AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲೇಕೆ ಕಿಡ್ನಿಸ್ಟೋನ್ ಹೆಚ್ಚಾಗಿ ಕಂಡುಬರುತ್ತದೆ? ವೈದ್ಯರು ನೀಡಿದ ಪ್ರಮುಖ ಕಾರಣ ಇಲ್ಲಿದೆ

Kidney Stone Cause: ಚಳಿಗಾಲದಲ್ಲಿ ವಿವಿಧ ರೀತಿಯ ಕಾಯಿಲೆಗಳು ಕಂಡುಬರುವುದು ಸಾಮಾನ್ಯ. ಅದರಲ್ಲಿಯೂ ಕಿಡ್ನಿಸ್ಟೋನ್ ಅಪಾಯವೂ ತುಸು ಹೆಚ್ಚೆ ಇರುತ್ತದೆ. ಹಾಗಾಗಿ ಈ ವಿಷಯದಲ್ಲಿ ಜಾಗರೂಕರಾಗಿರುವುದು ಬಹಳ ಒಳ್ಳೆಯದು. ಆದರೆ ಈ ಸಮಸ್ಯೆಗೆ ಕಂಡುಬರುವುದಕ್ಕೆ ಅದರಲ್ಲಿಯೂ ಈ ಸಮಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುದಕ್ಕೆ ಹಲವಾರು ನಿರ್ದಿಷ್ಟ ಕಾರಣಗಳಿವೆ. ಹೌದು, ಈ ಬಗ್ಗೆ ಡಾ. ಹಿಮಾಂಶು ಶರ್ಮಾ ಎಂಬುವವರು ಮಾಹಿತಿ ನೀಡಿದ್ದು, ಈ ರೀತಿಯಾಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ವಿವರಣೆ ನೀಡಿದ್ದಾರೆ.

ಚಳಿಗಾಲದಲ್ಲೇಕೆ ಕಿಡ್ನಿಸ್ಟೋನ್ ಹೆಚ್ಚಾಗಿ ಕಂಡುಬರುತ್ತದೆ? ವೈದ್ಯರು ನೀಡಿದ ಪ್ರಮುಖ ಕಾರಣ ಇಲ್ಲಿದೆ
ಚಳಿಗಾಲದಲ್ಲಿ ಕಿಡ್ನಿಸ್ಟೋನ್ ಕಂಡುಬರುವುದಕ್ಕೆ ಕಾರಣ
ಪ್ರೀತಿ ಭಟ್​, ಗುಣವಂತೆ
|

Updated on: Nov 27, 2025 | 3:03 PM

Share

ಇತ್ತೀಚಿನ ದಿನಗಳಲ್ಲಿ, ಕಿಡ್ನಿಸ್ಟೋನ್ (Kidney Stone) ಒಂದು ಪ್ರಮುಖ ಸಮಸ್ಯೆಯಾಗಿದೆ. ಮೂತ್ರಪಿಂಡದಲ್ಲಿ ಸಂಗ್ರಹವಾದ ಖನಿಜಗಳು ಸೇರಿ ಹರಳುಗಳನ್ನು ರೂಪಿಸಿದಾಗ, ಅದನ್ನು ಮೂತ್ರಪಿಂಡದ ಕಲ್ಲು ಅಥವಾ ಕಿಡ್ನಿಸ್ಟೋನ್ ಎಂದು ಕರೆಯಲಾಗುತ್ತದೆ. ಇವು ಮೂತ್ರನಾಳದ ಮೂಲಕ ಹಾದುಹೋಗುವಾಗ, ತೀವ್ರವಾದ ನೋವು, ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿ ಮತ್ತು ಇತರ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಅದರಲ್ಲಿಯೂ ಈ ರೀತಿಯ ಸಮಸ್ಯೆ ಚಳಿಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಈ ಬಗ್ಗೆ ಡಾ. ಹಿಮಾಂಶು ಶರ್ಮಾ (Dr. Himashu Sharma) ಎಂಬುವವರು ಮಾಹಿತಿ ನೀಡಿದ್ದು, ಈ ರೀತಿಯಾಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ವಿವರಣೆ ನೀಡಿದ್ದಾರೆ.

