AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Tips: ಚಳಿಗಾಲದಲ್ಲಿ ನೀವು ಮಾಡುವ ತಪ್ಪುಗಳು ಸಾವಿಗೆ ಕಾರಣವಾಗಬಹುದು

ಚಳಿಗಾಲ(Winter)ದಲ್ಲಿ ನಮ್ಮದು ತಪ್ಪು ಇದ್ದೋ ಇಲ್ಲದೆಯೋ ಹಲವು ರೋಗಗಳು ಆವರಿಸಿಬಿಡುತ್ತದೆ. ಚಳಿಗಾಲದಲ್ಲಿ ನೆಗಡಿ-ಕೆಮ್ಮು, ಜ್ವರ ಸೇರಿದಂತೆ ಅನೇಕ ರೋಗಗಳ ಅಪಾಯವು ಹೆಚ್ಚಾಗುತ್ತದೆ.

Winter Tips: ಚಳಿಗಾಲದಲ್ಲಿ ನೀವು ಮಾಡುವ ತಪ್ಪುಗಳು ಸಾವಿಗೆ ಕಾರಣವಾಗಬಹುದು
Heart AttackImage Credit source: Namaste Talangana
TV9 Web
| Edited By: |

Updated on: Nov 10, 2022 | 2:20 PM

Share

ಚಳಿಗಾಲ(Winter)ದಲ್ಲಿ ನಮ್ಮದು ತಪ್ಪು ಇದ್ದೋ ಇಲ್ಲದೆಯೋ ಹಲವು ರೋಗಗಳು ಆವರಿಸಿಬಿಡುತ್ತದೆ. ಚಳಿಗಾಲದಲ್ಲಿ ನೆಗಡಿ-ಕೆಮ್ಮು, ಜ್ವರ ಸೇರಿದಂತೆ ಅನೇಕ ರೋಗಗಳ ಅಪಾಯವು ಹೆಚ್ಚಾಗುತ್ತದೆ. ಇವುಗಳಲ್ಲಿ ಅತ್ಯಂತ ಅಪಾಯಕಾರಿ ಎಂದರೆ ಹೃದಯಾಘಾತ(Heart Attack).  ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ. ಆದ್ದರಿಂದ, ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯಂತ ಮಹತ್ವದ್ದಾಗಿದೆ.

ಇಂದು ನಾವು ನಿಮಗೆ ಹೃದಯಾಘಾತವನ್ನು ತಪ್ಪಿಸುವ ಮಾರ್ಗಗಳನ್ನು ತಿಳಿಸಲಿದ್ದೇವೆ, ಅದರ ಮೂಲಕ ನೀವು ನಿಮ್ಮ ಹೃದಯವನ್ನು ಬಲಪಡಿಸಬಹುದು ಮತ್ತು ಹೃದಯಾಘಾತದ ಅಪಾಯವನ್ನು ಸಹ ತಪ್ಪಿಸಬಹುದು. ವಿಶೇಷ ಸಲಹೆಗಳನ್ನು ತಿಳಿಯಿರಿ.

ಯಾರಿಗೆಲ್ಲಾ ಹೃದಯಾಘಾತದ ಅಪಾಯ ಹೆಚ್ಚು ಯುರೋಪಿಯನ್ ಜರ್ನಲ್ ಆಫ್ ಎಪಿಡೆಮಿಯಾಲಜಿಯಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಹೊಂದಿರುವವರು ಅಥವಾ ಬೊಜ್ಜು ಸಮಸ್ಯೆಯಿಂದ ಬಳಲುತ್ತಿರುವವರು ಅಥವಾ ಅಧಿಕ ರಕ್ತದೊತ್ತಡ ಉಂಟಾಗಿ ಹೃದಯಾಘಾತವಾಗುವ ಸಾಧ್ಯತೆ ಇರುತ್ತದೆ.

ಚಳಿಗಾಲದಲ್ಲಿ, ನಮ್ಮ ರಕ್ತನಾಳಗಳ ಕಿರಿದಾಗುವಿಕೆಯಿಂದಾಗಿ, ಒತ್ತಡವು ಹೆಚ್ಚಾಗುತ್ತದೆ ಮತ್ತು ರಕ್ತದೊತ್ತಡವೂ ಹೆಚ್ಚಾಗಲು ಪ್ರಾರಂಭಿಸುತ್ತದೆ. ಬಿಪಿ ಹೆಚ್ಚಾದಂತೆ ಹೃದಯಾಘಾತ ಪ್ರಕರಣಗಳು ಮುನ್ನೆಲೆಗೆ ಬರಲು ಪ್ರಾರಂಭಿಸುತ್ತವೆ. ತಜ್ಞರ ಪ್ರಕಾರ, ಚಳಿಗಾಲದಲ್ಲಿ, ಜನರ ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯು ರೂಪುಗೊಳ್ಳಲು ಪ್ರಾರಂಭಿಸುತ್ತದೆ, ಇದರಿಂದಾಗಿ ಹೃದಯಾಘಾತದ ಸಾಧ್ಯತೆಯೂ ಹೆಚ್ಚಾಗುತ್ತದೆ.

ಬೆಳಗ್ಗೆ ಹೃದಯಾಘಾತದ ಅಪಾಯ ಹೆಚ್ಚು ಶೀತ ವಾತಾವರಣದಲ್ಲಿ, ಜನರು ಬೆಳಗ್ಗೆ ಹೆಚ್ಚಿನ ಸಂದರ್ಭಗಳಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಾರೆ. ಚಳಿಗಾಲದಲ್ಲಿ, ಬೆಳಗ್ಗೆ ತಾಪಮಾನದ ಕುಸಿತದಿಂದಾಗಿ, ದೇಹದ ಉಷ್ಣತೆಯು ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ, ದೇಹದ ಉಷ್ಣತೆಯನ್ನು ಸಮೀಕರಿಸುವಾಗ ರಕ್ತದೊತ್ತಡವು ಹೆಚ್ಚಾಗಬಹುದು, ಇದು ಹೃದಯಾಘಾತಕ್ಕೆ ಕಾರಣವಾಗುತ್ತದೆ.

ಹೃದಯದ ಆರೋಗ್ಯವನ್ನು ಹೀಗೆ ನೋಡಿಕೊಳ್ಳಿ 1. ಚಳಿಗಾಲದಲ್ಲಿ ಬೆಳಿಗ್ಗೆ 6 ರಿಂದ 7 ರ ನಡುವೆ ವಾಕಿಂಗ್ ಹೋಗಬೇಡಿ. ಬೆಳಿಗ್ಗೆ 9 ಗಂಟೆಯ ನಂತರವೇ ವಾಕಿಂಗ್‌ಗೆ ಹೊರಡಿ. 2. ಕಡಿಮೆ ಉಪ್ಪು ತಿನ್ನಿರಿ. 3. ಸೂರ್ಯನ ಕಿರಣಗಳೊಂದಿಗೆ ಗರಿಷ್ಠ ಸಮಯವನ್ನು ಕಳೆಯಿರಿ. 4. ದಿನನಿತ್ಯ ಸ್ವಲ್ಪ ವ್ಯಾಯಾಮ ಮಾಡಿ. 5. ಆಹಾರದ ಮೇಲೆ ನಿಯಂತ್ರಣವಿರಲಿ ಮತ್ತು ಕರಿದ, ಹುರಿದ, ಸಿಹಿ ತಿನ್ನುವುದನ್ನು ತಪ್ಪಿಸಿ. 6. ತಣ್ಣನೆಯ ಬಟ್ಟೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ. ಚಳಿಗಾಲದಲ್ಲಿ ನಿಮ್ಮನ್ನು ಮುಚ್ಚಿಕೊಳ್ಳುವುದು ಬಹಳ ಮುಖ್ಯ. 7. ರಕ್ತದೊತ್ತಡವನ್ನು ನಿಯಮಿತವಾಗಿ ಪರಿಶೀಲಿಸುವುದು ಮುಖ್ಯ. ಅದರಲ್ಲೂ ಬಿಪಿ ಹೆಚ್ಚು ಇರುವವರು ಎಚ್ಚರಿಕೆಯಿಂದಿರಬೇಕು.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