆಲೇ ಚೇಂಜ್ ಆಗಿಬಿಡುತ್ತದೆ. ಇದು ಅಪಾಯಕಾರಿ.

ಇದರಿಂದ ಮೆದುಳಿಗೆ ರಕ್ತ ಸಂಚಾರ ಒಮ್ಮೆಲೇ ಹರಿಯುವದಿಲ್ಲ. ಇದರಿಂದ ಹೃದಯಕ್ಕೆ ಆಘಾತವಾಗುವುದು. ಆದ್ದರಿಂದ ಬಚಾವಾಗಲು ನಾಲ್ಕು ನಿಮಿಷದ ಒಳ್ಳೆಯ ಉಪಾಯ ಮತ್ತು ರೂಢಿ ಅನುಸರಿಸಿದರೆ ತುಂಬಾ ಒಳ್ಳೆಯದು.

1) *ನಿದ್ರೆಯಿಂದ ಎಚ್ಚರವಾದಾಗ ಹಾಗೆಯೇ ಒಂದು ನಿಮಿಷ ಹಾಸಿಗೆಯಲ್ಲಿಯೇ ಮಲಗಿರಿ

2) *ಮುಂದಿನ ಅರ್ಧ ನಿಮಿಷ ಅಥವಾ ಒಂದು ನಿಮಿಷ ಹಾಸಿಗೆಯಲ್ಲಿಯೇ ಕುಳಿತುಕೊಳ್ಳಿ

3) *ಆನಂತರ ಮುಂದಿನ ಎರಡು ನಿಮಿಷ ಪಲ್ಲಂಗದ ಮೇಲಿನಿಂದ ಕಾಲುಗಳನ್ನು ಕೆಳಗೆ ಬಿಟ್ಟು ಕುಳಿತುಕೊಳ್ಳಿ (ಸಂಗ್ರಹ ಮಾಹಿತಿ)

Published On - 8:16 pm, Mon, 5 September 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!