AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಾನವಾಗಿ ನಡೆಯುವುದಕ್ಕೂ ಕಿವಿ ಸರಿಯಾಗಿ ಕೇಳಿಸದಿರುವುದಕ್ಕೂ ಸಂಬಂಧವಿದೆಯೇ?

ನಿಮ್ಮ ಸುತ್ತಮುತ್ತಲಿರುವ ಅನೇಕರು ನಿಧಾನವಾಗಿ ನಡೆಯುವುದನ್ನು ಗಮನಿಸಿರಬಹುದು. ಈ ರೀತಿಯಾಗುವುದನ್ನು ಕೆಲವರು ವಯಸ್ಸಾದ ಪರಿಣಾಮ ಅಥವಾ ಮೊಣಕಾಲಿನ ಸಮಸ್ಯೆ ಎಂದುಕೊಳ್ಳುತ್ತಾರೆ. ಆದರೆ ಸಂಶೋಧನೆ ಹೇಳುವ ಪ್ರಕಾರ, ಶ್ರವಣದೋಷ ಕೂಡ ನಿಧಾನವಾಗಿ ನಡೆಯುವುದಕ್ಕೆ ಒಂದು ಕಾರಣವಾಗಬಹುದು. ಹೌದು, ಕೇಳುವುದಕ್ಕೆ ಸ್ವಲ್ಪ ಆಶ್ಚರ್ಯವಾದರೂ ಕೂಡ ಇದು ಸತ್ಯ. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ಇಂತಹ ಸಮಸ್ಯೆಗಳನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿಧಾನವಾಗಿ ನಡೆಯುವುದಕ್ಕೂ ಕಿವಿ ಸರಿಯಾಗಿ ಕೇಳಿಸದಿರುವುದಕ್ಕೂ ಸಂಬಂಧವಿದೆಯೇ?
Hearing Loss Slow WalkingImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 12, 2026 | 7:36 PM

Share

ಬಹಳ ಮಂದಿ ಕೇಳುವ ಶಕ್ತಿ ಕಡಿಮೆಯಾಗುವುದು ಅಥವಾ ಕಿವಿ ಸರಿಯಾಗಿ ಕೇಳಿಸದಿರುವುದು (Hearing Loss) ಕೇವಲ ಕಿವಿಗೆ ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಕೇಳುವ ಶಕ್ತಿ ಕಡಿಮೆಯಾಗುವುದು ದೇಹದ ಸಮತೋಲನ, ನಡೆಯುವ ವೇಗ ಮತ್ತು ದೈನಂದಿನ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತದೆ. ವಿಶೇಷವಾಗಿ ವಯೋವೃದ್ಧರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಹೈದರಾಬಾದ್‌ನ ಯಶೋದ ಆಸ್ಪತ್ರೆಯ ಎಂಡೋಸ್ಕೋಪಿಕ್ ಇ ಎನ್ ಟಿ ಸ್ಪೆಷಲಿಸ್ಟ್ ಡಾ. ಕೆವಿಎಸ್‌ಎಸ್‌ಆರ್‌ಕೆ ಶಾಸ್ತ್ರಿ ಅವರು ಹೇಳುವ ಪ್ರಕಾರ, ಕಿವಿಯ ಒಳಭಾಗದಲ್ಲಿರುವ ಸಮತೋಲನ ವ್ಯವಸ್ಥೆ (Inner Ear Balance System) ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ದೇಹದ ಚಲನೆ ಮತ್ತು ಬ್ಯಾಲೆನ್ಸ್ ಮೇಲೆ ಪರಿಣಾಮ ಬೀಳುತ್ತದೆ ಎಂದಿದ್ದಾರೆ.

ಕೇಳುವ ಶಕ್ತಿ ಕಡಿಮೆಯಾದರೆ ಏನೆಲ್ಲಾ ಆಗುತ್ತದೆ?

ಸಮತೋಲನ ಕಳೆದುಕೊಳ್ಳುವ ಸಾಧ್ಯತೆ: ನಮ್ಮ ಒಳಕಿವಿಯಲ್ಲಿ ದೇಹದ ಸಮತೋಲನ ಕಾಪಾಡುವ ವಿಶೇಷ ವ್ಯವಸ್ಥೆ ಇರುತ್ತದೆ. ಕೇಳುವ ಶಕ್ತಿ ಕಡಿಮೆಯಾದಾಗ ಸುತ್ತಮುತ್ತಲಿನ ಪರಿಸರದ ಅರಿವು ಕಡಿಮೆಯಾಗುತ್ತದೆ. ಇದರಿಂದ ನಡೆಯುವಾಗ ತಡಕಾಡುವುದು, ಕೆಳಗೆ ಬೀಳುವ ಅಪಾಯ ಹೆಚ್ಚಾಗುತ್ತದೆ.

