AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲುಬುಗಳಲ್ಲಿ ನೋವು ಕಂಡುಬರುವುದಕ್ಕೆ ಈ ವಿಟಮಿನ್ ಕೊರತೆಯೇ ಕಾರಣ? ಇದನ್ನು ತಡೆಗಟ್ಟಲು ಸಿಂಪಲ್ ಟ್ರಿಕ್ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ, ಅನೇಕರು ಮೂಳೆ ನೋವಿನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಇದಕ್ಕೆ ಪ್ರಮುಖ ಕಾರಣ ದೇಹದಲ್ಲಿನ ಜೀವಸತ್ವಗಳ ಕೊರತೆಯಾಗಿರಬಹುದು. ಹಲವರು ಇದನ್ನು ಸಾಮಾನ್ಯ ದಣಿವು ಅಥವಾ ವಯಸ್ಸಿನ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಆ ರೀತಿ ಮಾಡುವುದು ಸರಿಯಲ್ಲ. ಹಾಗಾದರೆ ಯಾವ ವಿಟಮಿನ್ ಕೊರತೆಯು ಈ ಸಮಸ್ಯೆಗೆ ಕಾರಣವಾಗಿರಬಹುದು, ಈ ರೀತಿಯ ಕೊರತೆ ನೀಗಿಸಿಕೊಳ್ಳುವುದು ಹೇಗೆ, ಎಲುಬು ಗಟ್ಟಿಯಾಗಿರಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಎಲುಬುಗಳಲ್ಲಿ ನೋವು ಕಂಡುಬರುವುದಕ್ಕೆ ಈ ವಿಟಮಿನ್ ಕೊರತೆಯೇ ಕಾರಣ? ಇದನ್ನು ತಡೆಗಟ್ಟಲು ಸಿಂಪಲ್ ಟ್ರಿಕ್ ಇಲ್ಲಿದೆ
Bone PainImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 07, 2026 | 9:55 PM

Share

ಇತ್ತೀಚಿನ ದಿನಗಳಲ್ಲಿ ಎಲುಬು ನೋವು ಮತ್ತು ದೇಹದ ದುರ್ಬಲತೆ ಸಮಸ್ಯೆಗಳು ಅನೇಕರಲ್ಲಿ ಹೆಚ್ಚಾಗಿ ಕಾಣಿಸುತ್ತಿವೆ. ಹಲವರು ಇದನ್ನು ಸಾಮಾನ್ಯ ದಣಿವು ಅಥವಾ ವಯಸ್ಸಿನ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ವೈದ್ಯರ ಪ್ರಕಾರ, ದೇಹದಲ್ಲಿ ಅಗತ್ಯ ವಿಟಮಿನ್ (Vitamin Deficiencies) ಮತ್ತು ಖನಿಜಗಳ ಕೊರತೆ ಕೂಡ ಎಲುಬು ನೋವಿಗೆ ಪ್ರಮುಖ ಕಾರಣವಾಗಬಹುದು. ತಜ್ಞರ ಪ್ರಕಾರ, ವಿಶೇಷವಾಗಿ ವಿಟಮಿನ್ ಡಿ ಕೊರತೆಯು ಎಲುಬು ನೋವಿಗೆ ಪ್ರಮುಖ ಕಾರಣವಾಗಿದೆ. ವಿಟಮಿನ್ ಡಿ ದೇಹದಲ್ಲಿ ಕ್ಯಾಲ್ಸಿಯಂ ಪೋಷಣೆಗೆ ಸಹಾಯ ಮಾಡುತ್ತದೆ. ಇದು ಎಲುಬುಗಳನ್ನು ಗಟ್ಟಿಯಾಗಿಡಲು ಅಗತ್ಯವಾದ ಪೋಷಕಾಂಶವಾಗಿದೆ. ಇದರ ಕೊರತೆಯಿಂದ ಎಲುಬುಗಳಲ್ಲಿ ನೋವು (Bone Pain), ದುರ್ಬಲತೆ ಮತ್ತು ಗಟ್ಟಿತನದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹಾಗಾದರೆ ಈ ರೀತಿಯ ಕೊರತೆ ನೀಗಿಸಿಕೊಳ್ಳುವುದು ಹೇಗೆ, ಎಲುಬು ಗಟ್ಟಿಯಾಗಿರಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇತರ ವಿಟಮಿನ್ ಕೊರತೆಯೂ ಸಮಸ್ಯೆಗೆ ಕಾರಣ:

ವೈದ್ಯರು ತಿಳಿಸುವಂತೆ, ಕ್ಯಾಲ್ಸಿಯಂ ಮತ್ತು ವಿಟಮಿನ್ ಬಿ12 ಕೊರತೆಯೂ ದೇಹದ ಸ್ನಾಯುಗಳು ಮತ್ತು ಎಲುಬುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ವಿಟಮಿನ್ C ಕೊರತೆಯಿಂದ ದೇಹದಲ್ಲಿ ದೌರ್ಬಲ್ಯ, ಸಂಧಿ ನೋವು ಮತ್ತು ದಣಿವು ಹೆಚ್ಚಾಗಬಹುದು. ಈ ರೀತಿಯ ಕೊರತೆ ದೀರ್ಘಕಾಲ ಮುಂದುವರಿದರೆ ಎಲುಬುಗಳು ದುರ್ಬಲವಾಗಿ, ಮುರಿತದ ಅಪಾಯವೂ ಹೆಚ್ಚಾಗುತ್ತದೆ.

ಇದನ್ನೂ ಓದಿ: ಡಾರ್ಕ್ ಸ್ಕಿನ್ ಮತ್ತು ಒಬೆಸಿಟಿ ಇರುವವರಲ್ಲಿ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಂಡು ಬರುವುದಕ್ಕೆ ಕಾರಣ ಏನ್ ಗೊತ್ತಾ?

ವಿಟಮಿನ್ ಕೊರತೆಯನ್ನು ಹೇಗೆ ಪೂರೈಸಬೇಕು?

ಸಾಮಾನ್ಯವಾಗಿ ವಿಟಮಿನ್ ಕೊರತೆಯನ್ನು ನಿವಾರಿಸಲು ಸಮತೋಲನಯುತ ಮತ್ತು ಪೌಷ್ಟಿಕ ಆಹಾರ ಸೇವನೆ ಬಹಳ ಮುಖ್ಯ. ಹಾಲು, ಮೊಸರು, ಹಸಿರು ತರಕಾರಿ, ಮೊಟ್ಟೆ, ಹಣ್ಣು ಮತ್ತು ಒಣಹಣ್ಣುಗಳು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತವೆ. ಪ್ರತಿದಿನ ಕೆಲವು ಸಮಯ ಸೂರ್ಯನ ಬೆಳಕಿನಲ್ಲಿ ಇರುವುದರಿಂದ ವಿಟಮಿನ್ ಡಿ ಪಡೆದುಕೊಳ್ಳಬಹುದು. ಕೊರತೆ ಹೆಚ್ಚು ಇದ್ದರೆ ವೈದ್ಯರ ಸಲಹೆಯ ಮೇರೆಗೆ ಸಪ್ಲಿಮೆಂಟ್ಸ್ ತೆಗೆದುಕೊಳ್ಳಬಹುದು. ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಕೂಡ ಅಗತ್ಯ.

ಎಲುಬು ಗಟ್ಟಿಯಾಗಿರಲು ಏನು ಮಾಡಬೇಕು?

ಸರಿಯಾದ ಆಹಾರದ ಜೊತೆಗೆ ನಿಯಮಿತ ವ್ಯಾಯಾಮವೂ ಎಲುಬುಗಳ ಆರೋಗ್ಯಕ್ಕೆ ಅಗತ್ಯವಾಗಿದೆ. ದಿನನಿತ್ಯ ನಡೆಯುವುದು, ಲಘು ವ್ಯಾಯಾಮ ಮಾಡುವುದು ಎಲುಬುಗಳನ್ನು ಗಟ್ಟಿಗೊಳಿಸಲು ಸಹಕಾರಿಯಾಗಿದೆ. ಧೂಮಪಾನ ಮತ್ತು ಹೆಚ್ಚು ಜಂಕ್ ಫುಡ್ ಸೇವನೆಯನ್ನು ತಪ್ಪಿಸುವುದು ಉತ್ತಮ. ಒಟ್ಟಾರೆ, ದೇಹದಲ್ಲಿ ಅಗತ್ಯ ವಿಟಮಿನ್‌ಗಳ ಸಮತೋಲನ ಕಾಪಾಡಿಕೊಳ್ಳುವುದರಿಂದ ಎಲುಬು ನೋವು ಮತ್ತು ದುರ್ಬಲತೆ ಸಮಸ್ಯೆಗಳನ್ನು ತಡೆಗಟ್ಟಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್