AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲೇಕೆ ಕಿಡ್ನಿಸ್ಟೋನ್ ಹೆಚ್ಚಾಗಿ ಕಂಡುಬರುತ್ತದೆ? ವೈದ್ಯರು ನೀಡಿದ ಪ್ರಮುಖ ಕಾರಣ ಇಲ್ಲಿದೆ

Kidney Stone Cause: ಚಳಿಗಾಲದಲ್ಲಿ ವಿವಿಧ ರೀತಿಯ ಕಾಯಿಲೆಗಳು ಕಂಡುಬರುವುದು ಸಾಮಾನ್ಯ. ಅದರಲ್ಲಿಯೂ ಕಿಡ್ನಿಸ್ಟೋನ್ ಅಪಾಯವೂ ತುಸು ಹೆಚ್ಚೆ ಇರುತ್ತದೆ. ಹಾಗಾಗಿ ಈ ವಿಷಯದಲ್ಲಿ ಜಾಗರೂಕರಾಗಿರುವುದು ಬಹಳ ಒಳ್ಳೆಯದು. ಆದರೆ ಈ ಸಮಸ್ಯೆಗೆ ಕಂಡುಬರುವುದಕ್ಕೆ ಅದರಲ್ಲಿಯೂ ಈ ಸಮಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುದಕ್ಕೆ ಹಲವಾರು ನಿರ್ದಿಷ್ಟ ಕಾರಣಗಳಿವೆ. ಹೌದು, ಈ ಬಗ್ಗೆ ಡಾ. ಹಿಮಾಂಶು ಶರ್ಮಾ ಎಂಬುವವರು ಮಾಹಿತಿ ನೀಡಿದ್ದು, ಈ ರೀತಿಯಾಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ವಿವರಣೆ ನೀಡಿದ್ದಾರೆ.

ಚಳಿಗಾಲದಲ್ಲೇಕೆ ಕಿಡ್ನಿಸ್ಟೋನ್ ಹೆಚ್ಚಾಗಿ ಕಂಡುಬರುತ್ತದೆ? ವೈದ್ಯರು ನೀಡಿದ ಪ್ರಮುಖ ಕಾರಣ ಇಲ್ಲಿದೆ
ಚಳಿಗಾಲದಲ್ಲಿ ಕಿಡ್ನಿಸ್ಟೋನ್ ಕಂಡುಬರುವುದಕ್ಕೆ ಕಾರಣ
ಪ್ರೀತಿ ಭಟ್​, ಗುಣವಂತೆ
|

Updated on: Nov 27, 2025 | 3:03 PM

Share

ಇತ್ತೀಚಿನ ದಿನಗಳಲ್ಲಿ, ಕಿಡ್ನಿಸ್ಟೋನ್ (Kidney Stone) ಒಂದು ಪ್ರಮುಖ ಸಮಸ್ಯೆಯಾಗಿದೆ. ಮೂತ್ರಪಿಂಡದಲ್ಲಿ ಸಂಗ್ರಹವಾದ ಖನಿಜಗಳು ಸೇರಿ ಹರಳುಗಳನ್ನು ರೂಪಿಸಿದಾಗ, ಅದನ್ನು ಮೂತ್ರಪಿಂಡದ ಕಲ್ಲು ಅಥವಾ ಕಿಡ್ನಿಸ್ಟೋನ್ ಎಂದು ಕರೆಯಲಾಗುತ್ತದೆ. ಇವು ಮೂತ್ರನಾಳದ ಮೂಲಕ ಹಾದುಹೋಗುವಾಗ, ತೀವ್ರವಾದ ನೋವು, ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿ ಮತ್ತು ಇತರ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಅದರಲ್ಲಿಯೂ ಈ ರೀತಿಯ ಸಮಸ್ಯೆ ಚಳಿಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಈ ಬಗ್ಗೆ ಡಾ. ಹಿಮಾಂಶು ಶರ್ಮಾ (Dr. Himashu Sharma) ಎಂಬುವವರು ಮಾಹಿತಿ ನೀಡಿದ್ದು, ಈ ರೀತಿಯಾಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ವಿವರಣೆ ನೀಡಿದ್ದಾರೆ.

ನೀರಿನ ಕೊರತೆ: ಚಳಿಗಾಲದಲ್ಲಿ, ಹೆಚ್ಚಿನವರು ನೀರು ಕುಡಿಯುವುದನ್ನು ಕಡಿಮೆ ಮಾಡುತ್ತಾರೆ. ಇದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಪರಿಣಾಮವಾಗಿ, ಖನಿಜಗಳು ಮತ್ತು ಲವಣಗಳು ಮೂತ್ರದಲ್ಲಿ ಸಂಗ್ರಹವಾಗಿ ಕಿಡ್ನಿಸ್ಟೋನ್ ಸಾಧ್ಯತೆ ಹೆಚ್ಚಾಗುತ್ತದೆ.

ದೈಹಿಕ ಚಟುವಟಿಕೆ: ಚಳಿಗಾಲದಲ್ಲಿ, ವ್ಯಾಯಾಮ, ನಡಿಗೆ ಮಾಡುವವರ ಸಂಖ್ಯೆ ಕಡಿಮೆಯಾಗುತ್ತದೆ. ಪರಿಣಾಮವಾಗಿ, ದೇಹದಲ್ಲಿನ ಕ್ಯಾಲ್ಸಿಯಂ ಮಟ್ಟವು ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ, ಮೂತ್ರಪಿಂಡಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದು ಕಿಡ್ನಿಸ್ಟೋನ್ ರಚನೆಗೆ ಕಾರಣವಾಗುತ್ತದೆ.

ಕೊಬ್ಬಿನಾಂಶವಿರುವ ಆಹಾರಗಳು: ಚಳಿಗಾಲದಲ್ಲಿ, ಜನರು ಹೆಚ್ಚೆಚ್ಚು ಆಹಾರವನ್ನು ಸೇವಿಸುತ್ತಾರೆ. ಈ ರೀತಿ ಹುರಿದ, ಎಣ್ಣೆಯುಕ್ತ ಮತ್ತು ಉಪ್ಪಿನ ಅಂಶವಿರುವ ಆಹಾರ ಸೇವನೆಯ ಪ್ರಮಾಣ ಹೆಚ್ಚಾದಾಗ ಕಿಡ್ನಿಸ್ಟೋನ್ ಪ್ರಕರಣ ಕಂಡುಬರುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲೇಕೆ ಕ್ಯಾಪ್ಸಿಕಂ ಅನ್ನು ಹೆಚ್ಚೆಚ್ಚು ಸೇವಿಸಬೇಕು? ಇದರ ಹಿಂದಿದೆ ಮಹತ್ವದ ಕಾರಣ

ಕಿಡ್ನಿಸ್ಟೋನ್ ಲಕ್ಷಣಗಳು

  • ತೀವ್ರ ಹೊಟ್ಟೆ ನೋವು
  • ಪಕ್ಕೆಲುಬುಗಳು ಅಥವಾ ಹೊಟ್ಟೆಯ ಬಳಿ ಹಠಾತ್ ನೋವು
  • ಮೂತ್ರ ವಿಸರ್ಜಿಸುವಾಗ ಉರಿಯುವ ಸಂವೇದನೆ
  • ಆಗಾಗ ಮೂತ್ರ ವಿಸರ್ಜನೆ
  • ಮೂತ್ರದಲ್ಲಿ ರಕ್ತ
  • ಮೂತ್ರ ವಾಸನೆಯಾಗಿರುವುದು
  • ವಾಂತಿ, ವಾಕರಿಕೆ, ಇತ್ಯಾದಿ

ಕಿಡ್ನಿಸ್ಟೋನ್ ಗೆ ಪರಿಹಾರಗಳೇನು?

  • ಸಾಕಷ್ಟು ನೀರು ಕುಡಿಯಿರಿ.
  • ಸಮತೋಲಿತ ಆಹಾರವನ್ನು ಸೇವಿಸಿ.
  • ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ.
  • ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ.
  • ಲಕ್ಷಣಗಳು ಕಾಣಿಸಿಕೊಂಡರೆ ತಜ್ಞರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