ಮೆದುಳಿನ ಮೇಲೆ ಹೆಚ್ಚುವರಿ ಒತ್ತಡ: ಸ್ಪಷ್ಟವಾಗಿ ಕೇಳಿಸದಿದ್ದರೆ ಎದುರಿನವರ ಮಾತು ಅರ್ಥಮಾಡಿಕೊಳ್ಳಲು ಮೆದುಳು ಹೆಚ್ಚು ಕೆಲಸ ಮಾಡಬೇಕು. ಇದರಿಂದ ಮಾನಸಿಕ ಹಾಗೂ ದೈಹಿಕ ದಣಿವು ಉಂಟಾಗುತ್ತದೆ. ಕ್ರಮೇಣ ಇದು ಆತ್ಮವಿಶ್ವಾಸ ಮತ್ತು ದೈಹಿಕ ಚಟುವಟಿಕೆಗಳನ್ನೂ ಕಡಿಮೆ ಮಾಡುತ್ತದೆ.

ನಿಷ್ಕ್ರಿಯ ಜೀವನಶೈಲಿ: ಕೇಳುವ ಸಮಸ್ಯೆಯಿಂದ ಕೆಲವರು ಜನರು ಇರುವ ಕಡೆ ಹೋಗುವುದನ್ನೇ ನಿಲ್ಲಿಸುತ್ತಾರೆ. ಇದರಿಂದ ದೈಹಿಕ ಚಟುವಟಿಕೆ ಕಡಿಮೆಯಾಗುತ್ತದೆ. ಪರಿಣಾಮವಾಗಿ ಸ್ನಾಯುಗಳು ಮತ್ತು ಸಂಧಿಗಳು ದುರ್ಬಲವಾಗಿ ನಡೆಯುವ ವೇಗ ನಿಧಾನಗೊಳ್ಳುತ್ತದೆ.

ಇದನ್ನೂ ಓದಿ: ಪ್ರತಿದಿನ ನೀವೂ ಕೂಡ ಈ ತಪ್ಪುಗಳನ್ನು ಮಾಡುತ್ತಿದ್ದರೆ ಕಿವಿ ಕೇಳಿಸದಿರಬಹುದು ಎಚ್ಚರ!

ನಡೆಯುವ ವೇಗವೂ ಆರೋಗ್ಯದ ಸೂಚನೆ:

ತಜ್ಞರ ಪ್ರಕಾರ, ಒಬ್ಬ ವ್ಯಕ್ತಿ ಎಷ್ಟು ವೇಗವಾಗಿ ನಡೆಯುತ್ತಾನೆ ಎಂಬುದು ಮೆದುಳು, ನರಮಂಡಲ, ಹೃದಯ ಮತ್ತು ಶ್ವಾಸಕೋಶಗಳ ಕಾರ್ಯಕ್ಷಮತೆಯ ಸೂಚಕವಾಗಿದೆ. ಸಂಶೋಧನೆಗಳ ಪ್ರಕಾರ, ಕೇಳುವ ಶಕ್ತಿ ಕಡಿಮೆಯಿರುವವರು ಸಾಮಾನ್ಯರಿಗಿಂತ ನಿಧಾನವಾಗಿ ನಡೆಯುವ ಸಾಧ್ಯತೆ ಹೆಚ್ಚು. ಜಾನ್ಸ್ ಹಾಪ್ಕಿನ್ಸ್ ಅಧ್ಯಯನದ ಪ್ರಕಾರ, ಸಣ್ಣ ಮಟ್ಟಿನ ಕೇಳುವ ಶಕ್ತಿ ಕುಂದಿದವರಲ್ಲಿಯೂ ಕೆಳಗೆ ಬೀಳುವ ಅಪಾಯ ಮೂರು ಪಟ್ಟು ಹೆಚ್ಚಿರುತ್ತದೆ. ಕೇಳುವ ಶಕ್ತಿ ಇನ್ನಷ್ಟು ಕುಂದಿದಂತೆ ಈ ಅಪಾಯವೂ ಹೆಚ್ಚಾಗುತ್ತದೆ.

ಸಮಸ್ಯೆಯನ್ನು ತಡೆಗಟ್ಟಲು ಏನು ಮಾಡಬೇಕು?

  • ನಿಯಮಿತವಾಗಿ ಕಿವಿ ಪರೀಕ್ಷೆ ಮಾಡಿಸಿಕೊಳ್ಳಿ
  • ಅಗತ್ಯವಿದ್ದರೆ ಹಿಯರಿಂಗ್ ಏಡ್ಸ್ ಬಳಸಿರಿ
  • ಹೆಚ್ಚು ಶಬ್ದ ಇರುವ ಸ್ಥಳಗಳಿಂದ ದೂರವಿರಿ
  • ದೈಹಿಕವಾಗಿ ಚುರುಕಾಗಿ ಇರಿ
  • ಸಮತೋಲನ ವ್ಯಾಯಾಮಗಳನ್ನು ಮಾಡಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್