ನೀರಿನ ಕೊರತೆ: ಚಳಿಗಾಲದಲ್ಲಿ, ಹೆಚ್ಚಿನವರು ನೀರು ಕುಡಿಯುವುದನ್ನು ಕಡಿಮೆ ಮಾಡುತ್ತಾರೆ. ಇದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಪರಿಣಾಮವಾಗಿ, ಖನಿಜಗಳು ಮತ್ತು ಲವಣಗಳು ಮೂತ್ರದಲ್ಲಿ ಸಂಗ್ರಹವಾಗಿ ಕಿಡ್ನಿಸ್ಟೋನ್ ಸಾಧ್ಯತೆ ಹೆಚ್ಚಾಗುತ್ತದೆ.

ದೈಹಿಕ ಚಟುವಟಿಕೆ: ಚಳಿಗಾಲದಲ್ಲಿ, ವ್ಯಾಯಾಮ, ನಡಿಗೆ ಮಾಡುವವರ ಸಂಖ್ಯೆ ಕಡಿಮೆಯಾಗುತ್ತದೆ. ಪರಿಣಾಮವಾಗಿ, ದೇಹದಲ್ಲಿನ ಕ್ಯಾಲ್ಸಿಯಂ ಮಟ್ಟವು ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ, ಮೂತ್ರಪಿಂಡಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದು ಕಿಡ್ನಿಸ್ಟೋನ್ ರಚನೆಗೆ ಕಾರಣವಾಗುತ್ತದೆ.

ಕೊಬ್ಬಿನಾಂಶವಿರುವ ಆಹಾರಗಳು: ಚಳಿಗಾಲದಲ್ಲಿ, ಜನರು ಹೆಚ್ಚೆಚ್ಚು ಆಹಾರವನ್ನು ಸೇವಿಸುತ್ತಾರೆ. ಈ ರೀತಿ ಹುರಿದ, ಎಣ್ಣೆಯುಕ್ತ ಮತ್ತು ಉಪ್ಪಿನ ಅಂಶವಿರುವ ಆಹಾರ ಸೇವನೆಯ ಪ್ರಮಾಣ ಹೆಚ್ಚಾದಾಗ ಕಿಡ್ನಿಸ್ಟೋನ್ ಪ್ರಕರಣ ಕಂಡುಬರುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲೇಕೆ ಕ್ಯಾಪ್ಸಿಕಂ ಅನ್ನು ಹೆಚ್ಚೆಚ್ಚು ಸೇವಿಸಬೇಕು? ಇದರ ಹಿಂದಿದೆ ಮಹತ್ವದ ಕಾರಣ

ಕಿಡ್ನಿಸ್ಟೋನ್ ಲಕ್ಷಣಗಳು

  • ತೀವ್ರ ಹೊಟ್ಟೆ ನೋವು
  • ಪಕ್ಕೆಲುಬುಗಳು ಅಥವಾ ಹೊಟ್ಟೆಯ ಬಳಿ ಹಠಾತ್ ನೋವು
  • ಮೂತ್ರ ವಿಸರ್ಜಿಸುವಾಗ ಉರಿಯುವ ಸಂವೇದನೆ
  • ಆಗಾಗ ಮೂತ್ರ ವಿಸರ್ಜನೆ
  • ಮೂತ್ರದಲ್ಲಿ ರಕ್ತ
  • ಮೂತ್ರ ವಾಸನೆಯಾಗಿರುವುದು
  • ವಾಂತಿ, ವಾಕರಿಕೆ, ಇತ್ಯಾದಿ

ಕಿಡ್ನಿಸ್ಟೋನ್ ಗೆ ಪರಿಹಾರಗಳೇನು?

  • ಸಾಕಷ್ಟು ನೀರು ಕುಡಿಯಿರಿ.
  • ಸಮತೋಲಿತ ಆಹಾರವನ್ನು ಸೇವಿಸಿ.
  • ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ.
  • ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ.
  • ಲಕ್ಷಣಗಳು ಕಾಣಿಸಿಕೊಂಡರೆ ತಜ್ಞರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು