AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pneumonia: ಚಳಿಗಾಲದಲ್ಲಿ ನ್ಯುಮೋನಿಯಾಗೆ ಬಲಿಯಾಗಬೇಡಿ, ಈ ಲಕ್ಷಣ ಕಂಡು ಬಂದರೆ ವೈದ್ಯರನ್ನು ಭೇಟಿಯಾಗಿ

ಸಾಕಷ್ಟು ಜನರು ಶೀತ, ಕೆಮ್ಮು, ಕಫ, ಜ್ವರದಂತಹ ಸಮಸ್ಯೆಗಳು ಚಳಿಗಾಲದಲ್ಲಿ ಸಾಮಾನ್ಯವೆಂದು ಪರಿಗಣಿಸುತ್ತಾರೆ. ಸಾಮಾನ್ಯವೆಂದು ನಿರ್ಲಕ್ಷ್ಯಿಸುತ್ತಾ ಹೋದರೆ ನೀವು ನ್ಯುಮೋನಿಯಾಕ್ಕೆ ಗುರಿಯಾಗಬಹುದು. ಅದರಲ್ಲೂ ಮಕ್ಕಳ ಮೇಲೆ ಇದರ ಪರಿಣಾಮ ತೀವ್ರವಾಗಿರುತ್ತದೆ. ನ್ಯುಮೋನಿಯಾದ ಲಕ್ಷಣಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Pneumonia: ಚಳಿಗಾಲದಲ್ಲಿ ನ್ಯುಮೋನಿಯಾಗೆ ಬಲಿಯಾಗಬೇಡಿ, ಈ ಲಕ್ಷಣ ಕಂಡು ಬಂದರೆ ವೈದ್ಯರನ್ನು ಭೇಟಿಯಾಗಿ
Pneumonia
ಅಕ್ಷತಾ ವರ್ಕಾಡಿ
|

Updated on: Dec 31, 2023 | 4:16 PM

Share

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ, ವಿಶೇಷವಾಗಿ ಆಹಾರ ಪದ್ಧತಿ. ನೀವು ಆರೋಗ್ಯದ ಬಗ್ಗೆ ನಿರ್ಲಕ್ಷ್ಯಿಸುತ್ತಾ ಹೋದಂತೆ ವೈರಲ್​​ ಸೋಂಕಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಿದೆ. ನ್ಯುಮೋನಿಯಾದ ಅನೇಕ ಪ್ರಕರಣಗಳು ಚಳಿಗಾಲದಲ್ಲಿ ಕಂಡುಬರುತ್ತವೆ ಮತ್ತು ಪರಿಸ್ಥಿತಿಯು ಗಂಭೀರವಾಗಿದ್ದರೆ, ಸಾವಿನ ಅಪಾಯವಿರುತ್ತದೆ. ಚಿಕ್ಕ ಮಕ್ಕಳ ಬಗ್ಗೆ ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು. ಚಳಿಗಾಲದಲ್ಲಿ ಶೀತ ಮತ್ತು ಕೆಮ್ಮನ್ನು ಲಘುವಾಗಿ ತೆಗೆದುಕೊಳ್ಳಬಾರದು ಮತ್ತು ಕೆಲವು ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು, ಏಕೆಂದರೆ ಇವು ನ್ಯುಮೋನಿಯಾದ ಲಕ್ಷಣಗಳಾಗಿರಬಹುದು.

ಚಳಿಗಾಲದಲ್ಲಿ ತಾಪಮಾನ ಕಡಿಮೆಯಾದ ತಕ್ಷಣ, ನ್ಯುಮೋನಿಯಾ ಪ್ರಕರಣಗಳು ಹೆಚ್ಚಾಗುತ್ತವೆ, ಆದ್ದರಿಂದ ಜಾಗರೂಕರಾಗಿರುವುದು ಉತ್ತಮ. ವಾಸ್ತವವಾಗಿ, ನ್ಯುಮೋನಿಯಾದಲ್ಲಿ, ಶ್ವಾಸಕೋಶದಲ್ಲಿ ಸೋಂಕು ಪ್ರಾರಂಭವಾಗುತ್ತದೆ, ಇದರಿಂದ ಉಸಿರಾಟದ ತೊಂದರೆಗಳು ಉಂಟಾಗುತ್ತವೆ.

ಇದನ್ನೂ ಓದಿ: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?

ಉಸಿರಾಟದ ತೊಂದರೆ:

ನ್ಯುಮೋನಿಯಾ ನಿಮ್ಮ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಕಫದಿಂದಾಗಿ ನೀವು ಎದೆಯಲ್ಲಿ ಬಿಗಿತ ಮತ್ತು ನೋವನ್ನು ಅನುಭವಿಸಿದರೆ,ಅದು ನ್ಯುಮೋನಿಯಾದ ಲಕ್ಷಣವಾಗಿರಬಹುದು.

ಜ್ವರವನ್ನು ನಿರ್ಲಕ್ಷಿಸಬೇಡಿ:

ನ್ಯುಮೋನಿಯಾದ ಆರಂಭಿಕ ರೋಗಲಕ್ಷಣಗಳಲ್ಲಿ ಒಂದು ದೇಹದ ಉಷ್ಣಾಂಶದಲ್ಲಿ ಹಠಾತ್ ಹೆಚ್ಚಳ ಅಥವಾ ಮರುಕಳಿಸುವ ಜ್ವರ. ಈ ರೀತಿಯ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ನಿರ್ಲಕ್ಷಿಸಬೇಡಿ. ದೇಹದ ಉಷ್ಣತೆಯು 100.4 ಡಿಗ್ರಿ ಫ್ಯಾರನ್‌ಹೀಟ್‌ಗಿಂತ ಹೆಚ್ಚಿದ್ದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಇಲ್ಲದಿದ್ದರೆ ಪರಿಸ್ಥಿತಿ ತುಂಬಾ ಗಂಭೀರವಾಗಬಹುದು.

ಹಸಿವಿನ ನಷ್ಟ ಮತ್ತು ಆಯಾಸ:

ನೆಗಡಿ, ಕೆಮ್ಮು, ನೋವಿದ್ದು, ಹಸಿವೆಯಲ್ಲಿ ಬದಲಾವಣೆ ಇದೆ ಅಂದರೆ ತಿನ್ನಲು ಮನಸ್ಸಾಗದಿದ್ದರೆ ಸಾಮಾನ್ಯವೆಂದು ನಿರ್ಲಕ್ಷ್ಯಿಸದಿರಿ. ಈ ರೀತಿಯ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!